ಜಾಬ್‌ಕಾರ್ಡ್ ಮೇಳದ ಯಶಸ್ವಿಗೆ ಜಿಪಂ ಸಿದ್ಧತೆ

KannadaprabhaNewsNetwork |  
Published : Aug 15, 2026, 02:15 AM IST
1.ಬೆಂ.ದಕ್ಷಿಣ ಜಿಲ್ಲಾ ಪಂಚಾಯಿತಿ  | Kannada Prabha

ಸಾರಾಂಶ

ರಾಮನಗರ: ರಾಜ್ಯದಲ್ಲಿ ಬರ ಆವರಿಸಿರುವುದರಿಂದ ಗ್ರಾಮೀಣರು ನಗರ ಪ್ರದೇಶಗಳತ್ತ ವಲಸೆ ಹೋಗುವುದನ್ನು ತಪ್ಪಿಸಲು ಆ.15ರಿಂದ ಸೆಪ್ಟೆಂಬರ್ 15ರವರೆಗೆ ವಿಬಿ ಜಿ ರಾಮ್ ಜಿ ಯೋಜನೆಯಡಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಜಾಬ್ ಕಾರ್ಡ್ ಮೇಳವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿಯೂ ಪರಿಣಾಮಕಾರಿಯಾಗಿ ಯಶಸ್ವಿಗೊಳಿಸಲು ಜಿಪಂ ಅಗತ್ಯ ಸಿದ್ಧತೆ ಕೈಗೊಂಡಿದೆ

ರಾಮನಗರ: ರಾಜ್ಯದಲ್ಲಿ ಬರ ಆವರಿಸಿರುವುದರಿಂದ ಗ್ರಾಮೀಣರು ನಗರ ಪ್ರದೇಶಗಳತ್ತ ವಲಸೆ ಹೋಗುವುದನ್ನು ತಪ್ಪಿಸಲು ಆ.15ರಿಂದ ಸೆಪ್ಟೆಂಬರ್ 15ರವರೆಗೆ ವಿಬಿ ಜಿ ರಾಮ್ ಜಿ ಯೋಜನೆಯಡಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಜಾಬ್ ಕಾರ್ಡ್ ಮೇಳವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿಯೂ ಪರಿಣಾಮಕಾರಿಯಾಗಿ ಯಶಸ್ವಿಗೊಳಿಸಲು ಜಿಪಂ ಅಗತ್ಯ ಸಿದ್ಧತೆ ಕೈಗೊಂಡಿದೆ.

ಜಿಲ್ಲೆಯಲ್ಲಿರುವ 1,86,005 ನೋಂದಾಯಿತ ಉದ್ಯೋಗ ಚೀಟಿಗಳಲ್ಲಿ ಕೇವಲ 1,02,884 ಕುಟುಂಬಗಳು ಮಾತ್ರ ಸಕ್ರಿಯವಾಗಿ ಪಾಲ್ಗೊಳ್ಳುತ್ತಿವೆ. ಬಾಕಿ ಉಳಿದಿರುವ ಕುಟುಂಬಗಳನ್ನು ತಲುಪುವ ನಿಟ್ಟಿನಲ್ಲಿ ಹಾಗೂ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡುವ ಸಲುವಾಗಿ ಜಿಲ್ಲೆಯ ಎಲ್ಲ 126 ಗ್ರಾಮ ಪಂಚಾಯಿತಿಗಳಲ್ಲಿ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ.

ಪ್ರಸ್ತುತ ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕೃಷಿ ಚಟುವಟಿಕೆಗಳು ನಡೆಯದೆ, ಸ್ಥಳೀಯವಾಗಿ ಉದ್ಯೋಗಾವಕಾಶಗಳು ಕ್ಷೀಣಿಸಿವೆ. ಇದರಿಂದ ಅವರ ಜೀವನೋಪಾಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ್ದು, ಇಂತಹವರಿಗೆ ಸ್ಥಳೀಯವಾಗಿ ಉದ್ಯೋಗ ಅವಕಾಶಗಳನ್ನು ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಾರ್ ಅಂಡ್ ಆಜೀವಿಕ ಮಿಷನ್(ಗ್ರಾಮೀಣ) ಯೋಜನೆಯಡಿ ಸ್ವಗ್ರಾಮದಲ್ಲೇ ಉದ್ಯೋಗ ಅವಕಾಶಗಳನ್ನು ಕಲ್ಪಿಸುವುದು ಮೇಳದ ಉದ್ದೇಶ.

