;Resize=(412,232))
ಬೆಂಗಳೂರು : ನಿಗಮ ಮಂಡಳಿ, ಸಂಪುಟ ಖಾಲಿ ಸ್ಥಾನ ಭರ್ತಿ ಹಾಗೂ ಪಕ್ಷ ಮತ್ತು ಸರ್ಕಾರದ ನಡುವಿನ ಸಮನ್ವಯತೆ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಬುಧವಾರ ರಾಜ್ಯ ನಾಯಕರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಬೆಳಗ್ಗೆ ನೂತನವಾಗಿ ಆಯ್ಕೆಯಾಗಿರುವ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಲಿದ್ದಾರೆ. ಈ ವೇಳೆ ಮುಖ್ಯವಾಗಿ ಎಸ್ಐಆರ್ ಹಾಗೂ ಮುಂದಿನ ಚುನಾವಣಾ ಸಿದ್ಧತೆ ಬಗ್ಗೆ ಮಹತ್ವದ ಸೂಚನೆಗಳನ್ನು ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ವೇಣುಗೋಪಾಲ್ ಹಾಗೂ ಸುರ್ಜೇವಾಲ ಅವರು ಸಭೆ ನಡೆಸಲಿದ್ದಾರೆ.
ಈ ವೇಳೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಭರ್ತಿ ವೇಳೆ ಯಾವ ಶಾಸಕರು ಹಾಗೂ ನಾಯಕರಿಗೆ ಅವಕಾಶ ನೀಡಬೇಕು. ಶಿವಕುಮಾರ್ ಅವರ ಸಂಪುಟದಲ್ಲಿ ಖಾಲಿ ಇರುವ ಎರಡು ಸ್ಥಾನ ಭರ್ತಿ ಬಗ್ಗೆ ಯಾವ ನಡೆ ಅನುಸರಿಸಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ. ಜತೆಗೆ 2028ರ ಚುನಾವಣೆಗೆ ಈಗಲೇ ತಯಾರಿ ಶುರು ಮಾಡಬೇಕು. ಇದಕ್ಕಾಗಿ ಯಾವ ರೀತಿಯ ಕಾರ್ಯಕ್ರಮಗಳನ್ನು ರೂಪಿಸಬೇಕು. ಪಕ್ಷ ಹಾಗೂ ಸರ್ಕಾರದ ನಡುವೆ ಯಾವ ರೀತಿ ಸಮನ್ವಯತೆ ಸಾಧಿಸಬೇಕು ಎಂಬ ಬಗ್ಗೆಯೂ ಚರ್ಚಿಸುವ ಸಾಧ್ಯತೆಯಿದೆ.