‘ಪೌರಕಾರ್ಮಿಕರು ನಗರದ ಸ್ವಚ್ಛತೆಯ ಜೀವನಾಡಿಗಳು’

KannadaprabhaNewsNetwork |  
Published : Oct 13, 2023, 12:15 AM IST
12ಸಿಎಚ್‌ಎನ್‌53 ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮವನ್ನು ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಿದರು. | Kannada Prabha

ಸಾರಾಂಶ

ನಗರ ಪ್ರದೇಶಗಳು ಸ್ವಚ್ಛವಾಗಿ ಕಾಣವುದಕ್ಕೆ ಪ್ರಮುಖ ಕಾರಣವೇ ಪೌರಕಾರ್ಮಿಕರು ಹೀಗಾಗಿ ಅವರೇ ನಗರದ ಸ್ವಚ್ಛತೆಯ ಜೀವನಾಡಿಗಳು ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಪ್ರಶಂಶಿಸಿದರು.

ಜಿಲ್ಲಾಡಳಿತದ ವತಿಯಿಂದ ಪೌರಕಾರ್ಮಿಕ ದಿನಾಚರಣೆ ಆಯೋಜನೆ । ಶಾಸಕ ಪುಟ್ಟರಂಗಶೆಟ್ಟಿ ಪ್ರಶಂಸೆ ಕನ್ನಡಪ್ರಭ ವಾರ್ತೆ ಚಾಮರಾಜನಗರ ನಗರ ಪ್ರದೇಶಗಳು ಸ್ವಚ್ಛವಾಗಿ ಕಾಣವುದಕ್ಕೆ ಪ್ರಮುಖ ಕಾರಣವೇ ಪೌರಕಾರ್ಮಿಕರು ಹೀಗಾಗಿ ಅವರೇ ನಗರದ ಸ್ವಚ್ಛತೆಯ ಜೀವನಾಡಿಗಳು ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಪ್ರಶಂಶಿಸಿದರು. ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪೌರಾಡಳಿತ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ನಗರಾಭಿವೃದ್ಧಿ ಕೋಶದ ವತಿಯಿಂದ ಆಯೋಜಿಸಿದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಪೌರಕಾರ್ಮಿಕರ ಸೇವೆಯು ಅನನ್ಯವಾಗಿದೆ. ಯಾವ ಕೆಲಸವು ಕೀಳಲ್ಲ ಯಾವುದೇ ಕೆಲಸವು ಮೇಲೂ ಅಲ್ಲ. ಪ್ರತಿ ಕೆಲಸಕ್ಕೂ ಗೌರವವಿದೆ. ಪೌರಕಾರ್ಮಿಕರ ದಿನನಿತ್ಯದ ಕೆಲಸಕ್ಕೆ ಪ್ರತಿಯೊಬ್ಬರೂ ಗೌರವ ನೀಡಬೇಕು. ಬಸವಣ್ಣನವರು ಅಂದಿನ ಕಾಲದಲ್ಲಿಯೇ ಪ್ರತಿ ಕಾಯಕಗಳಿಗೂ ಗೌರವ ನೀಡಿದ್ದಾರೆ. ಅಂತಹ ಮಹಾನ್ ವ್ಯಕ್ತಿಗಳ ಸಂದೇಶಗಳನ್ನು ಪೂರ್ಣ ಪ್ರಮಾಣದಲ್ಲಿ ಅರ್ಥ ಮಾಡಿಕೊಂಡಾಗ ಉತ್ತಮ ನಡತೆ ಮೈಗೂಡಿಸಿಕೊಳ್ಳಬಹುದು ಎಂದರು. ಕಾಲ ಬದಲಾದಂತೆ ಅಭ್ಯಾಸಗಳನ್ನು ಬಲಾಯಿಸಿಕೊಳ್ಳಬೇಕು. ಪೌರಕಾರ್ಮಿಕರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಉತ್ತೇಜಿಸಬೇಕು. ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿರುವ ಸಮಾನ ಅವಕಾಶಗಳನ್ನು ಪಡೆದುಕೊಂಡು ಮುಖ್ಯವಾಹಿನಿಗೆ ಬರುವಂತಾಗಬೇಕು. ಸರ್ಕಾರದ ಹಲವಾರು ಅನುದಾನ, ಯೋಜನೆಗಳ ಪ್ರಯೋಜನ ಪಡೆದು ಸಮಾಜದಲ್ಲಿ ಸತ್ಪ್ರಜೆಗಳಾಗಿ ಬೆಳೆಯಬೇಕು ಎಂದು ವಿನಂತಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಮಾತನಾಡಿ, ಪೌರಕಾರ್ಮಿಕರು