ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ರಾಜ್ಯ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಶಾಸಕ ಜಿ.ಡಿ.ಹರೀಶ್‌ ಗೌಡ

KannadaprabhaNewsNetwork | Updated : Jun 19 2025, 12:35 AM IST

ಜೆಡಿಎಸ್‌ ಅಥವಾ ಬಿಜೆಪಿ ನಾಯಕರು ಸರ್ಕಾರ ಬೀಳಿಸುವುದಾಗಿ ಹೇಳಿಲ್ಲ. ಕಾಂಗ್ರೆಸ್ ಪಕ್ಷದವರೇ ಸರ್ಕಾರ ಬೀಳಿಸುತ್ತಾರೆ ಅನಿಸುತ್ತದೆ. ಎಲ್ಲಾ ಕ್ಷೇತ್ರಗಳಲ್ಲೂ ಮತದಾರರು ಅಭಿವೃದ್ಧಿ ಬಯಸುತ್ತಾರೆ. ಚುನಾವಣೆ ವೇಳೆ ಪಕ್ಷ.ಗೆದ್ದ ಮೇಲೆ ಪಕ್ಷ ಇಲ್ಲದೆ ಅಭಿವೃದ್ಧಿಪರವಾಗಿ ಚಿಂತಿಸಬೇಕು.

ಕನ್ನಡಪ್ರಭ ವಾರ್ತೆ ಮೈಸೂರು

ರಾಜ್ಯದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಶಾಸಕರ ಕ್ಷೇತ್ರಗಳಲ್ಲಿ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಶಾಸಕ ಜಿ.ಟಿ.ಹರೀಶ್‌ ಗೌಡ ಆರೋಪಿಸಿದರು.

ಅನುದಾನ ಹಂಚಿಕೆ ಮಾಡುವಾಗ ಯಾವ ಕ್ಷೇತ್ರಕ್ಕೆ ಕೊಡಬೇಕು, ಯಾರಿಗೆ ಕೊಡಬಾರದು ಎಂಬುದನ್ನು ಕಾಂಗ್ರೆಸ್ ಪಕ್ಷದವರೇ ತೀರ್ಮಾನಿಸುತ್ತಿದ್ದಾರೆ. ರಾಜ್ಯದಲ್ಲಿ ಪ್ರತಿಪಕ್ಷಗಳ ಶಾಸಕರು ಇರುವ ಕಡೆ ಸರ್ಕಾರ ಬೇಕಾಬಿಟ್ಟಿಯಾಗಿ ಅನುದಾನ ಕೊಡುತ್ತಿದೆ. ಕಾಂಗ್ರೆಸ್ ಪಕ್ಷದ ಶಾಸಕರಿಗೆ ಹೆಚ್ಚು ಅನುದಾನ ಕೊಡುತ್ತಿದ್ದಾರೆ ಜೆಡಿಎಸ್‌ ಮತ್ತು ಬಿಜೆಪಿ ಶಾಸಕರಿಗೆ ಕಡಿಮೆ ಅನುದಾನ ನೀಡಲಾಗುತ್ತಿದೆ ಎಂದು ಅವರು ದೂರಿದರು.

ಮುಖ್ಯಮಂತ್ರಿಗಳು ಎಲ್ಲಾ ಶಾಸಕರನ್ನು ಸಮನಾಗಿ ಕಾಣಬೇಕು ಎಂದು ನಾವು ಮನವಿ ಮಾಡುವುದಾಗಿ ಹೇಳಿದರು.

ವಿಧಾನಸೌಧದ ಮೆಟ್ಟಿಲ ಮೇಲೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುವಾರ್ ಬಿದ್ದಾಕ್ಷಣ ಸರ್ಕಾರ ಬೀಳೋದಿಲ್ಲ. ಸರ್ಕಾರ 140 ಸೀಟು ತೆಗೆದುಕೊಂಡು ಅಧಿಕಾರಕ್ಕೆ ಬಂದಿರುವ ಕಾರಣ ಭದ್ರವಾಗಿದೆ. ಸರ್ಕಾರ ಬೀಳುತ್ತಾ ಅಥವಾ ಇಲ್ಲವೇ ಏನು ಎಂಬುದನ್ನು ಆ ಪಕ್ಷದವರನ್ನೇ ಕೇಳಬೇಕು. ರಾಜ್ಯ ಸರ್ಕಾರದ ಬಗ್ಗೆ ಕಾಂಗ್ರೆಸ್ ಪಕ್ಷದ ಶಾಸಕರೇ ಅಸವಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.

ಜೆಡಿಎಸ್‌ ಅಥವಾ ಬಿಜೆಪಿ ನಾಯಕರು ಸರ್ಕಾರ ಬೀಳಿಸುವುದಾಗಿ ಹೇಳಿಲ್ಲ. ಕಾಂಗ್ರೆಸ್ ಪಕ್ಷದವರೇ ಸರ್ಕಾರ ಬೀಳಿಸುತ್ತಾರೆ ಅನಿಸುತ್ತದೆ. ಎಲ್ಲಾ ಕ್ಷೇತ್ರಗಳಲ್ಲೂ ಮತದಾರರು ಅಭಿವೃದ್ಧಿ ಬಯಸುತ್ತಾರೆ. ಚುನಾವಣೆ ವೇಳೆ ಪಕ್ಷ.ಗೆದ್ದ ಮೇಲೆ ಪಕ್ಷ ಇಲ್ಲದೆ ಅಭಿವೃದ್ಧಿಪರವಾಗಿ ಚಿಂತಿಸಬೇಕು ಎಂದರು.

