ಹರಿ ಸೇರಿ ನಾಲ್ವರಿಗೆ ಕೈ ಎಂಎಲ್‌ಸಿ ಟಿಕೆಟ್‌

Published : Jun 04, 2026, 05:22 AM IST
KPCC President BK Hariprasad

ಸಾರಾಂಶ

ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಜೂ. 18ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ ತಾನು ಗೆಲ್ಲುವ ಸಾಧ್ಯತೆ ಹೊಂದಿರುವ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಖೈರುಗೊಳಿಸಿದ್ದು, ಬಿ.ಕೆ. ಹರಿಪ್ರಸಾದ್‌, ತಿಪ್ಪಣ್ಣಪ್ಪ ಕಮಕನೂರ, ಪಿ.ವಿ. ಮೋಹನ್‌ ಹಾಗೂ ಶಿವಣ್ಣ ಮಳವಳ್ಳಿ ಅವರ ಹೆಸರು ಘೋಷಿಸಿದೆ.

 ಬೆಂಗಳೂರು :  ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಜೂ. 18ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ ತಾನು ಗೆಲ್ಲುವ ಸಾಧ್ಯತೆ ಹೊಂದಿರುವ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಖೈರುಗೊಳಿಸಿದ್ದು, ಬಿ.ಕೆ. ಹರಿಪ್ರಸಾದ್‌, ತಿಪ್ಪಣ್ಣಪ್ಪ ಕಮಕನೂರ, ಪಿ.ವಿ. ಮೋಹನ್‌ ಹಾಗೂ ಶಿವಣ್ಣ ಮಳವಳ್ಳಿ ಅವರ ಹೆಸರು ಘೋಷಿಸಿದೆ.

ಈ ಪೈಕಿ ಹಾಲಿ ವಿಧಾನಪರಿಷತ್‌ ಸದಸ್ಯರಾಗಿರುವ ಬಿ.ಕೆ. ಹರಿಪ್ರಸಾದ್ ಹಾಗೂ ತಿಪ್ಪಣ್ಣಪ್ಪ ಅವರ ಮರು ಆಯ್ಕೆಗೆ ಅವಕಾಶ ನೀಡಿದ್ದರೆ, ಪಿ.ವಿ. ಮೋಹನ್‌ ಹಾಗೂ ಶಿವಣ್ಣ ಮಳವಳ್ಳಿ ಅವರಿಗೆ ಹೊಸದಾಗಿ ಅವಕಾಶ ನೀಡಲಾಗಿದೆ.

ಒಬಿಸಿಗೆ ಮಹಾ ಮನ್ನಣೆ:

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರಾಗಿ ನೇಮಕಗೊಂಡಿರುವ ಬೆನ್ನಲ್ಲೇ, ಹಿರಿಯ ನಾಯಕ ಹಾಗೂ ಈಡಿಗ ಸಮುದಾಯದ ಬಿ.ಕೆ. ಹರಿಪ್ರಸಾದ್ ಮತ್ತು ಕೋಲಿ ಸಮುದಾಯದ (ಗಂಗಾಮತಸ್ಥ) ತಿಪ್ಪಣ್ಣಪ್ಪ ಕಮಕನೂರು, ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕುರುಬ ಸಮುದಾಯದ ಶಿವಣ್ಣ ಮಳವಳ್ಳಿ ಹಾಗೂ ಮೂಲತಃ ಮಂಗಳೂರಿನವರಾದ ಬಿಲ್ಲವ ಸಮುದಾಯದ ಪಿ.ವಿ.ಮೋಹನ್ ಅವರಿಗೆ ಅವಕಾಶ ನೀಡುವ ಮೂಲಕ ಪರಿಷತ್‌ ಸದಸ್ಯರ ಆಯ್ಕೆಯಲ್ಲಿ ಸಂಪೂರ್ಣವಾಗಿ ಒಬಿಸಿ ಸಮುದಾಯಗಳಿಗೆ ಮನ್ನಣೆ ನೀಡಿದೆ.

ಯಾರ್‍ಯಾರಿಗೆ ಟಿಕೆಟ್‌?

ಬಿ.ಕೆ. ಹರಿಪ್ರಸಾದ್‌- ಈಡಿಗ

ತಿಪ್ಪಣ್ಣಪ್ಪ ಕಮಕನೂರು- ಕೋಲಿ

ಶಿವಣ್ಣ ಮಳವಳ್ಳಿ- ಕುರುಬ

ಪಿ.ವಿ. ಮೋಹನ್‌- ಬಿಲ್ಲವ

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಹರಿಪ್ರಸಾದ್‌ ಕೆಪಿಸಿಸಿ ಅಧ್ಯಕ್ಷ
ಮೊದಲ ಸಂಪುಟ ಸಭೆಯಲ್ಲೇ ಡಿಕೆಶಿ ಸಿಕ್ಸರ್‌!