ರಾಜ್ಯಪಾಲರನ್ನು ತೆಗಳಿದ ಮಳವಳ್ಳಿ ಕಾಂಗ್ರೆಸ್‌ ಶಾಸಕ ಪಿ. ಎಂ. ನರೇಂದ್ರ ಸ್ವಾಮಿ ವಿರುದ್ಧ ದೂರು

KannadaprabhaNewsNetwork |  
Published : Aug 20, 2024, 01:03 AM ISTUpdated : Aug 20, 2024, 04:17 AM IST
೧೯ಕೆಎಂಎನ್‌ಡಿ-೩ರಾಜ್ಯಪಾಲರ ವಿರುದ್ಧ ಹಗುರವಾಗಿ ಮಾತನಾಡಿರುವ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ದೂರು ಸಲ್ಲಿಸಿದರು. | Kannada Prabha

ಸಾರಾಂಶ

ರಾಜ್ಯಪಾಲರ ವಿರುದ್ಧ ಹಗುರವಾಗಿ ಮಾತನಾಡಿರುವ ಮಳವಳ್ಳಿಯ ಕಾಂಗ್ರೆಸ್‌ ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ಸೋಮವಾರ ದೂರು ನೀಡಿದರು.

ಮಂಡ್ಯ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಹಗುರವಾಗಿ ಮಾತನಾಡಿರುವ ಮಳವಳ್ಳಿಯ ಕಾಂಗ್ರೆಸ್‌ ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ಸೋಮವಾರ ದೂರು ನೀಡಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ್ದ ಶಾಸಕ ನರೇಂದ್ರಸ್ವಾಮಿ, ‘ಸುಪ್ರೀಂಕೋರ್ಟ್‌ ನಿಂದ ಛೀಮಾರಿ ಹಾಕಿಸಿಕೊಂಡ ಅಯೋಗ್ಯ, ಮುಠ್ಠಾಳ ಅರ್ಜಿ ಕೊಡ್ತಾನೆ. ಅವನ ಅರ್ಜಿ ಇಟ್ಕೊಂಡು ನೋಟಿಸ್‌ ಕೊಡ್ತೀರಲ್ಲಪ್ಪ. ರಾಜ್ಯಪಾಲ ಆಗುವುದಕ್ಕೆ ನೀನು ನಾಲಾಯಕ್‌’ ಎಂದು ರಾಜ್ಯಪಾಲರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಮಾಧ್ಯಮ ವಕ್ತಾರ ಸಿ.ಟಿ.ಮಂಜುನಾಥ್ ನೇತೃತ್ವದಲ್ಲಿ ದೂರು ನೀಡಲಾಯಿತು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಬಾಯಿಮುಚ್ಕೊಂಡಿದ್ರೆ ಒಳ್ಳೇದು : ಮೂವರು ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ವಾರ್ನಿಂಗ್
ಮಹಾತ್ಮ ಗಾಂಧಿ ಭಾರತಕ್ಕಲ್ಲ ಪಾಕ್‌ಗೆ ರಾಷ್ಟ್ರಪಿತ: ಯತ್ನಾಳ್‌