10 ತಿಂಗಳಲ್ಲಿ ರಾಜ್ಯ ಸರ್ಕಾರದಿಂದ 600 ಕೋಟಿ ಅನುದಾನ : ನಂಜೇಗೌಡ

KannadaprabhaNewsNetwork |  
Published : Apr 23, 2024, 12:49 AM ISTUpdated : Apr 23, 2024, 04:40 AM IST
22 ಕ.ಟಿ.ಇ.ಕೆ ಚಿತ್ರ 1 : ಟೇಕಲ್‌ನ ಹುಣಸಿಕೋಟೆಯ ಪಟಾಲಮ್ಮನ ಗುಡಿ ಬಳಿ ಕಾಂಗ್ರೇಸ್ ಲೋಕಸಭಾ ಅಭ್ಯರ್ಥಿ ಕೆ.ವಿ.ಗೌತಮ್ ಪರ ಮತಯಾಚಿಸಿ ಶಾಸಕ ಕೆ.ವೈ.ನಂಜೇಗೌಡರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿರುವುದು. ಚಿತ್ರದಲ್ಲಿ ಅಭ್ಯರ್ಥಿ ಕೆ.ವಿ.ಗೌತಮ್ ಇದ್ದಾರೆ. | Kannada Prabha

ಸಾರಾಂಶ

ಟೇಕಲ್‌ನ ಹುಣಸಿಕೋಟೆಯ ಪಟಾಲಮ್ಮನಗುಡಿ ಗುಡಿ ಸುತ್ತಮುತ್ತಲ ಗ್ರಾಮಗಳು ಕಲ್ಲನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದು ಅವರಿಗೆ ಉತ್ತಮ ಸೌಕರ್ಯ ಹಾಗೂ ಶಾಶ್ವತ ಪರಿಹಾರ ಕಲ್ಪಿಸುವ ಭರವಸೆ.

 ಟೇಕಲ್ :  ಮಾಲೂರು ತಾಲೂಕಿನ ಅಭಿವೃದ್ಧಿಗೆ ಇನ್ನು 10 ತಿಂಗಳಲ್ಲಿ ರಾಜ್ಯ ಸರ್ಕಾರದಿಂದ 600 ಕೋಟಿ ಅನುದಾನ ತಂದು ಮಾದರಿ ತಾಲೂಕನ್ನಾಗಿ ಮಾಡುವುದಾಗಿ ಶಾಸಕ ಕೆ.ವೈ.ನಂಜೇಗೌಡ ಹೇಳಿದರು.

ಅವರು ಟೇಕಲ್‌ನ ಹುಣಸಿಕೋಟೆಯ ಪಟಾಲಮ್ಮನಗುಡಿ ಬಳಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಕೆ.ವಿ.ಗೌತಮ್ ಪರ ಮತಯಾಚಿಸಿ ಮಾತನಾಡಿ, ಪಟಾಲಮ್ಮನ ಗುಡಿ ಸುತ್ತಮುತ್ತಲ ಗ್ರಾಮಗಳು ಕಲ್ಲನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದು ಅವರಿಗೆ ಉತ್ತಮ ಸೌಕರ್ಯ ಹಾಗೂ ಶಾಶ್ವತ ಪರಿಹಾರ ಕಲ್ಪಿಸಲಾಗುವುದು. ರಾಜ್ಯದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರವರ ಅಲೆ ಇದ್ದು ಕೋಲಾರದ ಅಭ್ಯರ್ಥಿ ಕೆ.ವಿ.ಗೌತಮ್ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂದರು.

ಕಲ್ಲುಕುಟಿಕರಿಗೆ ನೆರವು: ಗೌತಮ್‌ಅಭ್ಯರ್ಥಿ ಕೆ.ವಿ.ಗೌತಮ್ ಮಾತನಾಡಿ, ನಮ್ಮ ತಾತ ಕೂಡ ಬೆಂಗಳೂರು ಗ್ರಾಮಾಂತರದಲ್ಲಿ ಕಲ್ಲು ಕ್ವಾರಿ ತೆಗೆದುಕೊಂಡು ವ್ಯಾಪಾರ ಮಾಡಿರುವುದು ನನಗೆ ಅನುಭವವಿದೆ. ಈ ನಿಟ್ಟಿನಲ್ಲಿ ನಾನು ನಿಮಗೂ ಕಲ್ಲುಕುಟಿಕರಿಗೆ ಬೆನ್ನೆಲುಬಾಗಿ ನಿಂತು ಸಹಕರಿಸುತ್ತೇನೆ. ಇದೆ 26 ರಂದು ಲೋಕಸಭಾ ಚುನಾವಣೆಯಲ್ಲಿ ಕ್ರಮಸಂಖ್ಯೆ 1 ಕ್ಕೆ ಮತ ನೀಡಿ ತಮ್ಮನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ತಾಪಂ ಮಾಜಿ ಸದಸ್ಯ ಬಿಜೆಪಿಯ ರಮೇಶ್‌ಗೌಡ ಮತ್ತು ಇತರ ಪಕ್ಷಗಳ ಮುಖಂಡರು ಶಾಸಕ ಕೆ.ವೈ.ನಂಜೇಗೌಡರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದರು. ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಶಾಸಕರು ಅವರಿಗೆ ಕಾಂಗ್ರೇಸ್ ಶಾಲೂ ಹಾಕಿ ಭಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಮಾಜಿ ಶಾಸಕ ಎ.ನಾಗರಾಜ್, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಅಂಜನಿಸೋಮಣ್ಣ, ಕೆ.ಎಸ್.ವೆಂಕಟೇಶ, ಪ್ರಗತಿ ಶ್ರೀನಿವಾಸ, ವಿನೋದ್‌ಗೌಡ, ಕೆ.ಜಿ.ಹಳ್ಳಿ ಗ್ರಾ.ಪಂ.ಅಧ್ಯಕ್ಷ ಎಸ್.ಆರ್.ಯಲ್ಲಪ್ಪ, ಮಾಜಿ ಉಪಾಧ್ಯಕ್ಷ ಮಮತಶಶಿಧರ, ಬ್ಲಾಕ್ ಕಾಂಗ್ರೇಸ್ ವಿಜಯನರಸಿಂಹ, ಮತ್ತಿತರರು ಉಪಸ್ಥಿತರಿದ್ದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಮತಚೋರಿ ಹೆಸರಲ್ಲಿ ಸುಳ್ಳು ಪ್ರಚಾರ ತಪ್ಪು: ದೇವೇಗೌಡ
ದೆಹಲಿಯಲ್ಲೂ ಸಿದ್ದು ಸಿದ್ದು, ಡಿಕೆ ಡಿಕೆ ಸದ್ದು