ಎಲ್ಲ ಕೂಲಿಕಾರರಿಗೆ ಅಕುಶಲ ಕೆಲಸ:

ಜುಲೈ 1ರಿಂದ ಆರಂಭಗೊಂಡಿರುವ ವಿಜಿ ಜಿ ರಾಮ್ ಜಿ, ನೋಂದಾಯಿತ ಹಾಗೂ ಇ-ಕೆವೈಸಿ ಪೂರ್ಣಗೊಂಡಿರುವ ಎಲ್ಲಾ ಕೂಲಿಕಾರರಿಗೆ ಅಕುಶಲ ಕೆಲಸ ಒದಗಿಸಲಾಗುತ್ತಿದೆ. ರಾಜ್ಯದಲ್ಲಿರುವ ಒಟ್ಟು 69.51 ಲಕ್ಷ ನೋಂದಾಯಿತ ಉದ್ಯೋಗ ಚೀಟಿಗಳಲ್ಲಿ ಕೇವಲ 36.87 ಲಕ್ಷ ಕುಟುಂಬಗಳು ಮಾತ್ರ ಸಕ್ರಿಯವಾಗಿ ಪಾಲ್ಗೊಳ್ಳುತ್ತಿರುವುದು ಕಂಡುಬಂದಿದೆ. ಆದ್ದರಿಂದ, ಸಕ್ರಿಯ ಕುಟುಂಬಗಳ ಭಾಗವಹಿಸುವಿಕೆ ಹೆಚ್ಚಿಸಲು ಹಾಗೂ ಪ್ರತಿದಿನ ಕನಿಷ್ಠ 5 ಲಕ್ಷ ಮಾನವ ದಿನಗಳನ್ನು ಸೃಜಿಸುವ ಮೂಲಕ ಮಾಹೆಯಲ್ಲಿ ಒಟ್ಟು 1.50 ಕೋಟಿ ಮಾನವ ದಿನಗಳ ಸೃಜನೆಯ ಗುರಿ ಸಾಧಿಸಲು 2026ರ ಆ.15ರಿಂದ ಸೆ.15ರವರೆಗೆ ರಾಜ್ಯದ ಎಲ್ಲಾ ಗ್ರಾಪಂ ಮಟ್ಟದಲ್ಲಿ ''''''''ಜಾಬ್‌ಕಾರ್ಡ್ ಮೇಳ'''''''' ಆಯೋಜಿಸಲಾಗಿದೆ.

ಅಭಿಯಾನದ ಉದ್ದೇಶಗಳು:

ವಿಬಿ-ಜಿ ರಾಮ್ ಜಿ ಯೋಜನೆಯಡಿ ಲಭ್ಯವಿರುವ ಅಕುಶಲ ಕೆಲಸ ಹಾಗೂ ವೈಯಕ್ತಿಕ ಸವಲತ್ತುಗಳ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಿ, ಗ್ರಾಮೀಣ ಭಾಗದ ದುರ್ಬಲವರ್ಗದವರ ಭಾಗವಹಿಸುವಿಕೆ ಹೆಚ್ಚಿಸುವುದು. ಪ್ರತಿದಿನ ಕನಿಷ್ಠ 5 ಲಕ್ಷ ಮಾನವ ದಿನಗಳಂತೆ ಮಾಹೆಗೆ 1.50 ಕೋಟಿ ಮಾನವ ದಿನಗಳ ಕೆಲಸವನ್ನು ಗ್ರಾಮೀಣರಿಗೆ ಒದಗಿಸುವ ಮೂಲಕ ಅವರ ಅರ್ಥಿಕ ಹಾಗೂ ಜೀವನೋಪಾಯ ಭದ್ರತೆ ಕಾಯ್ದುಕೊಳ್ಳುವುದಾಗಿದೆ.

ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಲಸಂರಕ್ಷಣೆ, ಅಂತರ್ಜಲ ಮರುಪೂರಣ ಹಾಗೂ ದೀರ್ಘಕಾಲೀನ ಕಾಮಗಾರಿಗಳನ್ನು ಆದ್ಯತೆ ಮೇಲೆ ಅನುಷ್ಠಾನಗೊಳಿಸುವುದು. ಸ್ವಗ್ರಾಮದಲ್ಲೇ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಮೂಲಕ ಗ್ರಾಮೀಣರ ವಲಸೆ ತಡೆಯುವುದು ಜಾಬ್ ಕಾರ್ಡ್ ಮೇಳದ ಉದ್ದೇಶವಾಗಿದೆ.

ಕೋಟ್ ............

