ಕನ್ನಡಪ್ರಭ ವಾರ್ತೆ ಮಂಡ್ಯ
ಮಂಗಳವಾರ ಪಾಂಡವಪುರ ತಾಲೂಕು ಪಂಚಾಯ್ತಿ ಕಚೇರಿಗೆ ಭೇಟಿ ನೀಡಿ, ಮಹಿಳಾ ಸ್ವ ಸಹಾಯ ಸಂಘಗಳ ಆರ್ಥಿಕ ಸ್ವಾವಲಂಬನೆಗಾಗಿ ಅಕ್ಕ ಕೆಫೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಪಾಂಡವಪುರ ತಾಪಂ ಆವರಣದಲ್ಲಿ ಲಭ್ಯವಿರುವ ಖಾಲಿ ಜಾಗದಲ್ಲಿ ಅಕ್ಕ ಕೆಫೆ ಸ್ಥಾಪಿಸಲಾಗುತ್ತಿದೆ. ಜಿಲ್ಲೆಯಲ್ಲಿ 3 ಅಕ್ಕ ಕೆಫೆ ಸ್ಥಾಪನೆಗೆ ಸರ್ಕಾರದಿಂದ ಅನುಮೋದನೆ ದೊರೆತಿದ್ದು, ಹೆಚ್ಚುವರಿಯಾಗಿ 5 ಅಕ್ಕ ಕೆಫೆಗಳನ್ನು ಅನುಮೋದನೆ ಮಾಡಿಕೊಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಸಾರ್ವಜನಿಕರಿಗೆ ಶುಚಿ-ರುಚಿಯಾದ ಹಾಗೂ ಉತ್ತಮ ಗುಣಮಟ್ಟದ ಆಹಾರ ಒದಗಿಸುವ ನಿಟ್ಟಿನಲ್ಲಿ ಅಕ್ಕ ಕೆಫೆಗಳು ಕಾರ್ಯನಿರ್ವಹಿಸಲಿವೆ ಎಂದರು.
ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಪಿಇಎಸ್ ಎಂಜಿನಿಯರಿಂಗ್ ಕ್ಯಾಂಪಸ್ನಲ್ಲಿರುವ ಒಳಾಂಗಣ ಬ್ಯಾಡ್ಮಿಂಟನ್ ಕ್ರೀಡಾಂಗಣದಲ್ಲಿ ಪಂದ್ಯಾವಳಿಗಳು ಜರುಗಲಿವೆ. ೭೦ ಮಂದಿ ಸ್ಪರ್ಧಿಗಳು ಆಗಮಿಸುವ ನಿರೀಕ್ಷೆ ಇದೆ. ಪ್ರವೇಶ ಸಂಪೂರ್ಣ ಉಚಿತವಾಗಿದ್ದು, ನೋಂದಣಿಗೆ ಸೆ.೧೦ ಕೊನೆಯ ದಿನವಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಗೋಷ್ಠಿಯಲ್ಲಿ ಅಸೋಸಿಯೇಷನ್ ಕಾರ್ಯದರ್ಶಿ ಮನೋಹರ ಹಜಾರೆ ಇದ್ದರು.ದಸರಾ ಕ್ರೀಡಾಕೂಟ: ಭುವನ್ ವಿಭಾಗೀಯ ಮಟ್ಟಕ್ಕೆ ಆಯ್ಕೆ
ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಸರಾ ಕ್ರೀಡಾಕೂಟದಲ್ಲಿ ತಾಲೂಕಿನ ಗೊರವಾಲೆ ಗ್ರಾಮದ ಪ್ರೌಢಶಾಲೆಯ 10ನೇ ವಿದ್ಯಾರ್ಥಿ ಜಿ.ವಿ.ಭುವನ್ 5 ಸಾವಿರ ಮೀಟರ್ ಓಟದಲ್ಲಿ ಪ್ರಥಮ ಹಾಗೂ 1500 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆ ಮುಖ್ಯ ಶಿಕ್ಷಕಿ ಯಮುನಾ ತಿಳಿಸಿದ್ದಾರೆ.
ಮಂಡ್ಯ: ನಗರದ ಪ್ರವಾಸಿ ಮಂದಿರದಲ್ಲಿ ಸೆ.5 ರಂದು ಜಾಗತಿಕ ಲಿಂಗಾಯತ ಮಹಾಸಭಾ ಮಂಡ್ಯ ಜಿಲ್ಲಾ ಘಟಕ ಸ್ಥಾಪಿಸುವ ಸಂಬಂಧ ಸಭೆ ನಡೆಯಲಿದೆ. ಜಿಲ್ಲೆಯ ಲಿಂಗಾಯತ ಸಮಾಜದ ಮುಖಂಡರು, ಬಸವಪರ ಸಂಘಟನೆಗಳ ಪದಾಧಿಕಾರಿಗಳು ಸಭೆಗೆ ಆಗಮಿಸಿ ತಮ್ಮ ಸಲಹೆ, ಸಹಕಾರ ನೀಡುವಂತೆ ಮಹಾಸಭಾ ಕೇಂದ್ರ ಸಮಿತಿ ಉಪಾಧ್ಯಕ್ಷ ಮಹದೇವಪ್ಪ ಕೋರಿದ್ದಾರೆ. ಸಭೆಯಲ್ಲಿ ಸದಸ್ಯತ್ವ ಅಭಿಮಾನ ನಡೆಯಲಿದೆ. ಇತ್ತೀಚಿನ ಎರಡು ಭಾವಚಿತ್ರ, ಸದಸ್ಯತ್ವ ಮೊತ್ತ ತರಬೇಕು. ಹೆಚ್ಚಿನ ಮಾಹಿತಿಗೆ ಮೊ-9449828208 ಸಂಪರ್ಕಿಸಬಹುದು.