ಕನ್ನಡಪ್ರಭ ವಾರ್ತೆ ಮಂಡ್ಯ
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಬೇಕೆಂದು ಆಸೆಪಟ್ಟವರಲ್ಲಿ ನಾನೂ ಒಬ್ಬ. ನಾನು ಮೊದಲ ಬಾರಿ ಶಾಸಕನಾಗಿ ಗೆದ್ದಿದ್ದೇನೆ. ಎಲ್ಲರಿಗೂ ನಾನು ಸಚಿವ ಆಗಬೇಕು ಅನ್ನೋದು ಆಸೆ ಇರುತ್ತೆ. ಆದರೆ, ಎಲ್ಲರಿಗೂ ಸಿಗಬೇಕಲ್ಲ. ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಿರೋದು ನಾನೇ ಮಂತ್ರಿಯಾದಂತೆ ಎಂದೆನಿಸುತ್ತಿದೆ. ಹೊಸಬರಿಗೆ ಮಂತ್ರಿ ಸ್ಥಾನ ಸಿಗಲಿ, ಅವರೂ ಅನುಭವ ಪಡೆದುಕೊಳ್ಳಲಿ. ನಾನು ಶಾಸಕನಾಗಿಯೇ ಕೆಲಸ ಮಾಡುತ್ತೇನೆ ಎಂದರು.
ಸಚಿವ ಸ್ಥಾನದ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಎರಡನೇ ಅವಧಿಯಲ್ಲೂ ಚಲುವರಾಯಸ್ವಾಮಿ ಮಂತ್ರಿಯಾಗುವ ನಿರೀಕ್ಷೆಯಂತೂ ಇದೆ. ಅವರೊಂದಿಗೆ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರೂ ಮಂತ್ರಿಗಿರಿ ಕೇಳುತ್ತಿದ್ದಾರೆ. ಅವರ ಕುಟುಂಬ ೫೦ ವರ್ಷದಿಂದ ರಾಜಕಾರಣದಲ್ಲಿದೆ. ಜೊತೆಗೆ ೩ ಬಾರಿ ಗೆದ್ದಿದ್ದಾರೆ. ಅವರಿಗೂ ಮಂತ್ರಿ ಸ್ಥಾನ ಕೊಟ್ಟರೆ ಸಂತೋಷ. ಮೊದಲ ಪಟ್ಟಿ, ಎರಡನೇ ಪಟ್ಟಿ ಆದರೇನು ಬದಲಾವಣೆ ಆಗುವುದಿಲ್ಲ. ಮಂಡ್ಯಕ್ಕೆ ಮಂತ್ರಿ ಸ್ಥಾನ ಸಿಕ್ಕರೆ ಸಾಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ೧೦ ಸಾವಿರ ಯುವಕರ ಸಂಘ ಕಟ್ಟಿದರೆ ೧೦ ಲಕ್ಷ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಯುವಕರು ಆನ್ಲೈನ್ ಬೆಟ್ಟಿಂಗ್, ಚಾಟ್, ರೀಲ್ಸ್ಗಳನ್ನು ನೋಡುತ್ತಾ ಕಾಲ ಕಳೆಯುತ್ತಿದ್ದಾರೆ. ಈ ಯೋಜನೆ ಮೂಲಕ ಯುವಕರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂದರು.