ಕನ್ನಡಪ್ರಭ ವಾರ್ತೆ ಮೈಸೂರುಟೀಕೆ, ಸವಾಲು ಎದುರಿಸಿ ರಾಜಕೀಯದಲ್ಲಿ ಮುಂದುವರೆಯುತ್ತೇನೆ ಎಂದು ರಾಜವಂಶಸ್ಥ ಹಾಗೂ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.
ಸಂವಿಧಾನದ ಪ್ರಕಾರ ನಾನೂ ಸಾಮಾನ್ಯ ಪ್ರಜೆ. ಜನರು ಆಶೀರ್ವಾದ ಮಾಡಿದರೆ ಸಾಮಾನ್ಯ ವ್ಯಕ್ತಿಯಾಗಿ ಕೆಲಸ ಮಾಡುತ್ತೇನೆ. ಎಸಿ ರೂಂನಿಂದ ಹೊರ ಬಂದು ಸಾರ್ವಜನಿಕರಿಗಾಗಿ ಕೆಲಸ ಮಾಡುವುದು ಕಷ್ಟವೇನಲ್ಲ, ರಾಜವಂಶಸ್ಥರು ಎಂಬ ಪ್ರೀತಿ, ವಿಶ್ವಾಸ, ನಂಬಿಕೆ ನಮ್ಮ ಜನರಲ್ಲಿರುವುದು ಸಹಜ. ನಮ್ಮ ಪೂರ್ವಜರು ಮೈಸೂರು ಸಂಸ್ಥಾನಕ್ಕೆ ನೀಡಿದ ಕೊಡುಗೆಗಳು ನನಗೆ ಶ್ರೀರಕ್ಷೆ. ಅವರ ಜನಪರ ಕಾಳಜಿಯನ್ನು ಆದರ್ಶವಾಗಿಟ್ಟುಕೊಂಡು ಮೈಸೂರನ್ನು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಭಿವೃದ್ಧಿ ಪಡಿಸಬೇಕೆಂಬ ಕನಸಿದೆ ಎಂದರು.
ಪ್ರತಾಪ್ ಸಿಂಹ ಸೇರಿದಂತೆ ಇದುವರೆಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸಂಸದರಾಗಿದ್ದ ಎಲ್ಲರೂ ಈ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಸಾಕಷ್ಟು ಅಭಿವೃದ್ಧಿಯ ಅಡಿಪಾಯ ಹಾಕಿದ್ದಾರೆ. ಅದನ್ನು ನಾನು ಮುಂದುವರೆಸಿಕೊಂಡು ಹೋಗುತ್ತೇನೆ ಎಂದು ಅವರು ಹೇಳಿದರು.ರಾಜಕಾರಣದಲ್ಲಿ ಸವಾಲು ಎದುರಿಸುವುದು ಕಷ್ಟವೇನಲ್ಲ. ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಅಧಿಕಾರದ ಅವಶ್ಯಕತೆ ಇದೆ. ಹಾಗಾಗಿ ಜನಸೇವೆ ಮಾಡಲು ರಾಜಕಾರಣಕ್ಕೆ ಬಂದಿದ್ದೇನೆ. ಜನರು ಜವಾಬ್ದಾರಿ ಕೊಟ್ಟರೆ ಸಮರ್ಥವಾಗಿ ನಿಬಾಯಿಸುತ್ತೇನೆ ಎಂದರು.
ಒಂದು ವರ್ಷದಿಂದ ಚರ್ಚೆ:
ಶಾಸಕ ಟಿ.ಎಸ್. ಶ್ರೀವತ್ಸ, ವಿಭಾಗೀಯ ಪ್ರಭಾರಿ ಮೈ.ವಿ. ರವಿಶಂಕರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಮುಖಂಡರಾದ ಸಂದೇಶ್ ಸ್ವಾಮಿ, ಹರೀಶ್, ಎನ್.ಆರ್. ಕೃಷ್ಣಪ್ಪ ಗೌಡ ಮೊದಲಾದವರು ಇದ್ದರು.
ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ ಮತ್ತು ಮಾಜಿ ಶಾಸಕ ಎಸ್.ಎ. ರಾಮದಾಸ್ ಅವರ ನಿವಾಸಕ್ಕೆ ಯದುವೀರ್ ಭೇಟಿ ನೀಡಿದ್ದರು.
ಇಬ್ಬರು ನಾಯಕರು ಯದುವೀರ್ ಅವರಿಗೆ ಫಲತಾಂಬೂಲ ನೀಡಿ, ಹಾರ, ಪೇಟ ಹಾಕಿ ಆತ್ಮೀಯವಾಗಿ ಸ್ವಾಗತಿಸಿದರು.