ನಿಖಿಲ್ ಕುವಾರಸ್ವಾಮಿ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಎಚ್.ಡಿ. ದೇವೇಗೌಡರು ಮತ್ತು ಎಚ್.ಡಿ. ಕುಮಾರಸ್ವಾಮಿ ಅವರು ನಿಖಿಲ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುತ್ತೇವೆ ಅಂತ ಎಲ್ಲೂ ಹೇಳಿಲ್ಲ. ನಿಖಿಲ್ ಅವರು ಪಕ್ಷ ಸಂಘಟನೆ ಮಾಡಲಿಕ್ಕೆ ಸಾಮಾನ್ಯ ಕಾರ್ಯಕರ್ತನಂತೆ ಮುಂದೆ ಬಂದಿದ್ದಾರೆ. ಅಧಿಕಾರ ಸಿಗುತ್ತದೆ ಎಂದು ಅವರು ಮುಂದಾಗಿಲ್ಲ ಎಂದರು.

ಈ ಸರ್ಕಾರ ಇರುವತನಕ ಜಿಪಂ, ತಾಪಂ ಚುನಾವಣೆ ನಡೆಸುವುದಿಲ್ಲ ಎನಿಸುತ್ತದೆ. ಸರ್ಕಾರಕ್ಕೆ ಪ್ರಜಾಪ್ರಭುತ್ವ ಹಾಗೂ ಅಧಿಕಾರ ವೀಕೇಂದ್ರೀಕರಣ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲ. ಕೆಲವು ನಾಯಕರು ಬರೀ ಮಾತನಾಡುತ್ತಿದ್ದಾರೆಯೇ ಹೊರತು ಅದನ್ನು ಬಲಪಡಿಸುವ ಕೆಲಸ ಮಾಡುತ್ತಿಲ್ಲ ಎಂದರು.

ವಿನಾಕಾರಣ ಚುನಾವಣೆ ಮುಂದೂಡಿತ್ತು: ಜಿ.ಡಿ.ಹರೀಶ್‌ ಗೌಡ

ಕನ್ನಡಪ್ರಭ ವಾರ್ತೆ ಮೈಸೂರು

ಆಡಳಿತ ಮಂಡಳಿಯ ಅವಧಿ ಮುಗಿದ ಮೇಲೆ ಚುನಾವಣೆ ನಡೆಸದೆ ವಿನಾಕಾರಣ ಮುಂದೂಡಲಾಗುತ್ತಿದ್ದು, ಸರ್ಕಾರ ಒಂದೂವರೆ ವರ್ಷಗಳ ಕಾಲ ಚುನಾವಣೆ ನಡೆಸದಿರುವ ಕುರಿತು ಕಾರಣವನ್ನೇ ಹೇಳಲಿಲ್ಲ ಎಂದು ಶಾಸಕ ಜಿ.ಡಿ. ಹರೀಶ್‌ ಗೌಡ ಆರೋಪಿಸಿದರು.

ಎಂಡಿಸಿಸಿ ಬ್ಯಾಂಕ್‌ ನಿರ್ದೇಶಕರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರಿಂದ ಸರ್ಕಾರ ಚುನಾವಣೆ ನಡೆಸುತ್ತಿದೆ. 2023 ರಲ್ಲೇ ಆಗಬೇಕಾದ ಚುನಾವಣೆಯನ್ನು ಈಗ ಮಾಡಲಾಗುತ್ತಿದೆ. ಸುಮಾರು ಒಂದೂವರೆ ವರ್ಷ ಚುನಾವಣೆ ಮುಂದೂಡಿದ್ದು ಏಕೆ ಎಂಬುದು ನಿಗೂಢವಾಗಿದೆ. ಈ ಸಂಬಂಧ ನ್ಯಾಯಾಲಕ್ಕೆ ಹೋದ ಮೇಲೆ ಚುನಾವಣೆ ಮಾಡಲಾಗುತ್ತಿದೆ ಎಂದು ಕಟುವಾಗಿ ಟೀಕಿಸಿದರು.

ಸಹಕಾರಿ ಕ್ಷೇತ್ರದಲ್ಲಿ ತೀವ್ರ ಪೈಪೋಟಿ ಇತ್ತೀಚೆಗೆ ಎದುರಾಗಿದೆ. ಆದರೆ ಸರ್ಕಾರ ಚುನಾವಣೆ ನಡೆಸದೆ ಸತಾಯಿಸುತ್ತಿತ್ತು. ಸಹಕಾರಿ ಚುನಾವಣೆಯಲ್ಲಿ ಸಹಕಾರ ಸಂಘದ ಪ್ರತಿನಿಧಿಗಳು ಸ್ಪರ್ಧಿಸಬಹುದು. ನಾನು ಕಳೆದ 10 ವರ್ಷದ ಅವಧಿಲ್ಲಿ ಎಂಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಎರಡೂ ಜಿಲ್ಲೆಗಳ ಸಹಕಾರ ಸಂಘಗಳ ಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇನೆ. ನಾನು ಅಧ್ಯಕ್ಷನಾಗಿದ ಆರಂಭದಲ್ಲಿ ಕೇವಲ 370 ರೂ. ಠೇವಣಿ ಇತ್ತು. ನಾನು ಅಧ್ಯಕ್ಷ ಸ್ಥಾನದಿಂದ ಇಳಿಯುವ ವೇಳೆ 1 ಸಾವಿರ ಕೋಟಿ ಠೇವಣಿ ಇತ್ತು. ನನಗೆ ಈ ಬಾರಿಯೂ ಗೆಲ್ಲುವ ವಿಶ್ವಾಸವಿದೆ ಎಂದರು.

ಎರಡು ಜಿಲ್ಲೆಗಳ ಸಹಕಾರಿಗಳು ಪಕ್ಷಾತೀತವಾಗಿ ಮತ್ತು ಜಾತ್ಯಾತೀತವಾಗಿ ನನ್ನನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ.