ಮುಡಾ ಅಕ್ರಮಕ್ಕೆ ಮೊದಲ ವಿಕೆಟ್‌: ಮಾಜಿ ಆಯುಕ್ತ ದಿನೇಶ್‌ ಸಸ್ಪೆಂಡ್‌- ಹಗರಣ ಬಳಿಕ ಮೊದಲ ಕ್ರಮ

Published : Sep 03, 2024, 05:44 AM IST
CM Siddaramaiah Muda Case

ಸಾರಾಂಶ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತುಗೊಳಿಸಿದೆ. ಸಿದ್ದರಾಮಯ್ಯ ಕುಟುಂಬಕ್ಕೆ ಬದಲಿ ನಿವೇಶನ ಅಕ್ರಮ ಹಂಚಿಕೆ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು :  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಹಾಗೂ ಬಡಾವಣೆ ಅಭಿವೃದ್ಧಿಯಲ್ಲಿ ವ್ಯಾಪಕ ನಿಯಮ ಉಲ್ಲಂಘನೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಮುಡಾ ಮಾಜಿ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್‌ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

 ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಬದಲಿ ನಿವೇಶನ ಅಕ್ರಮವಾಗಿ ನೀಡಲಾಗಿದೆ ಎಂದು ಪ್ರತಿಪಕ್ಷಗಳು ಹೋರಾಟ ನಡೆಸಿದರೂ ಈವರೆಗೆ ಯಾರೊಬ್ಬರ ವಿರುದ್ಧವೂ ಶಿಸ್ತುಕ್ರಮ ಆಗಿರಲಿಲ್ಲ. ಈಗ ದಿನೇಶ್‌ ಅವರನ್ನು ಸರ್ಕಾರ ಅಮಾನತು ಮಾಡಿ, ಮೊದಲ ವಿಕೆಟ್‌ ಬಲಿ ಪಡೆದಂತಾಗಿದೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ನನ್ನನ್ನು ಯಾರೂ ಅಲುಗಾಡಿಸಲು ಆಗೋದಿಲ್ಲ: ಸಿಎಂ ಖಡಕ್‌ ನುಡಿ
ಪರಂ ಸಿಎಂ ಆಗಲಿ : 25ಕ್ಕೂ ಹೆಚ್ಚು ಮಠಾಧೀಶರ ಆಗ್ರಹ