ಯಾವುದೇ ಕ್ಷಣ ಸಚಿವ ಸಂಪುಟ ವಿಸ್ತರಣೆ : ವೇಣು

Published : Jul 25, 2026, 07:15 AM IST
KC Venugopal

ಸಾರಾಂಶ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆಯಿಂದ ಮುಂದೂಲ್ಪಟ್ಟಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಯಾವ ಸಂದರ್ಭದಲ್ಲಾದರೂ ಆಗಬಹುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ತಿಳಿಸಿದರು.

ಬೆಂಗಳೂರು  :  ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆಯಿಂದ ಮುಂದೂಲ್ಪಟ್ಟಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಯಾವ ಸಂದರ್ಭದಲ್ಲಾದರೂ ಆಗಬಹುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಸಲಾದ ಸಭೆ

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿ ದೆಹಲಿಯಲ್ಲಿ ಕಳೆದ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಸಲಾದ ಸಭೆಯನ್ನು ನೀಟ್‌ ಪ್ರಶ್ನೆ ಪತ್ರಿಕೆ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. 

ಕೇಂದ್ರ ನಾಯಕರೊಂದಿಗೆ ಶೀಘ್ರದಲ್ಲಿ ಸಭೆ

 ಇದೀಗ ಸಚಿವ ಸಂಪುಟ ಸೇರುವವರ ಪಟ್ಟಿ ಅಂತಿಮಗೊಳಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಕೇಂದ್ರ ನಾಯಕರೊಂದಿಗೆ ಶೀಘ್ರದಲ್ಲಿ ಸಭೆ ನಡೆಸುವ ಮುನ್ಸೂಚನೆ ನೀಡಿರುವ ಕೆ.ಸಿ.ವೇಣುಗೋಪಾಲ್‌, ರಾಜ್ಯದ ಸಚಿವ ಸಂಪುಟ ವಿಸ್ತರಣೆ ಯಾವಾಗ ಬೇಕಾದರೂ ಆಗಬಹುದು. ಅದಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಉಪವಾಸ ಕೈಬಿಡುವಂತೆ ವಾಂಗ್ಚುಕ್‌ ಮನವೊಲಿಸಲು ಕೇಂದ್ರ ಸರ್ಕಾರಕ್ಕೆ ವಕೀಲ-ಕಾಂಗ್ರೆಸ್‌ ಸಂಸದ ನೆರವು!
ಪ್ರಧಾನ್‌ ರಾಜೀನಾಮೆಯೇ ಪ್ರಧಾನ-ಪ್ರಧಾನ್‌ ರಾಜೀನಾಮೆ ಪ್ರಶ್ನೆ ಇಲ್ಲ: ಕೇಂದ್ರ