ಶೀಘ್ರವೇ 15 ಕೈ ಶಾಸಕರಿಗೆ ದುಬೈ ಪ್ರವಾಸ - ಸತೀಶ್‌ ಆಪ್ತ ಶಾಸಕ ಆಸೀಫ್‌ ಸೇಠ್‌ ಹೇಳಿಕೆಯಿಂದ ರಾಜಕೀಯ ಸಂಚಲನ

Published : Jan 18, 2025, 09:33 AM IST
Sathish Jarkiholi

ಸಾರಾಂಶ

ಶೀಘ್ರವೇ 15 ಜನ ಕಾಂಗ್ರೆಸ್‌ ಸದಸ್ಯರು ದುಬೈ ಪ್ರವಾಸ ಕೈಗೊಳ್ಳಲಿದ್ದೇವೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಆಪ್ತ ಶಾಸಕ ಆಸೀಫ್‌ ಸೇಠ್‌ ಹೇಳಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

 ಬೆಳಗಾವಿ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ನಡುವಿನ ಬಣ ಬಡಿದಾಟ ಮತ್ತೊಂದು ಹಂತಕ್ಕೆ ದಾಪುಗಾಲಿಟ್ಟಿದ್ದು, ಶೀಘ್ರವೇ 15 ಜನ ಕಾಂಗ್ರೆಸ್‌ ಸದಸ್ಯರು ದುಬೈ ಪ್ರವಾಸ ಕೈಗೊಳ್ಳಲಿದ್ದೇವೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಆಪ್ತ ಶಾಸಕ ಆಸೀಫ್‌ ಸೇಠ್‌ ಹೇಳಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಗಾವಿ ಉತ್ತರ ಶಾಸಕ ಆಸೀಫ್‌ ಸೇಠ್‌, ಸ್ನೇಹಿತರು, ಆಪ್ತ ಶಾಸಕರೆಲ್ಲರೂ ಸೇರಿ ದುಬೈ ಪ್ರವಾಸ ಕೈಗೊಳ್ಳಲಿದ್ದೇವೆ. ಸಚಿವ ಸತೀಶ್ ಜಾರಕಿಹೊಳಿ ದುಬೈ ಪ್ರವಾಸಕ್ಕೆ ಬರುವುದಿಲ್ಲ. ವಿಮಾನ ಟಿಕೆಟ್ ಬುಕ್ ಮಾಡುತ್ತಿದ್ದೇವೆ, ಬುಕ್ ಆದ ಬಳಿಕ ಪ್ರವಾಸ ಕೈಗೊಳ್ಳುತ್ತೇವೆ ಎಂದು ಹೇಳಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಸಂಕ್ರಾಂತಿ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ: ಸಲೀಂ
ಜಿ ರಾಮ್‌ ಜಿ, ಅನುದಾನ ಕಡಿತ ವಿರುದ್ಧ ಇಂದು ರಾಜ್ಯ ಸಂಪುಟದಲ್ಲಿ ನಿರ್ಣಯ?