ನವದೆಹಲಿ: ಲೋಕಸಭಾ ಚುನಾವಣೆ ಸಂಬಂಧ ಸಿಪಿಎಂ ತನ್ನ ಪ್ರಣಾಳಿಕೆಯನ್ನು ಶುಕ್ರವಾರ ಇಲ್ಲಿ ಬಿಡುಗಡೆ ಮಾಡಿದೆ. ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಪ್ರಜಾಪ್ರಭುತ್ವದ ಜಾತ್ಯತೀತ ಗುಣಗಳಿಗೆ ಧಕ್ಕೆ ಬಂದಿದೆ. ಹೀಗಾಗಿ ದೇಶವನ್ನು ಉಳಿಸುವ ಸಲುವಾಗಿ ಈ ಬಾರಿ ಬಿಜೆಪಿಯನ್ನು ಸೋಲಿಸಬೇಕಿದೆ ಎಂದು ಅದು ಕರೆಕೊಟ್ಟಿದೆ.
ಪ್ರಣಾಳಿಕೆಗಳ ಮುಖ್ಯಾಂಶಗಳು
- ಸಿಎಎ, ಯುಎಪಿಎ ಮತ್ತು ಪಿಎಂಎಲ್ಎ ಕಾಯ್ದೆಗಳನ್ನು ರದ್ದುಗೊಳಿಸಲಾಗುವುದು.- ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ/ ಯುವಕರಿಗೆ ಉದ್ಯೋಗ ಭರವಸೆ
- ಮಕ್ಕಳ ಕಲ್ಯಾಣಕ್ಕೆ ಒತ್ತು/ ಯುವಕರಿಗಾಗಿ ರಾಷ್ಟ್ರೀಯ ಯುವ ನೀತಿ ಜಾರಿ
- ಉಚಿತ ಆರೋಗ್ಯ ಕೊಡಿಸುವುದು/ ಮರಣದಂಡನೆಯ ಕಾಯ್ದೆ ರದ್ದು.