- ಡಿ.18ರಿಂದ 20ರವರೆಗೆ ಕೇಂದ್ರ ನಾಯಕರ ಜತೆ ಸಭೆ
ಈ ಕುರಿತು ಖುದ್ದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಅವರು ಸಿಎಂ, ಡಿಸಿಎಂ ಹಾಗೂ ಕೆಲ ಸಚಿವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಡಿ. 18ರಂದು ದೆಹಲಿಗೆ ತೆರಳಲಿರುವ ನಾಯಕರು, ಡಿ. 20ರವರೆಗೆ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಡಿ. 21ರಂದು ಎಲ್ಲ ನಾಯಕರು ದೆಹಲಿಯಿಂದ ಬೆಂಗಳೂರಿಗೆ ವಾಪಾಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಏನು ಚರ್ಚೆ?:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ನಾಯಕರೊಂದಿಗೆ ಲೋಕಸಭೆ ಚುನಾವಣೆ ತಯಾರಿ, ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಮತ್ತಿತರ ವಿಚಾರಗಳ ಬಗ್ಗೆ ಮೂರು ದಿನಗಲ ಕಾಲ ಚರ್ಚೆ ನಡೆಯಲಿದೆ. ಈ ವೇಳೆ ನಿಗಮ-ಮಂಡಳಿ ಅಧ್ಯಕ್ಷರ ಆಯ್ಕೆ, ಅದರಿಂದ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕಾಗುವ ಲಾಭದ ಬಗ್ಗೆಯೂ ಸಮಾಲೋಚಿಸಲಾಗುತ್ತದೆ. ಹಾಗೆಯೇ, ಗ್ಯಾರಂಟಿ ಯೋಜನೆಗಳ ಜಾರಿ, ಪಂಚರಾಜ್ಯ ಚುನಾವಣೆ ಫಲಿತಾಂಶದಿಂದ ರಾಜ್ಯದಲ್ಲಾಗಿರುವ ಬದಲಾವಣೆ ಬಗ್ಗೆಯೂ ಕೇಂದ್ರ ನಾಯಕರು ವರದಿ ಪಡೆಯುವ ಸಾಧ್ಯತೆಗಳಿವೆ.