ಕಾಂಗ್ರೆಸ್ಸಲ್ಲಿ ಸಚಿವ ಸ್ಥಾನಕ್ಕಾಗಿ ಹೆಚ್ಚಿದ ಕೂಗು!

Published : Apr 13, 2026, 11:54 AM IST
Congress

ಸಾರಾಂಶ

ಯಾವ ಜಿಲ್ಲೆಯ ಹಿರಿಯ ಶಾಸಕರಿಗೆ ಅವಕಾಶ ಇದೆಯೋ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಹೈಕಮಾಂಡ್‌ಗೆ ಮನವಿ ಮಾಡಲು ಬಂದಿದ್ದೇವೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಪ್ರತಿಕ್ರಿಯಿಸಿದ್ದಾರೆ.

 ನವದೆಹಲಿ: ಯಾವ ಜಿಲ್ಲೆಯ ಹಿರಿಯ ಶಾಸಕರಿಗೆ ಅವಕಾಶ ಇದೆಯೋ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಹೈಕಮಾಂಡ್‌ಗೆ ಮನವಿ ಮಾಡಲು ಬಂದಿದ್ದೇವೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಪ್ರತಿಕ್ರಿಯಿಸಿದ್ದಾರೆ.

ಮೂವತ್ತು ಶಾಸಕರು ದೆಹಲಿಗೆ

ದೆಹಲಿಯಲ್ಲಿ ಮಾತನಾಡಿದ ಅವರು, ಹಿರಿಯ ಮೂವತ್ತು ಶಾಸಕರು ದೆಹಲಿಗೆ ಬಂದಿದ್ದೇವೆ. ಬೆಂಗಳೂರಿನಲ್ಲಿ ಎರಡು ಸಭೆ ಮಾಡಿ, ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದೇವೆ. ಎರಡೂವರೆ ವರ್ಷ ಆದ್ಮೇಲೆ ಸಚಿವ ಸಂಪುಟ ಪುನರ್ ರಚನೆ ಮಾಡಬೇಕು ಎಂದು ಹೇಳಿದ್ದೇವೆ. ಇದನ್ನು ಹೈಕಮಾಂಡ್‌ಗೂ ಮನವರಿಕೆ ಮಾಡಲು ಬಂದಿದ್ದೇವೆ. ನಾಳೆ, ನಾಡಿದ್ದು ವರಿಷ್ಠರನ್ನು ಭೇಟಿ ಮಾಡಲಿದ್ದೇವೆ ಎಂದು ತಿಳಿಸಿದರು.

ಎರಡು ದಿನ ದೆಹಲಿಯಲ್ಲಿ

ಎರಡು ದಿನ ದೆಹಲಿಯಲ್ಲಿ ಇರುತ್ತೇವೆ. ಯಾವ ಜಿಲ್ಲೆಯಲ್ಲಿ ಹಿರಿಯ ಶಾಸಕರಿಗೆ ಅವಕಾಶ ಇದೆ ಅವರಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಹೇಳುತ್ತೇವೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಖಾಸಗಿ ಬಿಇ ಕಾಲೇಜು ಸೀಟು ಶುಲ್ಕ 7.5% ಹೆಚ್ಚಳ
ಸಿಎಂ ಆಗುವ ಸ್ವಾರ್ಥಕ್ಕೆ ಧರಂ ಸರ್ಕಾರ ತೆಗೆದವರು ನೀವಲ್ಲವೆ : ಎಚ್‌ಡಿಕೆ ವಿರುದ್ಧ ಎಸ್‌ಟಿಎಸ್ ಕಿಡಿ