ರಾಜಕಾರಣಕ್ಕಾಗಿ ಅಪ್ಪ-ಮಗನ ಬೇರ್ಪಡಿಸುವುದು ಸರಿಯಲ್ಲ: ಶಾಸಕ ಶ್ರೀನಿವಾಸ್

KannadaprabhaNewsNetwork |  
Published : Feb 19, 2026, 01:15 AM IST
ಗುಬ್ಬಿ ತಾಲೂಕಿನ ಅಡಗೂರು ಕೊಪ್ಪ ಕಕ್ಕೇನಹಳ್ಳಿ ಸುರುಗೇನಹಳ್ಳಿ , ಸಿಂಗೋನಹಳ್ಳಿ ಧೂಳನಹಳ್ಳಿ ಪಾಳ್ಯ ಹಾಗೂ ತೊಂಗನಹಳ್ಳಿ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜ್ಯ ಸಲ್ಲಿಸಿದ ಶಾಸಕ ಎಸ್ ಆರ್ ಶ್ರೀನಿವಾಸ್  | Kannada Prabha

ಸಾರಾಂಶ

ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ರಾಜಕಾರಣಕೋಸ್ಕರ ಅಪ್ಪ - ಮಗನನ್ನೇ ಬೇರೆ ಮಾಡುವಂತಹ ಕೆಲಸವನ್ನು ದೇವೇಗೌಡರು ಮಾಡಬಾರದು ಎಂದು ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್ ಪ್ರತಿಕ್ರಿಯಿಸಿದರು.

ಮೈಸೂರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್‌ ರಾಜಕಾರಣ ಕುರಿತಂತೆ ಪ್ರತಿಕ್ರಿಯೆ ಕನ್ನಡಪ್ರಭ ವಾರ್ತೆ ಗುಬ್ಬಿ

ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ರಾಜಕಾರಣಕೋಸ್ಕರ ಅಪ್ಪ - ಮಗನನ್ನೇ ಬೇರೆ ಮಾಡುವಂತಹ ಕೆಲಸವನ್ನು ದೇವೇಗೌಡರು ಮಾಡಬಾರದು ಎಂದು ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್ ಪ್ರತಿಕ್ರಿಯಿಸಿದರು.

