ನಾಗೇಂದ್ರ ವಿರುದ್ಧ ಕ.ಕರ್ನಾಟಕದಲ್ಲಿ ಪಾದಯಾತ್ರೆಗೆ ಬಿಜೆಪಿ ತೀರ್ಮಾನ

Published : Aug 14, 2026, 04:48 AM IST
B Nagendra

ಸಾರಾಂಶ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ಆರೋಪಿಯಾಗಿರುವ ನೂತನ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿ ಕಲ್ಯಾಣ ಕರ್ನಾಟಕದಲ್ಲಿ ಪಾದಯಾತ್ರೆ ನಡೆಸಲು ಮುಂದಾಗಿದೆ.

ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ಆರೋಪಿಯಾಗಿರುವ ನೂತನ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿ ಕಲ್ಯಾಣ ಕರ್ನಾಟಕದಲ್ಲಿ ಪಾದಯಾತ್ರೆ ನಡೆಸಲು ಮುಂದಾಗಿದೆ.

ಮಾಜಿ ಸಚಿವ ಬಿ.ಶ್ರೀರಾಮುಲು ನೇತೃತ್ವದಲ್ಲಿ ಪಾದಯಾತ್ರೆ

ಪಕ್ಷದ ವರಿಷ್ಠರು ಒಪ್ಪಿಗೆ ನೀಡಿದಲ್ಲಿ ವಿಧಾನಮಂಡಲದ ಅಧಿವೇಶನದೊಳಗಾಗಿಯೇ ಅಂದರೆ, ಮುಂದಿನ ವಾರದ ವೇಳೆಗೆ ಮಾಜಿ ಸಚಿವ ಬಿ.ಶ್ರೀರಾಮುಲು ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಗಲಿದೆ. ರಾಯಚೂರು ಜಿಲ್ಲೆಯಿಂದ ಆರಂಭವಾಗಿ ಯಾದಗಿರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳ ಮೂಲಕ ಬಳ್ಳಾರಿವರೆಗೆ ಪಾದಯಾತ್ರೆ ನಡೆಸುವ ಉದ್ದೇಶವಿದೆ.

ಗುರುವಾರ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶ್ರೀರಾಮುಲು, ಮಾಜಿ ಸಚಿವ ಶಿವನಗೌಡ ನಾಯಕ ಸೇರಿದಂತೆ ಹಲವು ನಾಯಕರು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತಿತರರೊಂದಿಗೆ ಪಾದಯಾತ್ರೆ ಬಗ್ಗೆ ಚರ್ಚೆ ನಡೆಸಿದರು. ತಾತ್ವಿಕವಾಗಿ ಒಪ್ಪಿಗೆ ನೀಡಿರುವ ವಿಜಯೇಂದ್ರ ಅವರು ವರಿಷ್ಠರ ಗಮನಕ್ಕೆ ತರುವುದಾಗಿ ಹೇಳಿದ್ದಾರೆ. ಅಲ್ಲದೆ, ಪಾದಯಾತ್ರೆಯ ರೂಪುರೇಷೆ ಸಿದ್ಧಪಡಿಸಿಕೊಳ್ಳುವಂತೆಯೂ ಸೂಚಿಸಿದ್ದಾರೆ ಎನ್ನಲಾಗಿದೆ.

ಸಂಪುಟದಿಂದ ಕೈಬಿಡಲು ನಿರಾಕರಿಸಿರುವ ಮುಖ್ಯಮಂತ್ರಿ

ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಲು ನಿರಾಕರಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅವರ ಸೇರ್ಪಡೆಯನ್ನು ಬಲವಾಗಿ ಪ್ರತಿಪಾದಿಸುತ್ತಿರುವುದರಿಂದ ರಾಜ್ಯ ಸರ್ಕಾರದ ವಿರುದ್ಧ ಮುಗಿಬೀಳಲು ನಿರ್ಧರಿಸಿದೆ. ಹೀಗಾಗಿ, ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ಬಿಜೆಪಿ ಪಾದಯಾತ್ರೆ ಹಮ್ಮಿಕೊಳ್ಳಲು ಮುಂದಾಗಿದೆ. ಈ ಮೂಲಕ ಪರಿಶಿಷ್ಟ ಪಂಗಡ ಸಮುದಾಯದ ಒಲವು ಗಳಿಸಬಹುದು ಎಂಬ ಲೆಕ್ಕಾಚಾರ ಅಡಗಿದೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಕಾವೇರಿ ವಿಚಾರದಲ್ಲಿ ಸತತ ತಪ್ಪು ಹೆಜ್ಜೆ: ಎಚ್‌ಡಿಕೆ
ಅಧಿವೇಶನದಲ್ಲಿ ವಿಪಕ್ಷ ಎದುರಿಸಲು ಸಿಎಂ ತಾಲೀಮು- ಸಚಿವರಿಗೆ ಹಿರಿಯರಿಂದ ಸಲಹೆ, ಮಾರ್ಗದರ್ಶನ