ಬಡವರ ಪರವಾದ ಸಿದ್ದರಾಮಯ್ಯ ಸರಕಾರವು ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ 36 ಸಾವಿರ ಕೋಟಿ ಅನುದಾನವನ್ನು ಮೀಸಲಿಟ್ಟಿದೆ. ವಿರೋಧ ಪಕ್ಷಗಳು ಆಡಳಿತ ಪಕ್ಷದ ವೈಖರಿಯನ್ನು ಸಹಿಸಿಕೊಳ್ಳದೇ ವಿನಾಕಾರಣ ಆರೋಪಗಳನ್ನು ಮಾಡಲು ಹೊರಟಿದ್ದಾರೆ ಇದಕ್ಕೆ ಯಾರೂ ಕಿವಿ ಕೊಡಬಾರದು.
ಕೋಲಾರ : ಮಹರ್ಷಿ ವಾಲ್ಮೀಕಿ ಯಾವುದೇ ಒಂದು ವರ್ಗಕ್ಕೆ ಸೀಮಿತರಲ್ಲ. ಎಲ್ಲಾ ಸಮುದಾಯಗಳು ಪೂಜಿಸಲ್ಪಡುವ ಮಹಾನ್ ಚೇತನವಾಗಿದ್ದು ಅವರು ಬರೆದ ರಾಮಾಯಣ ಇಡೀ ವಿಶ್ವಕ್ಕೇ ನೀಡಿದ ಅತ್ಯಮೂಲ್ಯ ಕೊಡುಗೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ತಿಳಿಸಿದರು.
ನಗರದ ಹೊರವಲಯದ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಾಲ್ಮೀಕಿ ಸಮಾಜ ಸಂಘಟನೆಗಳ ನೇತೃತ್ವದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿರವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವೈವಿಧ್ಯತೆಯಲ್ಲಿ ಏಕತೆ
ವಾಲ್ಮೀಕಿ ಬರೆದ ರಾಮಾಯಣ ಮತ್ತು ಅಂಬೇಡ್ಕರ್ ಅವರ ಸಂವಿಧಾನವು ಅಣ್ಣತಮ್ಮಂದಿರ ರೀತಿಯಲ್ಲಿ ಒಗ್ಗಟ್ಟಿನಿಂದ ಬದುಕುವಂತೆ ಮಾಡಿದೆ. ದೇಶವು ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವಂತಾಗಿದ್ದು ಇಂತಹ ಮಹನೀಯರ ಹಾದಿಯಲ್ಲಿ ದೇಶವು ಅಭಿವೃದ್ಧಿಯ ಕಡೆಗೆ ಹೋಗಬೇಕಾಗಿದೆ. ದೇಶವನ್ನು ಒಡೆದು ಆಳುವ ಸರ್ಕಾರದ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಜಾತಿ ಜಾತಿಗಳ ಮಧ್ಯೆ ಜಗಳ ತಂದು ರಾಜಕಾರಣ ಮಾಡುವವರನ್ನು ದೂರವಿಡಿ ಎಂದರು.
ಬಡವರ ಪರವಾದ ಸಿದ್ದರಾಮಯ್ಯ ಸರಕಾರವು ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ ೩೬ ಸಾವಿರ ಕೋಟಿ ಅನುದಾನವನ್ನು ಮೀಸಲಿಟ್ಟಿದೆ. ವಿರೋಧ ಪಕ್ಷಗಳು ಆಡಳಿತ ಪಕ್ಷದ ವೈಖರಿಯನ್ನು ಸಹಿಸಿಕೊಳ್ಳದೇ ವಿನಾಕಾರಣ ಆರೋಪಗಳನ್ನು ಮಾಡಲು ಹೊರಟಿದ್ದಾರೆ ಇದಕ್ಕೆ ಕಿವಿ ಕೊಡಬಾರದು. ಬಲಹೀನ ಸಮುದಾಯಗಳ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದರು.
