ನಾನು ಬಾಂಗ್ಲಾ ಪಿಎಂ ಮೊಹ್ಮದ್‌ ಯೂನುಸ್‌ ಅಭಿಮಾನಿ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Published : Apr 17, 2025, 09:44 AM IST
dk shivakumar

ಸಾರಾಂಶ

ನಗರದಲ್ಲಿ ನಡೆದ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಮ್ಮ ಭಾಷಣದಲ್ಲಿ ಬಾಂಗ್ಲಾದಲ್ಲಿ ಹಿಂದೂಗಳ ಮಾರಣ ಹೋಮಕ್ಕೆ ಕಾರಣ ಎನ್ನಲಾದ ಅಲ್ಲಿನ ಪ್ರಧಾನಿ ಮೊಹ್ಮದ್‌ ಯೂನುಸ್‌ ಅವರ ಅಭಿಮಾನಿ ಎಂದು ಹೇಳಿಕೊಂಡು ಸರ್ವರ ಗಮನ ಸೆಳೆದರು

ಕಲಬುರಗಿ : ನಗರದಲ್ಲಿ ನಡೆದ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಮ್ಮ ಭಾಷಣದಲ್ಲಿ ಬಾಂಗ್ಲಾದಲ್ಲಿ ಹಿಂದೂಗಳ ಮಾರಣ ಹೋಮಕ್ಕೆ ಕಾರಣ ಎನ್ನಲಾದ ಅಲ್ಲಿನ ಪ್ರಧಾನಿ ಮೊಹ್ಮದ್‌ ಯೂನುಸ್‌ ಅವರ ಅಭಿಮಾನಿ ಎಂದು ಹೇಳಿಕೊಂಡು ಸರ್ವರ ಗಮನ ಸೆಳೆದರು.

ಕೌಶಲ್ಯ ಶಿಕ್ಷಣ, ಆ ಕುರಿತಂತೆ ಹಲವು ನಿದರ್ಶನಗಳನ್ನು ಹೇಳುತ್ತಲೇ ತಾವು ಬಾಂಗ್ಲಾದೇಶದ ಪ್ರಧಾನಿ ಮೊಹ್ಮದ್‌ ಯೂನುಸ್‌ ಅವರ ಬಹುದೊಡ್ಡ ಅಭಿಮಾನಿ ಎಂದು ಡಿ.ಕೆ.ಶಿವಕುಮಾರ್‌ ಹೇಳಿಕೊಂಡರು. ಬದುಕಲ್ಲಿ ಕೌಶಲ್ಯ ಅದೆಷ್ಟು ಮುಖ್ಯ ಎಂಬುದಕ್ಕೆ ಬಾಂಗ್ಲಾ ಪ್ರಧಾನಿ ಮಾತುಗಳು ತಮಗೆ ಪ್ರೇರಣಾದಾಯಕ ಎಂದರು.  

ಬಾಂಗ್ಲಾ ಪ್ರಧಾನಿ ಮಹ್ಮದ್ ಯುನುಸ್ ನೊಬೆಲ್ ಪ್ರಶಸ್ತಿ ಬಂದಾಗ ನಡೆದ ಮಾಧ್ಯಮ ಸಂದರ್ಶನದಲ್ಲಿ ಒಬ್ಬ ವ್ಯಕ್ತಿಗೆ ಒಂದು ಮೀನು ಕೊಟ್ಟರೆ ಅದು ಒಂದು ಹೊತ್ತಿನ ಊಟಕ್ಕೆ ಆಗುತ್ತೆ, ಆದರೆ ಅದೇ ವ್ಯಕ್ತಿಗೆ ಮೀನು ಹಿಡಿಯುವ ಕೆಲಸ ಕೊಟ್ಟರೆ ಅವನ ಜೀವನವೇ ಆಗುತ್ತೆ ಎಂದಿದ್ದರು. ಆ ಮಾತು ನನಗೆ ತುಂಬ ಹಿಡಿಸಿತು. ಅಂದಿನಿಂದ ನಾನು ಮೊಹ್ಮದ್‌ ಯುನಿಸ್‌ನ ದೊಡ್ಡ ಅಭಿಮಾನಿಯಾಗಿದ್ದೇನೆಂದು ಡಿ.ಕೆ.ಶಿವಕುಮಾರ್‌ ಹೇಳಿಕೊಂಡರು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