ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟಿಸ್ ನೀಡಿರುವ ಹಿನ್ನೆಲೆ ನಗರ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಸಿದ್ದರಾಮಯ್ಯ ಅವರ ಸಂಕಷ್ಟ ದೂರವಾಗಿ, ಆರೋಪ ಮುಕ್ತವಾಗಿ ಹೊರ ಬರಲಿ ಎಂದು 101 ಈಡುಗಾಯಿ ಹೊಡೆದು ಹರಕೆ ಕಟ್ಟಿಕೊಂಡರು. ಮುಡಾ ಹಗರಣ ವಿಚಾರಣೆ ದಿನಕ್ಕೊಂದು ತಿರುವು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಲೋಕೇಶ್ ಪಿಯಾ ನೇತೃತ್ವದಲ್ಲಿ ಬರಿಗಾಲಲ್ಲಿ ಚಾಮುಂಡಿಬೆಟ್ಟದ ಮೆಟ್ಟಿಲು ಹತ್ತಿದರು.
ಇದಕ್ಕೂ ಮುನ್ನ ಚಾಮುಂಡಿಬೆಟ್ಟದ ಪಾದದ ಬಳಿ ಮುಖ್ಯಮಂತ್ರಿ ಅವರಿಗೆ ಒಳಿತು ಮಾಡುವಂತೆ ಪ್ರಾರ್ಥಿಸಿದರು. ಬೆಟ್ಟದಲ್ಲಿ ದೇವಾಲಯದ ಮುಂಭಾಗ ನೂರೊಂದು ತೆಂಗಿನ ಕಾಯಿ ಹೊಡೆದ ಸಿಎಂ ಸಂಕಷ್ಟ ದೂರ ಮಾಡಿ, ಶಿಷ್ಟರನ್ನು ರಕ್ಷಿಸಿ, ದುಷ್ಟರನ್ನು ಶಿಕ್ಷಿಸುವಂತೆ ಪ್ರಾರ್ಥಿಸಿದರು.ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ವಿರೋಧಿಗಳು ಕುತಂತ್ರದ ಮೂಲಕ ಅವರನ್ನು ಮುಗಿಸುವ ಪ್ರಯತ್ನ ಫಲ ಕೊಡುವುದಿಲ್ಲ. ವಿರೋಧಿಗಳ ಫಲ ನಾಶವಾಗಿ ಸತ್ಯಕ್ಕೆ ಜಯ ಸಿಗಲಿ ಎಂದು ಪ್ರಾರ್ಥಿಸುತ್ತಿರುವುದಾಗಿ ಲೋಕೇಶ್ ಪಿಯಾ ಹೇಳಿದರು.
ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಬುಧವಾರ ಸಿಎಂ ವಿಚಾರಣೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ಮುಡಾ ಕೇಸ್ ನಿಂದ ಮುಕ್ತಿ ಸಿಗಲಿ, ಸಿದ್ದರಾಮಯ್ಯಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿ ಅಭಿಮಾನಿಗಳು ಮೈಸೂರಿನ ಅಗ್ರಹಾರದ ನೂರೊಂದು ಗಣಪತಿ ದೇವಸ್ಥಾನದಲ್ಲಿ ಮಂಗಳವಾರ ಪೂಜೆ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಮೈಸೂರು
ದೆಹಲಿಯ ಮೋತಿ ಬಾಗ್ ನಲ್ಲಿನ ದೆಹಲಿ ಕರ್ನಾಟಕ ಸಂಘದಲ್ಲಿ ಈ ಪ್ರತಿಭಟನಾ ಸಭೆ ನಡೆಯಲಿದೆ. ರಾಜ್ಯಸಭಾ ಮಾಜಿ ಸದಸ್ಯ ಎಲ್. ಹನುಮಂತಯ್ಯ, ಜಾಣಗೆರೆ ವೆಂಕಟರಾಮಯ್ಯ, ಪ್ರೊ.ಎಸ್.ಜಿ. ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಡಾ.ಬಿ.ಜೆ. ವಿಜಯಕುಮಾರ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮುಖಂಡರಾದ ರವಿನಂದನ್, ಲೋಕೇಶ್, ಯೋಗೇಶ್, ಮೊಗಣ್ಣಾಚಾರ್ ಇದ್ದರು.
ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಕೃಷ್ಣ ವಿಲಾಸ ರಸ್ತೆ ಮತ್ತು ದಿವಾನ್ಸ್ ರಸ್ತೆ ಜಂಕ್ಷನ್ ನಲ್ಲಿ ಇರುವ ಲೋಕಾಯುಕ್ತ ಕಚೇರಿಯನ್ನು ಸಂಪರ್ಕಿಸುವ ರಸ್ತೆಗಳನ್ನು ಬಂದ್ ಮಾಡುವ ಮೂಲಕ ಪೊಲೀಸರು ಮುನ್ನೆಚ್ಚರಿಕೆ ವಹಿಸಲಿದ್ದಾರೆ.
ಮುಖ್ಯಮಂತ್ರಿ ವಿಚಾರಣೆಗೆ ಹಾಜರಾಗಲಿರುವ ಹಿನ್ನಲೆಯಲ್ಲಿ ದೇವರಾಜ ಪೊಲೀಸ್ ಠಾಣೆಯಲ್ಲಿ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು, ಮಂಗಳವಾರ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಲೋಕಾಯುಕ್ತ ಕಚೇರಿಯನ್ನು ಸಂಪರ್ಕಿಸುವ ರಸ್ತೆಗಳನ್ನು ಸಿಎಂ ಆಗಮನಕ್ಕೂ ಮುನ್ನ ಬಂದ್ ಮಾಡಿ, ಸಿಎಂ ವಿಚಾರಣೆ ಮುಗಿಸಿಕೊಂಡು ತೆರಳಿದ ಬಳಿಕ ವಾಹನ ಸಂಚಾರಕ್ಕೆ ಮುಕ್ತಗೊಳಿಸಲು ಸೂಚಿಸಿದ್ದಾರೆ.ಬ್ಯಾರಿಕೇಡ್ ಅಳವಡಿಕೆ
ವಾಹನ ಸಂಚಾರ ನಿರ್ಬಂಧ ಹೇರಲು ದೇವರಾಜ ಪೊಲೀಸ್ ಠಾಣೆ ಆವರಣದಲ್ಲಿ ಹೆಚ್ಚುವರಿ ಬ್ಯಾರಿಕೇಡ್ ಗಳನ್ನು ಸಂಗ್ರಹಿಸಲಾಗಿದ್ದು, ಬುಧವಾರ ಮುಂಜಾನೆ ಬ್ಯಾರಿಕೇಡ್ ಗಳನ್ನು ಅಳವಡಿಸಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸುವ ಮೂಲಕ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.