ಜೆಡಿಎಸ್‌ ಶಾಸಕರಿಗೆ ಸಿಎಂ, ಡಿಸಿಎಂ ಮತ್ತೆ ಗಾಳ: ಎಚ್‌ಡಿಕೆ

KannadaprabhaNewsNetwork |  
Published : Jan 08, 2024, 01:45 AM ISTUpdated : Jan 08, 2024, 11:49 AM IST
HD Kumarswamy

ಸಾರಾಂಶ

ಸಿಎಂ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೆಡಿಎಸ್‌ ಶಾಸಕರಿಗೆ ಆಮಿಷ ಒಡ್ಡಿ ಸೆಳೆಯಲು ಯತ್ನಿಸಿದ್ದಾರೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಪಾದಿಸಿದ್ದಾರೆ.

ಕನ್ನಡಪ್ರಭ ವಾರ್ತೆ 

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೆಡಿಎಸ್ ಪಕ್ಷದ ಶಾಸಕರಿಗೆ ಆಮಿಷ ಒಡ್ಡಿ ಸೆಳೆಯುವ ಪ್ರಯತ್ನ ಮುಂದುವರೆಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಪಾದಿಸಿದ್ದಾರೆ.ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರ ಬಗ್ಗೆ ಮುಖ್ಯಮಂತ್ರಿಗಳು ಮಾತಾಡಿದ್ದಾರೆ. ಮಾತನಾಡುವವರು ಏನೇನು ಮಾಡಿದ್ದಾರೆ ಎನ್ನುವುದನ್ನು ನೋಡಿಕೊಂಡು ಬಂದಿದ್ದೇನೆ. 

ಜೆಡಿಎಸ್ ಮುಗಿಸಬೇಕು ಎನ್ನುವುದೇ ಅವರ ಅಜೆಂಡಾ. ಆ ಇಬ್ಬರು ನಾಯಕರ (ಸಿದ್ದು, ಡಿಕೆಶಿ) ಅಜೆಂಡಾ ಇದೆ ಆಗಿದೆ. ಈಗಲೂ ಸಹ ಅವರಿವರ ಮನೆ ಬಾಗಿಲು ತಟ್ಟುತ್ತಿದ್ದಾರೆ. ನಮ್ಮ ಪಕ್ಷವನ್ನು ಮುಗಿಸುವುದೇ ಅವರ ಉದ್ದೇಶವಾಗಿದೆ ಎಂದರು.

ಕ್ಷೇತ್ರದ ಕೆಲಸಕ್ಕೆ ಹೋದರೆ ನಮ್ಮ ಶಾಸಕರನ್ನು ಕೂರಿಸಿಕೊಂಡು ಜೆಡಿಎಸ್ ಬಿಟ್ಟು ಕಾಂಗ್ರೆಸ್‌ಗೆ ಬನ್ನಿ. ಏನು ಬೇಕೋ ಅದನ್ನು ಮಾಡಿಕೊಡುತ್ತೇವೆ ಎನ್ನುತ್ತಿದ್ದಾರೆ. ಎಷ್ಟು ಕೋಟಿ ಬೇಕೋ‌ ಅಷ್ಟು ಕೊಡುತ್ತೇವೆ. ಪಕ್ಷಕ್ಕೆ ಬನ್ನಿ ಎನ್ನುತ್ತಾರೆ. ಯಾವ ಕಾರಣಕ್ಕೆ ಇದನ್ನು ಮಾಡುತ್ತೀರಿ. ವಿರೋಧ ಪಕ್ಷ ಉಳಿಸೋಕೆ ಮಾಡುತ್ತಿರುವುದಾ? ಜೆಡಿಎಸ್ ಮುಗಿಸಬೇಕು ಎಂತಲೇ ಇವರು ಇದೆಲ್ಲವನ್ನೂ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

ಈಗ ರಾಜ್ಯದಲ್ಲಿ ನಡೆಯುತ್ತಿರುವ ದಬ್ಬಾಳಿಕೆ, ಅಕ್ರಮಗಳಿಂದ ಜನರೇ ಅವರನ್ನು ‌ಸಮಾಪ್ತಿ ಮಾಡುತ್ತಾರೆ ಅಂತ ದೇವೇಗೌಡರು ಹೇಳಿದ್ದಾರೆ ಅಷ್ಟೆ. ಶಿವಕುಮಾರ್‌ ಅವರು ಕಾಂಗ್ರೆಸ್ 135 ವರ್ಷದ ಪಕ್ಷ ಎನ್ನುತ್ತಾರೆ. ಗಾಂಧೀಜಿ ಇದ್ದಾಗ ಇತಿಹಾಸ ಬೇರೆ. ಈಗ ಇವರ ಇತಿಹಾಸ ಏನು? ಸ್ವಾತಂತ್ರ್ಯ ತರುವಾಗ ಇತಿಹಾಸ ಬೇರೆ ಇತ್ತು. ಮನೆ ಆಸ್ತಿ ಮಾರಿ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ್ದಾರೆ. ಇವರು ಮಾಡುತ್ತಿರೋದು ಏನು? ಈಸ್ಟ್ ಇಂಡಿಯಾ ಕಂಪನಿ ಮಾಡಿದ ದರೋಡೆಯನ್ನೇ ಇವರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಕಾಮಿ ಜ್ಯೋತಿಷಿ ಖರಾತ್‌ನ 1500 ಕೋಟಿ ರು. ಆಸ್ತಿ ! - 100 ಸೆ* ಸಿಡಿ, 5 ಗುಂಡುಗಳು ಪತ್ತೆ
ಬೆಂಗಳೂರು ನಗರದಲ್ಲಿ ಇ-ಖಾತಾ ಮಾಫಿಯಾ : ಆರ್‌.ಅಶೋಕ್‌ ಗಂಭೀರ ಆರೋಪ