ಕನ್ನಡಪ್ರಭ ವಾರ್ತೆ ಬೆಂಗಳೂರು
ಜಯನಗರದ ಜೆ.ಎಸ್.ಎಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಹಾಲುಮತ ಕುರುಬ ಸಮುದಾಯದ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.
ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಹಿಂದುಳಿದ ವರ್ಗಗಳ ಒಟ್ಟಾರೆ ಅಭಿವೃದ್ಧಿಗೆ ನರೇಂದ್ರ ಮೋದಿ ಅವಿರತ ಶ್ರಮಿಸುತ್ತಿದ್ದಾರೆ. ಬಡ ಕುಟುಂಬದಿಂದ ಬಂದ ಮೋದಿಯವರಿಗೆ ಬಡವರ, ಹಿಂದುಳಿದವರ ನೋವು ಗೊತ್ತಿದ್ದು, ಅನೇಕ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ. ಆದರೆ ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್, ಹಿಂದುಳಿದ ವರ್ಗಗಳ ಹಿತದ ಬಗ್ಗೆ ಯೋಚಿಸಿಯೇ ಇರಲಿಲ್ಲ ಎಂದು ಟೀಕಿಸಿದರು.ಆಯೋಗಕ್ಕೆ ಸಾಂವಿಧಾನಿಕ ಮಾನ್ಯತೆ:
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ, 5 ಕ್ಯಾಬಿನೆಟ್ ಶ್ರೇಣಿಯ ಸಚಿವರೊಂದಿಗೆ ಒಟ್ಟು 29 ಸಚಿವರು ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದಾರೆ. ಭಾರತದ ಇತಿಹಾಸದಲ್ಲಿಯೇ ಓಬಿಸಿ ಸಮುದಾಯಕ್ಕೆ ಅತೀ ಹೆಚ್ಚಿನ ಪ್ರಾಧಾನ್ಯತೆ ಸಿಕ್ಕಿದ್ದು ಮೋದಿ ನೇತೃತ್ವದ ಸರ್ಕಾರದಲ್ಲಿ ಎಂಬುದು ವಿಶೇಷವಾಗಿದೆ ಎಂದರು.ಶಾಸಕರಾದ ರವಿ ಸುಬ್ರಹ್ಮಣ್ಯ, ಸಿ.ಕೆ.ರಾಮಮೂರ್ತಿ, ರಾಜ್ಯ ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷ ರಘು ಕೌಟಿಲ್ಯ, ಕಾರ್ಯದರ್ಶಿ ಬಿ.ಸೋಮಶೇಖರ್, ಹಾಲುಮತ ಸಮಾಜದ ಹಲವು ಮುಖಂಡರು ಉಪಸ್ಥಿತರಿದ್ದರು.