ಕನ್ನಡಪ್ರಭ ವಾರ್ತೆ ಕಾಗವಾಡ ಮುಂಬರುವ ಲೋಕಸಭಾ ಚುನಾವಣೆ ಎಂಬ ದೊಡ್ಡ ಯುದ್ಧ ಗೆಲ್ಲುವುದು ನಮ್ಮ ಗುರಿಯಾಗಿದ್ದು, ಕಾರ್ಯಕರ್ತರು ಹಾಗೂ ಮುಖಂಡರು ಇದಕ್ಕೆ ಪೂರ್ವ ತಯಾರಿ ಮಾಡಿಕೊಂಡು ಸಜ್ಜಾಗಬೇಕು ಎಂದು ಕಾಗವಾಡ ಶಾಸಕ ರಾಜು ಕಾಗೆ ತಿಳಿಸಿದರು.
ದೇಶದಲ್ಲೆಡೆ ಕಾಂಗ್ರೆಸ್ಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ನಮ್ಮ ರಾಜ್ಯದ ಯೋಜನೆಗಳು ಬೇರೆ ರಾಜ್ಯಗಳ ಚುನಾವಣೆಯಲ್ಲಿ ದೊಡ್ಡ ಚರ್ಚೆಯಾಗುತ್ತಿದೆ. ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ, ದೇಶದ ಚುಕ್ಕಾಣಿಯನ್ನು ಹಿಡಿಯಲು ರಾಜ್ಯದ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದರು.
ಪಕ್ಷ ಅಧಿಕಾರಕ್ಕೆ ಬರಲು ಕಾರ್ಯಕರ್ತರ ಶ್ರಮ ಬಹಳ ಇದೆ. ಕಾರ್ಯಕರ್ತರ ಸಂಕಷ್ಟಗಳಿಗೂ ನಾವು ಸ್ಪಂದಿಸಬೇಕು. ಜನಸಾಮಾನ್ಯರಲ್ಲಿ ಸರ್ಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳನ್ನು ಮತದಾರರಿಗೆ ತಲುಪಿಸುವಂತೆ ಸಲಹೆ ನೀಡಿದರು.ಪಿಕೆಪಿಎಸ್ ಅಧ್ಯಕ್ಷ ಪ್ರವೀಣ ಗಾಣಿಗೇರ, ಜನಶಕ್ತಿ ಬ್ಯಾಂಕಿನ ಅಧ್ಯಕ್ಷ ಪ್ರಶಾಂತರಾವ್ ಅಪರಾಜ, ಪಪಂ ಸದಸ್ಯರಾದ ಅರುಣ ಗಾಣಿಗೇರ, ಸಂಜಯ ಕುಚನೂರೆ, ಸಂಜಯ ಭಿರಡಿ, ಸುರೇಶ ಗಾಣಿಗೇರ, ಗುರುರಾಜ ಮಡಿವಾಳರ, ಕುಮಾರ, ಎಸ್ಸಿ,ಎಸ್ಟಿ ತಾಲೂಕಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸಿದರಾಯ ಗಾಡಿವಡ್ಡರ, ಮುಖಂಡರಾದ ಡಾ.ಅರವಿಂದರಾವ್ ಕಾರ್ಚಿ, ಪ್ರಕಾಶ ಕೋರ್ಬು, ವಿಶ್ವನಾಥ ನಾಮದಾರ, ಅನೀಲ ಸತ್ತಿ, ಶೀತಲ ಬಾಲೋಜಿ, ಮಲ್ಲು ಕೋಲಾರ, ಸಂಜಯ ಕುಸನಾಳೆ, ಪ್ರಕಾಶ ಚಿನಗಿ, ವಿಕಾಸ ಪಂಡರೆ, ವಸಂತ ಗಾಡಿವಡ್ಡರ, ಕುಮಾರ ಗಾಡಿವಡ್ಡರ ಸೇರಿದಂತೆ ನೂರಾರು ಮಹಿಳೆಯರು ಉಪಸ್ಥಿತರಿದ್ದರು