)
ಹುಬ್ಬಳ್ಳಿ:
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ತಾಲೂಕು ಹಾಗೂ ಜಿಲ್ಲೆಗೆ ಆಹಾರ ಸುರಕ್ಷತಾ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದಿರುವುದು ಕಂಡುಬಂದರೆ ಅವರ ವಿರುದ್ಧವೂ ಕ್ರಮಕೈಗೊಳ್ಳಲಾಗುವುದು. ಅಧಿಕಾರಿಗಳ ಗಮನಕ್ಕೆ ಬಾರದಂತೆ ಯಾವುದೇ ಕೆಲಸ ನಡೆಯಲು ಸಾಧ್ಯವಿಲ್ಲ. ನಕಲಿ ವೈದ್ಯರ ಪ್ರಕರಣ ಪತ್ತೆಯಾದರೆ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳೇ ಹೊಣೆ ಎಂದು ಹೇಳಿದರು.
ನಕಲಿ ಔಷಧಿಗಳ ಮಾರಾಟದ ಕುರಿತು ಮಾಹಿತಿ ಬಂದ ತಕ್ಷಣ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರ ಆರೋಗ್ಯದ ವಿಚಾರದಲ್ಲಿ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಆನ್ಲೈನ್ನಲ್ಲಿ ಔಷಧಿ ಮಾರಾಟಕ್ಕೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ. ಈ ಕುರಿತು ಬೆಂಗಳೂರಿನಲ್ಲಿ ರಾಷ್ಟ್ರಮಟ್ಟದ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಲಾಗುವುದು ಎಂದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಇಬ್ಬರೂ ಸೇರಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಇಡಿ ಸೇರಿದಂತೆ ಕೇಂದ್ರದ ಆಧೀನದಲ್ಲಿರುವ ತನಿಖೆ ಸಂಸ್ಥೆಗಳಿಗೆ ಬರೀ ಕಾಂಗ್ರೆಸ್ಸಿಗರೇ ಟಾರ್ಗೆಟ್ ಆಗುತ್ತಿದ್ದಾರೆಂದು ಸಚಿವ ಯು.ಟಿ.ಖಾದರ್ ಟೀಕಿಸಿದರು.ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸತೀಶ ಜಾರಕಿಹೊಳಿ ಸಣ್ಣ ಸಮುದಾಯದಿಂದ ಬಂದಂಥ ರಾಜಕಾರಣಿ. ದೊಡ್ಡ ಸ್ಥಾನಕ್ಕೇರಿದ್ದಾರೆ. ಈಗ ಇ.ಡಿ. ದಾಳಿ ನಡೆದಿದೆ. ಆದರೆ ಕಾಂಗ್ರೆಸ್ಸಿಗರೇ ಟಾರ್ಗೆಟ್ ಆಗುತ್ತಿದ್ದಾರೆ ಎಂದರು.