ನಮ್ಮದು ಹೈ ಕಮಾಂಡ್‌ ಪಕ್ಷ, ಅವರೇ ನಿರ್ಧರಿಸ್ತಾರೆ: ಸಿಎಂ

KannadaprabhaNewsNetwork |  
Published : Jun 28, 2024, 12:51 AM ISTUpdated : Jun 28, 2024, 04:20 AM IST
ಸಿಎಂ ಸಿದ್ದರಾಮಯ್ಯ | Kannada Prabha

ಸಾರಾಂಶ

‘ಕಾಂಗ್ರೆಸ್‌ ಹೈಕಮಾಂಡ್‌ ಪಕ್ಷ. ಹಾಗಾಗಿ ಪಕ್ಷ ಹಾಗೂ ಸರ್ಕಾರದಲ್ಲಿ ಯಾವುದೇ ಬದಲಾವಣೆಯ ವಿಚಾರಗಳಾಗಲಿ ಹೈಕಮಾಂಡ್‌ ನಿರ್ಧಾರದಂತೆ ನಡೆಯುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

  ಬೆಂಗಳೂರು : ‘ಕಾಂಗ್ರೆಸ್‌ ಹೈಕಮಾಂಡ್‌ ಪಕ್ಷ. ಹಾಗಾಗಿ ಪಕ್ಷ ಹಾಗೂ ಸರ್ಕಾರದಲ್ಲಿ ಯಾವುದೇ ಬದಲಾವಣೆಯ ವಿಚಾರಗಳಾಗಲಿ ಹೈಕಮಾಂಡ್‌ ನಿರ್ಧಾರದಂತೆ ನಡೆಯುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಚಂದ್ರಶೇಖರನಾಥ ಸ್ವಾಮೀಜಿ ಅವರು ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವಂತೆ ಆಗ್ರಹಿಸಿದ್ದಾರಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

‘ಕಾಂಗ್ರೆಸ್‌ ಹೈಕಮಾಂಡ್‌ ಪಕ್ಷ. ಗೊತ್ತಾಯ್ತಾ. ಪ್ರಜಾಪ್ರಭುತ್ವದಲ್ಲಿ ಹೈಕಮಾಂಡ್‌ ಏನು ತೀರ್ಮಾನ ಮಾಡುತ್ತದೋ ಆ ರೀತಿ ನಡೆದುಕೊಳ್ಳುತ್ತೇವೆ’ ಎಂದರು. ಇದೇ ವೇಳೆ ಸಮುದಾಯವಾರು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಗೆ ವಿವಿಧ ಸಚಿವರಿಂದ ಕೇಳಿಬರುತ್ತಿರುವ ಬೇಡಿಕೆ ಕುರಿತ ಪ್ರಶ್ನೆಗೆ, ‘ಅದರಲ್ಲೂ ಹೈಕಮಾಂಡ್‌ ನಿರ್ಧಾರ ಅಂತಿಮ’ ಎಂದು ಹೇಳಿ ತೆರಳಿದರು. ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಪ್ರತಿಕ್ರಿಯೆ ಪಡೆಯಲು ಸುದ್ದಿಗಾರರು ಪ್ರಯತ್ನಿಸಿದರಾದರೂ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಹೊರಟರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಉ.ಕ.ಅಭಿವೃದ್ಧಿ ಕೈ ಸರ್ಕಾರ ಬದ್ಧ : ಸಿಎಂ
ಮೋದಿ ಜತೆ ಪ್ರಿಯಾಂಕಾ ಗಾಂಧಿ ಆತ್ಮೀಯ ಮಾತು!