ಮೈಸೂರಿನಲ್ಲಿ ಶನಿವಾರ ಬಿಜೆಪಿ-ಜೆಡಿಎಸ್‌ ಪಾದಯಾತ್ರೆಯ ಸಮಾರೋಪ : ದೆಹಲಿ ನಾಯಕರು ಬರಲ್ಲ- ವಿಜಯೇಂದ್ರ

KannadaprabhaNewsNetwork |  
Published : Aug 10, 2024, 01:40 AM ISTUpdated : Aug 10, 2024, 04:13 AM IST
ಬಿ.ವೈ.ವಿಜಯೇಂದ್ರ | Kannada Prabha

ಸಾರಾಂಶ

ಮೈಸೂರಿನಲ್ಲಿ ಶನಿವಾರ ನಡೆಯಲಿರುವ ಬಿಜೆಪಿ-ಜೆಡಿಎಸ್‌ ಪಾದಯಾತ್ರೆಯ ಸಮಾರೋಪ ಸಮಾವೇಶದಲ್ಲಿ ಕೇಂದ್ರದ ಯಾವುದೇ ನಾಯಕರು ಪಾಲ್ಗೊಳ್ಳುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

 ಶ್ರೀರಂಗಪಟ್ಟಣ :  ಮೈಸೂರಿನಲ್ಲಿ ಶನಿವಾರ ನಡೆಯಲಿರುವ ಬಿಜೆಪಿ-ಜೆಡಿಎಸ್‌ ಪಾದಯಾತ್ರೆಯ ಸಮಾರೋಪ ಸಮಾವೇಶದಲ್ಲಿ ಕೇಂದ್ರದ ಯಾವುದೇ ನಾಯಕರು ಪಾಲ್ಗೊಳ್ಳುತ್ತಿಲ್ಲ, ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತಿತರ ರಾಜ್ಯ ನಾಯಕರು ಮಾತ್ರ ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

ಶ್ರೀರಂಗಪಟ್ಟಣದಲ್ಲಿ ಪಾದಯಾತ್ರೆಯ ಕೊನೇ ದಿನವಾದ ಶುಕ್ರವಾರ ಮಾತನಾಡಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಾವು ಸಿದ್ದರಾಮಯ್ಯ ಪರ ಇರುವುದಾಗಿ ಹೇಳಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಆ ರೀತಿ ಹೇಳಿದ್ದಾರೆಂದರೆ ಅವರು ಸಿದ್ದರಾಮಯ್ಯ ವಿರುದ್ಧ ಸಂಚು ರೂಪಿಸಿದ್ದಾರೆಂದೇ ಅರ್ಥ ಎಂದು ವ್ಯಂಗ್ಯವಾಡಿದರು.

ಇದೇ ವೇಳೆ, ಮೈಸೂರಿನಲ್ಲಿ ಕಾಂಗ್ರೆಸ್ ಸಮಾವೇಶ ಮಾಡಿದೆ ಅಂದರೆ ಅವರಿಗೆ ನಮ್ಮ ಹೋರಾಟದ ಬಿಸಿ ತಟ್ಟಿದೆ. ಸಿದ್ದರಾಮಯ್ಯ ಅವರ ಕೊನೇ ಕ್ಷಣ ಬಂದಿದೆ. ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವ ಸಮಯ ಸನ್ನಿಹಿತವಾಗಿದೆ ಎಂದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಸದನದಲ್ಲಿ ಹೆಸರು ತಪ್ಪಾಗಿ ಹೇಳಿದರೆ ದಂಡ ಫಿಕ್ಸ್‌!
''ದ್ವೇಷ ಭಾಷಣ ಎಂದರೆ ಯಾವುದು ಅಂತ ಹೇಳಿ ''