ಕನ್ನಡಪ್ರಭ ವಾರ್ತೆ ಕೋಲಾರ ನಿರ್ಮಿತಿ ಕೇಂದ್ರ-ಕ್ರೆಡಿಲ್ ಇಲಾಖೆ ಶಾಸಕರು ಮತ್ತು ಎಂಎಲ್ಸಿಗಳನ್ನು ಸಾಕುವ ಕೇಂದ್ರಗಳಾಗಿವೆ ಎಂದು ನಗರಸಭೆ ಮಾಜಿ ಅಧ್ಯಕ್ಷ ಮುಬಾರಕ್ ಮಾಡಿರು ಆರೋಪಕ್ಕೆ ತಿರುಗೇಟು ನೀಡಿರುವ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ದಾಖಲೆ ಸಮೇತ ಆರೋಪ ಸಾಬೀತು ಮಾಡುವಂತೆ ಸವಾಲು ಹಾಕಿದ್ದಾರೆ.
ಆರೋಪ ಸಾಬೀತುಪಡಿಸಿ
ಸದಸ್ಯ ಎನ್.ಅಂಬರೀಷ್ ಮಾತನಾಡಿ, ಮುಬಾರಕ್ ಸಹ ೨೦೧೪ ರಿಂದ ೨೦೧೬ ರ ವರೆಗೆ ಅಧ್ಯಕ್ಷರಾಗಿ ಸುಮಾರು ೧.೪೦ ಕೋಟಿ ಅನುದಾನ ನಿರ್ಮಿತಿ ಕೇಂದ್ರಕ್ಕೆ ಹಾಗೂ ಕಿಯೋನಿಕ್ಸ್ ಇಲಾಖೆಗೆ ಬಿಡುಗಡೆ ಮಾಡಿದ್ದರು. ಆವತ್ತು ಯಾವ ಉದ್ದೇಶಕ್ಕಾಗಿ ಕೊಟ್ಟಿದ್ದೀರಿ. ಇವತ್ತು ಅ ಇಲಾಖೆಗಳ ಬಗ್ಗೆ ಆರೋಪ ಮಾಡಲಿಕ್ಕೆ ಯಾವ ನೈತಿಕತೆ ಇದೆ. ಆರೋಪ ಮಾಡುವ ಮೊದಲು ದಾಖಲೆ ನೀಡಲಿ ಇಲ್ಲದೇ ಹೋದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ಸದಸ್ಯರಾದ ಸುರೇಶ್ ಬಾಬು, ಸದಸ್ಯ ಅಫ್ಸರ್, ರಫೀ ಮಾತನಾಡಿದರು. ನಗರಸಭೆ ಉಪಾಧ್ಯಕ್ಷೆ ಸಂಗೀತಾ ಜಗದೀಶ್, ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಖಾನ್ ಸದಸ್ಯರಾದ ಹಿದಾಯಿತ್ ಉಲ್ಲಾ, ಏಜಾಜ್, ಗುಣಶೇಖರ್, ಶ್ಯಾಮೀರ್, ಏಜಾಜ್ ಪಾಷ ಇದ್ದರು.