ನ್ಯಾಷನಲ್ ಹೆರಾಲ್ಡ್ ಕೇಸ್ನಲ್ಲಿ ಇ.ಡಿ.ಶಾಕ್
ಅಸೋಸಿಯೇಟೆಡ್ ಜರ್ನಲ್ಸ್ (ಎಜೆಎಲ್)ನ ದೆಹಲಿ, ಮುಂಬೈ, ಲಖನೌದಲ್ಲಿನ 661 ಕೋಟಿ ರು. ಸ್ಥಿರಾಸ್ತಿ ವಶ
ಇ.ಡಿ. ವಶಪಡಿಸಿಕೊಂಡಿರುವ ಆಸ್ತಿಗಳಲ್ಲಿ ದೆಹಲಿ, ಮುಂಬೈ, ಲಖನೌದಲ್ಲಿನ ಸ್ಥಿರಾಸ್ತಿಗಳು ಕೂಡ ಉಂಟುಎಜೆಎಲ್ನಲ್ಲಿ ಯಂಗ್ ಇಂಡಿಯನ್ ಹೂಡಿದ್ದ 90.21 ಕೋಟಿ ರು. ಮೌಲ್ಯದ ಈಕ್ವಿಟಿ ಷೇರು ಮುಟ್ಟುಗೋಲು
ಪಂಚರಾಜ್ಯ ವಿಧಾನಸಭೆ ಚುನಾವಣೆಗಳಲ್ಲಿ ಸೋಲುವ ಭೀತಿ ಬಿಜೆಪಿಗೆ ಆವರಿಸಿದೆ. ಹೀಗಾಗಿ ಜನರ ಗಮನ ಬೇರೆಡೆ ತಿರುಗಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಇದು ಕೇಂದ್ರ ಸರ್ಕಾರದ ಸೇಡು, ಹತಾಶೆಯ ಪ್ರತೀಕ- ಅಭಿಷೇಕ್ ಮನು ಸಿಂಘ್ವಿ, ಕಾಂಗ್ರೆಸ್ ವಕ್ತಾರನವದೆಹಲಿ: ‘ನ್ಯಾಷನಲ್ ಹೆರಾಲ್ಡ್’ ದಿನಪತ್ರಿಕೆ ಹಾಗೂ ಅದಕ್ಕೆ ಸಂಬಂಧಿಸಿದ ಕಂಪನಿಗಳ ಪರಭಾರೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ.) ಕಾಂಗ್ರೆಸ್ನ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ನಂಟು ಹೊಂದಿರುವ ಯಂಗ್ ಇಂಡಿಯನ್ ಸಂಸ್ಥೆಗೆ ಸೇರಿದ ₹ 751.9 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.ಜಪ್ತಿ ಮಾಡಲಾದ ಆಸ್ತಿಯಲ್ಲಿ ದೆಹಲಿ ಮತ್ತು ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಕಟ್ಟಡಗಳು ಹಾಗೂ ಲಖನೌದ ನೆಹರು ಭವನ ಸೇರಿವೆ. ಪಂಚರಾಜ್ಯ ಚುನಾವಣೆಗಳು ಈಗ ನಡೆಯುತ್ತಿದ್ದು, ಡಿ.3ರಂದು ಮತ ಎಣಿಕೆ ಇದೆ. ಈ ನಡುವೆಯೇ ಇ.ಡಿ. ಈ ಕ್ರಮ ಕೈಗೊಂಡಿದೆ. ಕಾಂಗ್ರೆಸ್ ಈ ಬಗ್ಗೆ ಪ್ರತಿಕ್ರಿಯಿಸಿ, ‘ಸೋಲಿನ ಭೀತಿಯಿಂದ ಬಿಜೆಪಿ ಈ ಸೇಡಿನ ಕ್ರಮ ಕೈಗೊಳ್ಳುತ್ತಿದೆ’ ಎಂದು ಆರೋಪಿಸಿದೆ.ಏನಿದು ಪ್ರಕರಣ?:
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಘ್ವಿ, ‘ವಿಧಾನಸಭೆ ಚುನಾವಣೆಗಳಲ್ಲಿ ಸೋಲಿನ ಭೀತಿ ಬಿಜೆಪಿಗೆ ಆವರಿಸಿದೆ. ಹೀಗಾಗಿ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಇದು ಕೇಂದ್ರ ಸರ್ಕಾರದ ಹತಾಶೆ ಪ್ರತೀಕ’ ಎಂದಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳನ್ನು ರಾಜಕೀಯ ಸೇಡಿಗಾಗಿ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಈ ಹಿಂದೆಯೇ ಕಾಂಗ್ರೆಸ್ ಹೇಳಿತ್ತು ಹಾಗೂ ಅಕ್ರಮ ಹಣ ವರ್ಗಾವಣೆ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದಿತ್ತು.