ನಗರ ಹಾಗೂ ಪಟ್ಟಣಗಳ ಸ್ವಚ್ಛತೆಯ ಜೊತೆಗೆ ವೈಯಕ್ತಿಕ ಆರೋಗ್ಯತ್ತ ಹೆಚ್ಚಿನ ಗಮನವಹಿಸಬೇಕು. ಸುತ್ತಲಿನ ಹಾಗೂ ಕುಟುಂಬದ ಸ್ವಚ್ಛತೆಯ ಬಗ್ಗೆ ಹೆಚ್ಚು ಕಾಳಜಿ ನೀಡಬೇಕು. ಪೌರಕಾರ್ಮಿಕರು ಸರಿಯಾದ ಸಮಯಕ್ಕೆ ಆಹಾರ ಸೇವನೆ ಮಾಡಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ನಗರಸಭೆ ಪೌರಾಯುಕ್ತ ಎಸ್.ವಿ. ರಾಮದಾಸ್ ಅವರು ಮಾತನಾಡಿ, ಪೌರಕಾರ್ಮಿಕರು ಸಾಮಾನ್ಯ ದೈನಂದಿನ ಜೊತೆಗೆ ಎಲ್ಲಾ ಹಬ್ಬದ ದಿನಗಳಲ್ಲಿಯೂ ಕಾರ್ಯನಿರ್ವಹಿಸುತ್ತಾರೆ. ಅಂತಹ ಪೌರಕಾರ್ಮಿಕರ ದಿನವನ್ನು ಆಚರಿಸುವುದು ನಮ್ಮ ಕರ್ತವ್ಯವಾಗಿದೆ. ಚಾಮರಾಜನಗರದಲ್ಲಿ 139 ಪೌರಕಾರ್ಮಿಕರಿದ್ದು, ಖಾಯಂ ನೌಕರರು ಹಾಗೂ ಹೊರಗುತ್ತಿಗೆ ನೌಕರರಿದ್ದಾರೆ. ಇವರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರವು ಹಲವಾರು ಸೌಲಭ್ಯಗಳನ್ನು ಒದಗಿಸುತ್ತಿದೆ. ಇಂತಹ ವಿಶೇಷ ಸೌಲಭ್ಯ ಬಳಸಿಕೊಂಡು ಮುಂದೆ ಬರಬೇಕು ಎಂದರು. ನಗರಸಭೆಯ ಸದಸ್ಯ ಮಹೇಶ್ ಮಾತನಾಡಿ, ಅಸಮಾನತೆಯನ್ನು ಹೋಗಲಾಡಿಸುವ ಪ್ರಮುಖ ಅಸ್ತ್ರವೇ ಶಿಕ್ಷಣವಾಗಿದೆ. ಎಲ್ಲರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಸರ್ಕಾರವು ನೀಡುವ ಸವಲತ್ತುಗಳನ್ನು ಪಡೆದುಕೊಂಡು ಮಕ್ಕಳನ್ನು ಉನ್ನತ ಹುದ್ದೆಗೇರಿಸಲು ಶ್ರಮವಹಿಸಬೇಕು ಎಂದರು. ಉತ್ತಮ ಕೆಲಸ ಹಾಗೂ ಕೋವಿಡ್ ತುರ್ತು ಸಂದರ್ಭದಲ್ಲಿ ಅತ್ಯುನ್ನತ ಕಾರ್ಯನಿರ್ವಹಿಸಿದ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ನೌಕರರಿಗೆ ವಿಶೇಷ ಭತ್ಯೆ ನೀಡಲಾಯಿತು. ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಪೌರಕಾರ್ಮಿಕರಿಗೆ ವೈಯಕ್ತಿಕವಾಗಿ ಸೀರೆ ಹಾಗೂ ಹೊರಗುತ್ತಿಗೆ ನೌಕರರಿಗೆ ಸಹಾಯಧನ ನೀಡಿದರು. ನಗರಸಭೆಯ ಸದಸ್ಯರಾದ ಮನೋಜ್ ಪಟೇಲ್, ಕುಮುದಾ, ಚಿನ್ನಮ್ಮ, ಗಾಯಿತ್ರಿ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ------------------- 12ಸಿಎಚ್‌ಎನ್‌53 ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮವನ್ನು ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಿದರು. ---------------

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಪ್ರಯತ್ನ ವಿಫಲವಾದರೂ ಪ್ರಾರ್ಥನೆ ಆಗಲ್ಲ: ಡಿಕೆ ಬ್ರದರ್ಸ್‌ ನಿಗೂಢ ಪೋಸ್ಟರ್‌ ಸಂಚಲನ
ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