ಮನರೇಗಾ ಯೋಜನೆಯಡಿ ಉದ್ಯೋಗ ಚೀಟಿ ಇಲ್ಲದವರು ಗ್ರಾಪಂಗೆ ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್ ಹಾಗೂ ಆಧಾರ್ ಪ್ರತಿ ನೀಡಿ ವಿಬಿ ಜಿ ರಾಮ್ ಜಿ ಯೋಜನೆಯಡಿ ಹೊಸ ಉದ್ಯೋಗ ಚೀಟಿ ಪಡೆಯಬಹುದು. ಜಾಬ್‌ಕಾರ್ಡ್ ಹೊಂದಿದ್ದು, ಒಂದು ವೇಳೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣವಾಗಿರದಿದ್ದರೆ ಅಂತಹವರು ತಕ್ಷಣ ಇ-ಕೆವೈಸಿ ಮಾಡಿಸಿಕೊಳ್ಳಬೇಕು.

-ಅನ್ಮೋಲ್ ಜೈನ್ , ಸಿಇಒ, ಜಿಪಂ, ಬೆಂಗಳೂರು ದಕ್ಷಿಣ.

ಬಾಕ್ಸ್ ................

ಅಭಿಯಾನದಡಿ ಕೈಗೊಳ್ಳುವ ಕಾಮಗಾರಿಗಳು:

1.ಬರಪರಿಸ್ಥಿತಿ ನಿರ್ವಹಣಾ ಹಾಗೂ ಜಲ ಸಂರಕ್ಷಣಾ ಕಾಮಗಾರಿಗಳನ್ನು ಕೈಗೊಳ್ಳಬಹುದು. ರೈತರ ಜಮೀನಿನಲ್ಲಿ ಮಳೆ ನೀರು ಸಂರಕ್ಷಣೆಗಾಗಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಕನಿಷ್ಠ 10 ಫಲಾನುಭವಿಗಳಿಗೆ ಕೃಷಿ ಹೊಂಡ, ತೆರೆದ ಬಾವಿ, ಕೊಳವೆ ಬಾವಿ ಮರುಪೂರಣ ಘಟಕ ನಿರ್ಮಿಸಿಕೊಳ್ಳಲು ಅವಕಾಶ ನೀಡುವುದು.

2. ಗ್ರಾಮೀಣ ಕುಟುಂಬಗಳ ಜೀವನೋಪಾಯದ ವೈಯಕ್ತಿಕ ಕಾಮಗಾರಿಗಳಲ್ಲಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಕನಿಷ್ಠ 05 ಫಲಾನುಭವಿಗಳಿಗೆ ಜಾನುವಾರು ಶೆಡ್ ನಿರ್ಮಿಸಿಕೊಳ್ಳಲು ಆದ್ಯತೆ ನೀಡುವುದು.

3. ಸಾಂಪ್ರದಾಯಿಕ ಜಲಮೂಲಗಳು, ನಾಲಾಗಳಲ್ಲಿ ತಡೆಗೋಡೆಗಳ ನಿರ್ಮಾಣ, ಕಡಿಮೆ ಇಳುವರಿ ಇರುವ ಕುಡಿಯುವ ನೀರಿನ ಕೊಳವೆ ಬಾವಿಗಳ ಸುತ್ತ ಮರುಪೂರಣ ಘಟಕ ನಿರ್ಮಾಣ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು.

4. ವಿಬಿ- ಜಿ ರಾಮ್ ಜಿ ಯೋಜನೆಯಡಿ ಅನುಮತಿಸಿದ 318 ಕಾಮಗಾರಿಗಳನ್ನು ಅನುಷ್ಠಾನಿಸಲು ಅಗತ್ಯ ಕ್ರಮಕೈಗೊಳ್ಳುವುದು.

ಬಾಕ್ಸ್ ...............

ತಾಲೂಕುನೋಂದಣಿ ಜಾಬ್‌ಕಾರ್ಡ್‌ಸಕ್ರಿಯ ಕಾರ್ಡ್‌ಗಳು

ಚನ್ನಪಟ್ಟಣ42,64725,727

ಕನಕಪುರ53,59334,236

ಹಾರೋಹಳ್ಳಿ17,7578,757

ಮಾಗಡಿ40,32319,742

ರಾಮನಗರ31,68514,422

ಒಟ್ಟು1,86,0051,02,884

14ಕೆಆರ್ ಎಂಎನ್ 1,2.ಜೆಪಿಜಿ

1.ಬೆಂ.ದಕ್ಷಿಣ ಜಿಲ್ಲಾ ಪಂಚಾಯಿತಿ

2.ಅನ್ಮೋಲ್ ಜೈನ್ , ಸಿಇಒ, ಜಿಪಂ, ಬೆಂ.ದಕ್ಷಿಣ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಹಾರ ವಿತರಣೆಯಲ್ಲಿ ಲೋಪ ಕಂಡರೆ ಶಿಸ್ತು ಕ್ರಮ
ಪಿಯುಸಿ ವಿದ್ಯಾರ್ಥಿ ಜೀವನದ ಮುಖ್ಯ ಘಟ್ಟ: ಬಸವರಮಾನಂದ ಸ್ವಾಮೀಜಿ