ಸಿಎಂ ಕೆಳಗಿಳಿಸಲು ಸಂಚು
ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ, ಅಂಬೇಡ್ಕರ್ ಅವರ ದಾರಿಯಲ್ಲಿ ಕಾಂಗ್ರೆಸ್ ಸರ್ಕಾರವು ನಡೆಯುತ್ತಿದೆ ರಾಜ್ಯದಲ್ಲಿ ಹಿಂದುಳಿದ ವರ್ಗದ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ ಎಂದು ಸಹಿಸದ ಕೆಲವರು ಅವರನ್ನು ಅಧಿಕಾರದಿಂದ ಕೆಳಗಿಸಬೇಕು ಎಂದು ಸಂಚು ನಡೆಯುತ್ತಿದೆ ಇದರ ವಿರುದ್ದ ಒಗ್ಗಟ್ಟಿನಿಂದ ಎಚ್ಚರಿಕೆ ವಹಿಸಿ ನಾವು ಎಲ್ಲರೂ ಒಗ್ಗಟ್ಟಿನಿಂದ ಹೋಗಬೇಕಾಗಿದೆ ಎಂದರು.ಶಾಸಕ ಕೊತ್ತೂರು ಜಿ.ಮಂಜುನಾಥ್ ಮಾತನಾಡಿ, ನಂಬಿಕೆಗೆ ಅರ್ಹವಾದ ವಾಲ್ಮೀಕಿ ಸಮುದಾಯವು ಎಲ್ಲಾ ಸಮುದಾಯಗಳನ್ನು ಜೊತೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ವಾಲ್ಮೀಕಿ ಮಹರ್ಷಿ ಜಯಂತಿಯನ್ನು ಸಾರ್ವಜನಿಕ ರಜೆಯನ್ನಾಗಿ ಘೋಷಿಸಿದೆ ಮಹರ್ಷಿ ಬರೆದ ಮಹಾಕಾವ್ಯದಲ್ಲಿ ಇರುವ ಎಲ್ಲ ಅಂಶಗಳು ಅನುಕರಣಿಯವಾಗಿವೆ ಸಮಾಜದಲ್ಲಿ ರಾಮಾಯಣದಿಂದ ಕಲಿಯಬೇಕಾದ್ದು ಬಹಳಷ್ಟಿದೆ ಎಂದರು.
ಜಿಲ್ಲಾಧಿಕಾರಿ ಅಕ್ರಂ ಪಾಷ, ಎಸ್ಪಿ ಬಿ.ನಿಖಿಲ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್, ಎಸ್ಪಿ ಬಿ. ನಿಖಿಲ್ , ಅಪರ ಜಿಲ್ಲಾಧಿಕಾರಿ ಮಂಗಳ, ಎಸಿ ಡಾ.ಮೈತ್ರಿ, ತಹಸೀಲ್ದಾರ್ ನಯನ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸನ್ , ವಾಲ್ಮೀಕಿ ಸಮಾಜದ ಮುಖಂಡರಾದ ಎನ್ ಅಂಬರೀಷ್, ಬಾಲಗೋವಿಂದ್, ಮಾಲೂರು ವೆಂಕಟರಾಮ್, ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ಡಿಪಿಎಸ್ ಮುನಿರಾಜು, ಟಿ.ವಿಜಿಕುಮಾರ್, ಪಂಡಿತ್ ಮುನಿವೆಂಕಟಪ್ಪ ಇದ್ದರು.ವಾಲ್ಮೀಕಿ ಸ್ತಬ್ಧ ಚಿತ್ರಗಳಿಗೆ ಚಾಲನೆಕಾರ್ಯಕ್ರಮಕ್ಕೂ ಮುನ್ನ ನಗರದ ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ನಂತರ ಪಲ್ಲಕ್ಕಿಗಳ ಮೆರವಣಿಗೆಯನ್ನು ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಜಿಲ್ಲಾಧಿಕಾರಿ ಅಕ್ರಂ ಪಾಷ ಡೊಳ್ಳು ಹೊಡೆಯುವ ಮೂಲಕ ಚಾಲನೆ ನೀಡಿದರು ವಿವಿಧ ಇಲಾಖೆಗಳು ಹಾಗೂ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಿಂದ ಬಂದ ೫೦ಕ್ಕೂ ಹೆಚ್ಚು ಪಲ್ಲಕ್ಕಿಗಳು ಹಾಗೂ ಜಾನಪದ ಕಲಾ ತಂಡಗಳು ನೋಡುಗರ ಗಮನ ಸೆಳೆಯಿತು.