ಕಾಂಗ್ರೆಸ್‌ ಗೆದ್ದರೆ ಮೊದಲ ಅಧಿವೇಶನದಲ್ಲೇ ಸಿಎಎ ರದ್ದು: ಚಿದಂಬರಂ

KannadaprabhaNewsNetwork |  
Published : Apr 22, 2024, 02:05 AM ISTUpdated : Apr 22, 2024, 04:13 AM IST
ಚಿದಂಬರಂ | Kannada Prabha

ಸಾರಾಂಶ

ಇಂಡಿಯಾ ಬ್ಲಾಕ್ ಸರ್ಕಾರ ರಚಿಸಿದ ನಂತರ ಸಂಸತ್ತಿನ ಮೊದಲ ಅಧಿವೇಶನದಲ್ಲಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ರದ್ದುಗೊಳಿಸಲಾಗುವುದು ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದಾರೆ

ತಿರುವನಂತಪುರಂ: ಕೇಂದ್ರದಲ್ಲಿ ಇಂಡಿಯಾ ಬ್ಲಾಕ್ ಸರ್ಕಾರ ರಚಿಸಿದ ನಂತರ ಸಂಸತ್ತಿನ ಮೊದಲ ಅಧಿವೇಶನದಲ್ಲಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ರದ್ದುಗೊಳಿಸಲಾಗುವುದು ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಭಾನುವಾರ ಹೇಳಿದ್ದಾರೆ.

ಸಿಎಎಯನ್ನು ತನ್ನ ಪ್ರಣಾಳಿಕೆಯಲ್ಲಿ ಉಲ್ಲೇಖಿಸದಿದ್ದರೂ ಅದನ್ನು ರದ್ದುಗೊಳಿಸುವುದು ಕಾಂಗ್ರೆಸ್ ಪಕ್ಷದ ಉದ್ದೇಶವಾಗಿದೆ. ಪ್ರಣಾಳಿಕೆ ತುಂಬಾ ಸುದೀರ್ಘವಾಗಿದ್ದ ಕಾರಣ ಅದನ್ನು ಉಲ್ಲೇಖಿಸಿರಲಿಲ್ಲ ಎಂದು ಚಿದಂಬರಂ ಹೇಳಿದರು.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಸಿಪಿಎಂ ನಿರಂತರವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಅದರ ಪ್ರಣಾಳಿಕೆಯು ಸಿಎಎಯನ್ನು ಉಲ್ಲೇಖಿಸಲು ವಿಫಲವಾಗಿದೆ ಎಂದು ಹೇಳಿದ್ದರು. ಅದಕ್ಕೆ ಚಿದು ಈ ರೀತಿ ಉತ್ತರಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಕ್ಕೂಟದ ಮೇಲೆ ಕೇಂದ್ರ ಪ್ರಹಾರ : ತ.ನಾಡು ಮುಖ್ಯಮಂತ್ರಿಗೆ ಸಿಎಂ ಪತ್ರ