ಗ್ಯಾರಂಟಿ ಹಣಕ್ಕಾಗಿ ಎಲ್ಲಾ ಇಲಾಖೆಗೆ ಸರ್ಕಾರ ಟಾರ್ಗೆಟ್ : ಬಿವೈವಿ

KannadaprabhaNewsNetwork |  
Published : Jun 01, 2025, 01:56 AM ISTUpdated : Jun 01, 2025, 04:30 AM IST
BYV

ಸಾರಾಂಶ

ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಶಾಸಕರು ಪರದಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರಿಗೆ ಬರೆ ಎಳೆಯುತ್ತಿದೆ. ಚುನಾವಣೆ ಎದುರಾದರೆ ಕಾಂಗ್ರೆಸ್ ಹೀನಾಯವಾಗಿ ಸೋಲೋದು ನಿಶ್ಚಿತ ಎಂದು ವರದಿ ಬಂದಿದೆ. ಇಂತಹ ಬಡವರ ವಿರೋಧಿ ಸರ್ಕಾರ ತೊಲಗಬೇಕು.

 ಮಂಡ್ಯ : ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಎಲ್ಲಾ ಇಲಾಖೆಗಳಿಗೂ ಸರ್ಕಾರ ಟಾರ್ಗೆಟ್ ನಿಗದಿಪಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ರಾಜ್ಯದ ಜನರ ತೆರಿಗೆ ಹಣವನ್ನು ಕಾಂಗ್ರೆಸ್ ಕಾರ್ಯಕರ್ತರ ಸಾಕಲು ಬಳಸಿಕೊಳ್ಳುತ್ತಿದ್ದಾರೆ. ಸರ್ಕಾರದಿಂದ ನೌಕರರಿಗೆ ಸಂಬಳ ಕೊಡಲು ಸಾಧ್ಯವಾಗುತ್ತಿಲ್ಲ. ಗ್ಯಾರಂಟಿಗೆ ಹಣ ಕೂಡಿಡಲು ಸಾಧ್ಯವಾಗದೆ ಕಸದ ಮೇಲೆ ತೆರಿಗೆ ವಿಧಿಸುತ್ತಿದೆ. ಇಂತಹ ಸರ್ಕಾರ ಬೇಕಾ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರಶ್ನಿಸಿದರು.

ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಶಾಸಕರು ಪರದಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರಿಗೆ ಬರೆ ಎಳೆಯುತ್ತಿದೆ. ಚುನಾವಣೆ ಎದುರಾದರೆ ಕಾಂಗ್ರೆಸ್ ಹೀನಾಯವಾಗಿ ಸೋಲೋದು ನಿಶ್ಚಿತ ಎಂದು ವರದಿ ಬಂದಿದೆ. ಇಂತಹ ಬಡವರ ವಿರೋಧಿ ಸರ್ಕಾರ ತೊಲಗಬೇಕು ಎಂದರು.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧ ಕೇಂದ್ರ ಮುಚ್ಚಿಸುವ ಮೂಲಕ ರಾಜ್ಯ ಸರ್ಕಾರ ಕೇಂದ್ರದ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದೆ. ಬಡವರಿಗೆ ಕೇಂದ್ರದ ಯೋಜನೆ ತಲುಪಬಾರದೆಂಬ ದುರುದ್ದೇಶದಿಂದ ಕೆಟ್ಟ ರಾಜಕಾರಣ ಮಾಡುತ್ತಿದೆ. ರಾಜ್ಯದಲ್ಲಿ ಆಸ್ಪತ್ರೆಯ ಪರಿಸ್ಥಿತಿ ಬಗ್ಗೆ ಆರೋಗ್ಯ ಸಚಿವರು ಗಮನಹರಿಸುವಂತೆ ಒತ್ತಾಯಿಸಿದರು.

ಮಂಗಳೂರಿನಲ್ಲಿ ಮುಸ್ಲಿಂ ಯುವಕನ ಹತ್ಯೆ ಆಗಿದೆ, ಇಂಟಲಿಜೆನ್ಸಿ ಎಲ್ಲಿ ಹೋಗಿತ್ತು. ಸುಹಾಸ್ ಶೆಟ್ಟಿ ಹತ್ಯೆಯಾದ ಸಂದರ್ಭದಲ್ಲಿ ಯಾವ ರೀತಿ ಮಹಿಳೆಯರು ತೊಡಗಿಸಿಕೊಂಡಿದ್ದರು. ಹತ್ಯೆ ಮಾಡೋದಕ್ಕೆ ಹೊರದೇಶದಿಂದ ಹಣ ಕೊಟ್ಟಿರುವ ಬಗ್ಗೆ ಚರ್ಚೆಯಾಗುತ್ತಿದೆ. ರಾಜ್ಯ ಸರ್ಕಾರ ಅಲ್ಪ ಸಂಖ್ಯಾತರ ಓಲೈಕೆ ಮಾಡುತ್ತಿದ್ದು, ಮುಂದೆ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ವೈದ್ಯಕೀಯ ಪರಿಹಾರ ನಿಧಿ ಹಣಕ್ಕೆ ಬೆಂಗಳೂರು ಪಾಲಿಕೆ ತಡೆ