ಗುಬ್ಬಿ ತಾಲೂಕಿನ ಅಡಗೂರು ಕೊಪ್ಪ ಕಕ್ಕೇನಹಳ್ಳಿ ಸುರುಗೇನಹಳ್ಳಿ, ಸಿಂಗೋನಹಳ್ಳಿ ಧೂಳನಹಳ್ಳಿ ಪಾಳ್ಯ ಹಾಗೂ ತೊಂಗನಹಳ್ಳಿ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ರಾಜಕಾರಣದಲ್ಲಿ ನಾನು ಯಾವತ್ತೂ ಯಾರನ್ನು ನನ್ನ ಮಂತ್ರಿ ಮಾಡಿ ಎಂದು ಕೇಳುವುದಿಲ್ಲ. ಅದರ ಬಗ್ಗೆ ನನಗೆ ಆಸಕ್ತಿ ಇಲ್ಲ. ನನ್ನನ್ನು ಮಂತ್ರಿ ಮಾಡುವುದು - ಬಿಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಸಚಿವ ಸ್ಥಾನ ಕೊಟ್ಟರೆ ಖುಷಿಪಡುತ್ತೇನೆ. ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ನಾನು ಯಾವುದೇ ಪಕ್ಷಕ್ಕೆ ಹೋದರೂ ಟಿಕೆಟ್ ಪಡೆದುಕೊಳ್ಳುವ ಶಕ್ತಿ ನನಗಿದೆ. ಅದನ್ನು ನಾನು ಉಳಿಸಿಕೊಂಡಿದ್ದೇನೆ. ನಾನು ಹೋಗಬೇಕೆಂಬ ಪರಿಸ್ಥಿತಿ ಬಂದರೆ ಖಂಡಿತಾ ಹೋಗುತ್ತೇನೆ. ನನಗೆ ಧಕ್ಕೆ ಬಂದರೆ ನಾನು ಅಲ್ಲಿ ಇರುವುದಿಲ್ಲ. ಸೋಲು - ಗೆಲವು ನನಗೆ ಮುಖ್ಯವಲ್ಲ. ರಾಜಕಾರಣದಲ್ಲಿ ಬದ್ಧತೆ ಇಟ್ಟುಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆದ್ದರಿಂದ ಜನ ನನ್ನನ್ನು ಐದು ಬಾರಿ ಗೆಲ್ಲಿಸಿದ್ದಾರೆ. ಜನ ನನಗೆ ಎಲ್ಲಿವರೆಗೂ ಅವಕಾಶ ಕೊಡ್ತಾರೋ ಅಲ್ಲಿಯವರೆಗೂ ಕೆಲಸ ಮಾಡುತ್ತೇನೆ. ಬೇರೆಯವರು ಏನೇ ಮಾತಾಡಿಕೊಂಡರೂ ಕೂಡ ಅದಕ್ಕೆಲ್ಲ ನಾನು ಉತ್ತರ ಕೊಡುವುದಿಲ್ಲ ಎಂದು ತಿಳಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಸ್ತಿ ವಿಚಾರದಲ್ಲಿ ಸರಿಯಾದ ಮಾಹಿತಿ ಕೊಡದೆ ಇರುವುದಕ್ಕೆ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಹೈಕೋರ್ಟು ಅಸಿಂಧುಗೊಳಿಸಿದೆ. ಈ ಸಂಬಂಧ ಅವರು ಕೂಡ ಸುಪ್ರೀಂ ಕೋರ್ಟಿಗೆ ಹೋಗುತ್ತಾರೆ ಎಂದು ಅವರು ಹೇಳಿದರು.

--------------

18ಜಿಯುಬಿ1

ಗುಬ್ಬಿ ತಾಲೂಕಿನ ಅಡಗೂರು ಕೊಪ್ಪ ಕಕ್ಕೇನಹಳ್ಳಿ ಸುರುಗೇನಹಳ್ಳಿ , ಸಿಂಗೋನಹಳ್ಳಿ ಧೂಳನಹಳ್ಳಿ ಪಾಳ್ಯ ಹಾಗೂ ತೊಂಗನಹಳ್ಳಿ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್.ಆರ್. ಶ್ರೀನಿವಾಸ್ ಭೂಮಿ ಪೂಜೆ ಸಲ್ಲಿಸಿದರು.

---

ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ರಾಜಕಾರಣಕೋಸ್ಕರ ಅಪ್ಪ - ಮಗನನ್ನೇ ಬೇರೆ ಮಾಡುವಂತಹ ಕೆಲಸವನ್ನು ದೇವೇಗೌಡರು ಮಾಡಬಾರದು ಎಂದು ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್ ಪ್ರತಿಕ್ರಿಯಿಸಿದರು.

--It is not right to separate father and son for the sake of politics: MLA Srinivas

MLA Srinivas, Politics, Kannada PRabha, Karnataka NEws

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ರಾಜ್ಯದಲ್ಲಿ ಜೆಡಿಎಸ್ ಅತ್ಯಂತ ಪ್ರಬಲ, ಜನ ವಿಶ್ವಾಸಿ ಪಕ್ಷವಾಗಿದೆ: ನಿಖಿಲ್‌ ಕುಮಾರಸ್ವಾಮಿ
ಕಾಂಗ್ರೆಸ್‌ ಮಾಜಿ ರಾಜ್ಯಾಧ್ಯಕ್ಷ ಫೆ.22ರಂದು ಬಿಜೆಪಿಗೆ ಸೇರ್ಪಡೆ