ಕರ್ನಾಟಕ ಎಫೆಕ್ಟ್‌: ಮ.ಪ್ರ.ದಲ್ಲಿ75 ಆದವರಿಗೂ ಬಿಜೆಪಿ ಟಿಕೆಟ್‌!

KannadaprabhaNewsNetwork |  
Published : Nov 14, 2023, 01:15 AM IST

ಸಾರಾಂಶ

ಭೋಪಾಲ್‌: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹಿರಿಯರ ಬದಲು ಯುವಕರಿಗೆ ಮಣೆ ಹಾಕಿ ಪಾಠ ಕಲಿತ ಬಿಜೆಪಿ, ಮಧ್ಯಪ್ರದೇಶದಲ್ಲಿ ಮತ್ತೆ ಹಿರಿಯರ ಮೊರೆ ಹೋಗಿದೆ. ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 70 ವರ್ಷದ ದಾಟಿದವರಿಗೆ ಟಿಕೆಟ್‌ ಇಲ್ಲ ಎಂಬ ತನ್ನ ಅಘೋಷಿತ ನಿಯಮವನ್ನು ಮೀರಿ 14 ಜನರಿಗೆ ಟಿಕೆಟ್‌ ನೀಡಿದೆ.

ಮಧ್ಯಪ್ರದೇಶದಲ್ಲಿ ಅಧಿಕಾರ ಉಳಿಸಿಕೊಳ್ಳಲು ಪಣತೊಟ್ಟಿರುವ ಬಿಜೆಪಿ

70 ವರ್ಷ ಆದವರಿಗೆ ಟಿಕೆಟ್ ಇಲ್ಲ ಎಂಬ ಅಘೋಷಿತ ನಿಯಮಕ್ಕೆ ಬ್ರೇಕ್‌

ನ.17ರ ವಿಧಾನಸಭಾ ಚುನಾವಣೆಗೆ 70 ವರ್ಷ ಮೀರಿದ 14 ಜನ ಕಣಕ್ಕೆ80 ವರ್ಷ ವಯಸ್ಸಿನ ನಾಗೇಂದ್ರ ಸಿಂಗ್‌ ನಗೋಡ್‌ಗೂ ಬಿಜೆಪಿ ಟಿಕೆಟ್‌

ಟಿಕೆಟ್‌ ಹಂಚಿಕೆಗೆ ಈ ಬಾರಿ ಗೆಲುವೊಂದೇ ಮಾನದಂಡ

70 ದಾಟಿದ 14 ಮಂದಿ ಬಿಜೆಪಿಯಿಂದ ಕಣಕ್ಕೆ (ನಿಯಮ ಸಡಿಲಿಕೆ)ಭೋಪಾಲ್‌: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹಿರಿಯರ ಬದಲು ಯುವಕರಿಗೆ ಮಣೆ ಹಾಕಿ ಪಾಠ ಕಲಿತ ಬಿಜೆಪಿ, ಮಧ್ಯಪ್ರದೇಶದಲ್ಲಿ ಮತ್ತೆ ಹಿರಿಯರ ಮೊರೆ ಹೋಗಿದೆ. ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 70 ವರ್ಷದ ದಾಟಿದವರಿಗೆ ಟಿಕೆಟ್‌ ಇಲ್ಲ ಎಂಬ ತನ್ನ ಅಘೋಷಿತ ನಿಯಮವನ್ನು ಮೀರಿ 14 ಜನರಿಗೆ ಟಿಕೆಟ್‌ ನೀಡಿದೆ.

ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ (67), ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ (74) ಅವರಿಗೆ ಟಿಕೆಟ್‌ ನಿರಾಕರಿಸಿದ್ದ ಬಿಜೆಪಿ, ಯುವ ಮುಖಗಳಿಗೆ ಆದ್ಯತೆ ನೀಡಿತ್ತು. ಹೀಗೆ ಹಿರಿಯ ನಾಯಕರಿಗೆ ಟಿಕೆಟ್‌ ನಿರಾಕರಿಸಲು ನೇರ ಕಾರಣ ನೀಡದೇ ಇದ್ದರೂ, ಅವರು 70ರ ಆಸುಪಾಸಿನಲ್ಲಿರುವುದು ಇಲ್ಲವೇ ಆ ವಯೋಮಿತಿ ದಾಟಿದ್ದು ಕಾರಣ ಎಂಬ ವಿಶ್ಲೇಷಣೆ ಕೇಳಿಬಂದಿತ್ತು. ಜೊತೆಗೆ ಈ ಪ್ರಯೋಗ ಚುನಾವಣೆಯ ಫಲಿತಾಂಶದ ಮೇಲೂ ಪರಿಣಾಮ ಬೀರಿ ಬಿಜೆಪಿಗೆ ಭಾರೀ ಹೊಡೆತ ನೀಡಿತ್ತು.

ಹೀಗಾಗಿ ಮಧ್ಯಪ್ರದೇಶ ಚುನಾವಣೆಯಲ್ಲಿ ಪ್ರಯೋಗಕ್ಕೆ ಬ್ರೇಕ್‌ ಹಾಕಿರುವ ಬಿಜೆಪಿ ನಾಯಕರು, ಗೆಲುವೊಂದೇ ಮೂಲಮಂತ್ರ ಎಂಬುದಕ್ಕೆ ಶರಣಾಗಿದ್ದಾರೆ. ಅದಕ್ಕೆಉದಾಹರಣೆ ಎಂಬಂತೆ ನ.17ರಂದು ಮತದಾನ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 70 ವರ್ಷದ ದಾಟಿದ 14 ಜನರಿಗೆ ಟಿಕೆಟ್‌ ನೀಡಿದೆ. ಈ ಪೈಕಿ ಗರಿಷ್ಠ ವಯೋಮಿತಿಯ ಅಭ್ಯರ್ಥಿಯೆಂದರೆ ನಾಗೇಂದ್ರ ಸಿಂಗ್‌ ನಗೋಡ್‌ (80). ಉಳಿದಂತೆ ಜಯಂತ್‌ ಮಲಯ್ಯ (76), ಜಗನ್ನಾತ್‌ ಸಿಂಗ್‌ (75), ಸೀತಾಶರಣ್‌ ಶರ್ಮಾ (73), ಬಿಸಾಹುಲಾಲ್‌ ಸಿಂಗ್‌ (73), ಮಾಯಾ ಸಿಂಗ್‌ (73) ಮೊದಲಾದವರು ಸೇರಿದ್ದಾರೆ.

ಜೊತೆಗೆ ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳಲೇ ಬೇಕು ಎಂದು ಪಣತೊಟ್ಟಿರುವ ಬಿಜೆಪಿ, ಈ ಬಾರಿ 7 ಸಂಸದರು, ಪಕ್ಷದ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಮತ್ತು ಓರ್ವ ಕೇಂದ್ರ ಸಚಿವರಿಗೆ ಕೂಡಾ ವಿಧಾನಸಭೆಯ ಟಿಕೆಟ್‌ ನೀಡಿ ಕಣಕ್ಕೆ ಇಳಿಸಿದೆ.

ಇನ್ನು ಬಿಜೆಪಿಯನ್ನು ಸವಕಲು ಪಕ್ಷ ಎಂದು ಟೀಕಿಸಿದ್ದ ಕಾಂಗ್ರೆಸ್‌ ಕೂಡಾ ಈ ಬಾರಿಯ ಚುನಾವಣೆಯಲ್ಲಿ 70 ವರ್ಷದ ದಾಟಿದ 9 ಅಭ್ಯರ್ಥಿಗಳನ್ನ ಕಣಕ್ಕೆ ಇಳಿಸುವ ಮೂಲಕ ಬಿಜೆಪಿಯಿಂದ ಅಧಿಕಾರ ಕಸಿದುಕೊಳ್ಳಲು ತಂತ್ರ ರೂಪಿಸಿದೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಿದ್ಧತೆ : 10 ಇಲಾಖೆ ಸಭೆ
ನಾಯಕತ್ವ ಗೊಂದಲ ಇತ್ಯರ್ಥಕ್ಕೆ ಕಾಂಗ್ರೆಸ್‌ ಶಾಸಕರಿಂದ ಒತ್ತಡ