ಮುಡಾ ಅಕ್ರಮಕ್ಕೆ ಮೊದಲ ವಿಕೆಟ್‌: ಮಾಜಿ ಆಯುಕ್ತ ದಿನೇಶ್‌ ಸಸ್ಪೆಂಡ್‌- ಹಗರಣ ಬಳಿಕ ಮೊದಲ ಕ್ರಮ

Nirupama ks | Published : Sep 3, 2024 5:44 AM

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತುಗೊಳಿಸಿದೆ. ಸಿದ್ದರಾಮಯ್ಯ ಕುಟುಂಬಕ್ಕೆ ಬದಲಿ ನಿವೇಶನ ಅಕ್ರಮ ಹಂಚಿಕೆ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು :  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಹಾಗೂ ಬಡಾವಣೆ ಅಭಿವೃದ್ಧಿಯಲ್ಲಿ ವ್ಯಾಪಕ ನಿಯಮ ಉಲ್ಲಂಘನೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಮುಡಾ ಮಾಜಿ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್‌ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

 ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಬದಲಿ ನಿವೇಶನ ಅಕ್ರಮವಾಗಿ ನೀಡಲಾಗಿದೆ ಎಂದು ಪ್ರತಿಪಕ್ಷಗಳು ಹೋರಾಟ ನಡೆಸಿದರೂ ಈವರೆಗೆ ಯಾರೊಬ್ಬರ ವಿರುದ್ಧವೂ ಶಿಸ್ತುಕ್ರಮ ಆಗಿರಲಿಲ್ಲ. ಈಗ ದಿನೇಶ್‌ ಅವರನ್ನು ಸರ್ಕಾರ ಅಮಾನತು ಮಾಡಿ, ಮೊದಲ ವಿಕೆಟ್‌ ಬಲಿ ಪಡೆದಂತಾಗಿದೆ.