ಕನ್ನಡಪ್ರಭ ವಾರ್ತೆ ಮದ್ದೂರು
ದೇಗುಲಕ್ಕೆ ಬೆಳಗ್ಗೆ 8 ಗಂಟೆ ಸುಮಾರಿಗೆ ಏಕಾಂಗಿಯಾಗಿ ಧಾವಿಸಿದ ಅಭ್ಯರ್ಥಿ ಯೋಗೇಶ್ವರ್ ತಮ್ಮ ಎರಡು ಹಸ್ತದಲ್ಲಿ ಒಂದೂಕಾಲು ರುಪಾಯಿ ನಾಣ್ಯ ಹಿಡಿದು ಮೂಲ ವಿಗ್ರಹದ ಗರ್ಭಗುಡಿ ಮುಂದೆ ಸುಮಾರು 20 ನಿಮಿಷಗಳ ಕಾಲ ಕುಳಿತು ಚುನಾವಣೆಯಲ್ಲಿ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಅರ್ಚನೆ, ಪೂಜಾ ಕೈಂಕರ್ಯಗಳನ್ನು ಸಲ್ಲಿಸಿದ ನಂತರ ದೇಗುಲದ ಪ್ರಧಾನ ಅರ್ಚಕ ಪ್ರದೀಪ್ ಆಚಾರ್ಯ ಹಾಗೂ ಸಹ ಅರ್ಚಕ ಸುರೇಶ್ ಆಚಾರ್ಯ ಅವರು ಶ್ರೀಆಂಜನೇಯಸ್ವಾಮಿ ಭಾವಚಿತ್ರವಿರುವ ಫೋಟೋ ನೀಡಿ ಹಾಗೂ ಶೇಷವಸ್ತ್ರಹೊದಿಸಿ ಅಭಿನಂದಿಸಿದರು.ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಮತ್ತೊಂದು ದಿನ ದೇಗುಲಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸುವುದಾಗಿ ಹರಕೆ ಕಟ್ಟಿಕೊಂಡರು.
ಚುನಾವಣೆ ವೇಳೆ ಜನರ ಮಧ್ಯೆ ಇರುವುದು ಹಾಗೂ ದೇವರ ಮೊರೆ ಹೋಗುವುದು ಸಹಜ. ಆದ್ದರಿಂದ ಈಗ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ. ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದ ಮತದಾರರು ಅತಿ ಹೆಚ್ಚಿನ ಮತಗಳ ಅಂತರದಿಂದ ನನಗೆ ಗೆಲುವು ತಂದುಕೊಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಎಚ್ಡಿಕೆಗೆ ಕ್ಷೇತ್ರದ ಅಭಿವೃದ್ಧಿಯಲ್ಲಿ ಯೋಜನಾತ್ಮಕ ಕೊಡುಗೆ ಇಲ್ಲ: ಚಲುವರಾಯಸ್ವಾಮಿ
ಕೇಂದ್ರ ಸಚಿವ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಲ್ಲಿ ಬುದ್ಧಿವಂತರು, ಕ್ಷೇತ್ರದ ಅಭಿವೃದ್ಧಿಯಲ್ಲಿ ಯೋಜನಾತ್ಮಕ ಕೊಡುಗೆ ಇಲ್ಲ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ದೂರಿದರು.
ಚನ್ನಪಟ್ಟಣದಲ್ಲಿ ಚುನಾವಣೆ ಎದುರಿಸಿ ನಿಖಿಲ್ ಸೋತಿಲ್ಲ. ಒಮ್ಮೆ ಮಂಡ್ಯ, ಮತ್ತೊಮ್ಮೆ ರಾಮನಗರದಲ್ಲಿ ನಿಂತು ಸೋತಿದ್ದಾರೆ. ಆದರೆ, ಎರಡು ಬಾರಿ ಸೋತು ಅನ್ಯಾಯವಾಗಿದೆ ಎಂದು ನಿಖಿಲ್ ಹೇಳುತಿದ್ದಾರೆ. ಅವರು ಸ್ಥಳೀಯರು ಅಲ್ಲ ಅನ್ನೋದನ್ನು ಜನರು ತಿಳಿದಿದ್ದಾರೆ. ಆ ಕ್ಷೇತ್ರದ ಜನತೆ ಉತ್ತರ ನೀಡಲಿದ್ದಾರೆ ಎಂದರು.