ಪ್ರಿಯಾಂಕಾ ವಿರುದ್ಧ ಕಣಕ್ಕಿಳಿಯಲು ವರುಣ್ ನಿರಾಕರಣೆ

KannadaprabhaNewsNetwork |  
Published : Apr 26, 2024, 12:46 AM ISTUpdated : Apr 26, 2024, 04:54 AM IST
Priyanka gandhi

ಸಾರಾಂಶ

ಕಾಂಗ್ರೆಸ್‌ ಭದ್ರಕೋಟೆಯಾದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಪ್ರಿಯಾಂಕಾ ವಾದ್ರಾ ವಿರುದ್ಧ ಕಣಕ್ಕೆ ಇಳಿಯುವಂತೆ ತಮ್ಮ ಪಕ್ಷ ನೀಡಿದ್ದ ಸಲಹೆಯನ್ನು ಬಿಜೆಪಿ ಸಂಸದ ವರುಣ್‌ ಗಾಂಧಿ ತಿರಸ್ಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಕಾಂಗ್ರೆಸ್‌ ಭದ್ರಕೋಟೆಯಾದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಪ್ರಿಯಾಂಕಾ ವಾದ್ರಾ ವಿರುದ್ಧ ಕಣಕ್ಕೆ ಇಳಿಯುವಂತೆ ತಮ್ಮ ಪಕ್ಷ ನೀಡಿದ್ದ ಸಲಹೆಯನ್ನು ಬಿಜೆಪಿ ಸಂಸದ ವರುಣ್‌ ಗಾಂಧಿ ತಿರಸ್ಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಈ ಬಾರಿ ಪಿಲಿಬಿತ್ ಟಿಕೆಟ್‌ ಪಡೆಯುವುದರಿಂದ ವಂಚಿತರಾಗಿದ್ದ ವರುಣ್‌ರನ್ನು ಅವರ ಸೋದರಿ ಪ್ರಿಯಾಂಕಾ ವಿರುದ್ಧ ಕಣಕ್ಕೆ ಇಳಿಸಿ ಪ್ರಬಲ ಪೈಪೋಟಿ ನೀಡಲು ಬಿಜೆಪಿ ಯೋಜಿಸಿತ್ತು. ಈ ಕುರಿತು ಬಿಜೆಪಿ ವರುಣ್‌ಗೆ ಪ್ರಸ್ತಾಪವನ್ನೂ ರವಾನಿಸಿತ್ತು. ಆದರೆ ಈ ಪ್ರಸ್ತಾಪ ತಿರಸ್ಕರಿಸಿರುವ ವರುಣ್‌ ಗಾಂಧಿ, ಈ ಬಾರಿ ಚುನಾವಣೆಯಿಂದಲೇ ಹೊರಗುಳಿಯುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

 ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಮಾಜಿ ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಉತ್ತರಪ್ರದೇಶದ ರಾಯ್‌ಬರೇಲಿ ಕ್ಷೇತ್ರದಿಂದ ಗೆದ್ದು ಲೋಕಸಭೆಗೆ ಪ್ರವೇಶಿಸಿದ್ದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