ಕನ್ನಡಪ್ರಭ ವಾರ್ತೆ ಬೆಂಗಳೂರು
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, 14ನೇ ಆವೃತ್ತಿಯ ಸಮಾವೇಶವು ನ್ಯಾನೋ ತಂತ್ರಜ್ಞಾನ ಆಧಾರಿತ ಆವಿಷ್ಕಾರಗಳ ವಾಣಿಜ್ಯೀಕರಣಕ್ಕೆ ವೇಗ ನೀಡಲು ಸಹಕಾರಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆಯ ಬೆಂಗಳೂರು ಪ್ರಮುಖ ಕೇಂದ್ರವಾಗಿ ಬೆಳೆದಿದೆ. ಇಂತಹ ಬೆಂಗಳೂರಿನಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ದೇಶ ವಿದೇಶಗಳ ಖ್ಯಾತ ವಿಜ್ಞಾನಿಗಳು, ಕೈಗಾರಿಕಾ ವಲಯದ ಪ್ರಮುಖರು, ನವೋದ್ಯಮ ಸಂಸ್ಥೆಗಳು, ಹೂಡಿಕೆದಾರರು, ನೀತಿ ನಿರೂಪಕರು ಹಾಗೂ ತಂತ್ರಜ್ಞಾನ ಕ್ಷೇತ್ರದ ಪರಿಣಿತರು ಒಂದೇ ವೇದಿಕೆಯಡಿ ಚಿಂತನ–ಮಂಥನ ನಡೆಸಲಿದ್ದಾರೆ ಎಂದು ಪ್ರಿಯಾಂಕ್ ಮಾಹಿತಿ ನೀಡಿದರು.ಆಗಸ್ಟ್ 3ರಂದು ವಿಶೇಷ ಕಾರ್ಯಾಗಾರಕ್ಕೆ ಚಾಲನೆ ದೊರೆಯಲಿದೆ. ಈ ದಿನ ನ್ಯಾನೋ ತಯಾರಿಕೆ, ನ್ಯಾನೋ ವಿಶ್ಲೇಷಣೆ ಹಾಗೂ ಜೈವಿಕ ವಿಜ್ಞಾನದಲ್ಲಿ ನ್ಯಾನೋ ತಂತ್ರಜ್ಞಾನದ ಬಳಕೆ ಕುರಿತು ತಜ್ಞರ ಮಾರ್ಗದರ್ಶನದಲ್ಲಿ ಪ್ರಾಯೋಗಿಕ ತರಬೇತಿ ಕಾರ್ಯಾಗಾರಗಳು ನಡೆಯಲಿವೆ.
ಸಮಾವೇಶದಲ್ಲಿ 26ಕ್ಕೂ ಹೆಚ್ಚು ಸಭೆಗಳು, 200ಕ್ಕೂ ಹೆಚ್ಚು ವೈಜ್ಞಾನಿಕ ಸಂಶೋಧನಾ ಪ್ರಬಂಧಗಳ ಮಂಡನೆ, 50ಕ್ಕೂ ಹೆಚ್ಚು ಪ್ರದರ್ಶನ ಮಳಿಗೆ, 80ಕ್ಕೂ ಹೆಚ್ಚು ವಿಷಯತಜ್ಞರ ಭಾಷಣ, 10ಕ್ಕೂ ಹೆಚ್ಚು ದೇಶಗಳ 1,000ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಹೂಡಿಕೆದಾರರನ್ನು ಭೇಟಿ ಮಾಡುವ, ಕೈಗಾರಿಕಾ ವಲಯದ ಪ್ರಮುಖರೊಂದಿಗೆ ಸಂಪರ್ಕ ಬೆಳೆಸುವ ಹಾಗೂ ವಾಣಿಜ್ಯೀಕರಣ, ಸಹಭಾಗಿತ್ವದ ಅವಕಾಶಗಳನ್ನು ಅನ್ವೇಷಿಸುವ ಅವಕಾಶವನ್ನು ಸಮಾವೇಶ ಸೃಷ್ಟಿಸಲಿದೆ ಎಂದು ಐಟಿ ಬಿಟಿ ಇಲಾಖೆ ಕಾರ್ಯದರ್ಶಿ ಡಾ.ಎನ್. ಮಂಜುಳಾ ತಿಳಿಸಿದರು.
ಭರವಸೆಯ ನವೋದ್ಯಮಗಳು ಹಾಗೂ ನ್ಯಾನೋ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸತನದ ಕೊಡುಗೆ ನೀಡುತ್ತಿರುವ ಸಾಧಕರನ್ನು ಗೌರವಿ ನ್ಯಾನೋ ನಾವೀನ್ಯತೆ ಪ್ರಶಸ್ತಿ ನೀಡಲಾಗುವುದು ಎಂದು ಮಂಜುಳಾ ತಿಳಿಸಿದರು.
ವೆಬ್ಸೈಟ್ ಮಾಹಿತಿ