ಜೆಡಿಎಸ್- ಬಿಜೆಪಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕು

KannadaprabhaNewsNetwork |  
Published : Mar 11, 2024, 01:20 AM IST
೧೦ಕೆಎಲ್‌ಆರ್-೧೨ಕೋಲಾರ ತಾಲೂಕಿನ ಲಕ್ಷ್ಮೀಸಾಗರದ ತಮ್ಮ ತೋಟದಲ್ಲಿ ಭಾನುವಾರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ನರಸಾಪುರ ಹೋಬಳಿ ಮಟ್ಟದ ಜೆಡಿಎಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಎಂಎಲ್‌ಸಿ ಇಂಚರ ಗೋವಿಂದರಾಜು ಮಾತನಾಡಿದರು. | Kannada Prabha

ಸಾರಾಂಶ

ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ಬಲಿಷ್ಠವಾಗಿದೆ, ಮತದಾರರು ಮತ್ತು ನಾಯಕರ ಮಧ್ಯೆ ಸಮನ್ವಯತೆ ಕೊರತೆಯಾಗಿರಬಹುದು, ಆದರೆ ಪಕ್ಷಕ್ಕೆ ಯಾವತ್ತೂ ಹಿನ್ನಡೆಯಾಗಿಲ್ಲ, ಆಯಾ ಭಾಗದಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು

ಕನ್ನಡಪ್ರಭ ವಾರ್ತೆ ಕೋಲಾರ

ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರದ ದುರಾಡಳಿತವನ್ನು ಜನರಿಗೆ ತಿಳಿಯುವಂತೆ ಮಾಡುವ ಜೊತೆಗೆ ಜೆಡಿಎಸ್- ಬಿಜೆಪಿ ಮೈತ್ರಿಕೂಟವು ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕು. ಇಂತಹ ಒಳ್ಳೆಯ ಅವಕಾಶವನ್ನು ಪಕ್ಷದ ಕಾರ್ಯಕರ್ತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಎಂಎಲ್‌ಸಿ ಇಂಚರ ಗೋವಿಂದರಾಜು ತಿಳಿಸಿದರು.

ತಾಲೂಕಿನ ಲಕ್ಷ್ಮೀಸಾಗರದ ತಮ್ಮ ತೋಟದಲ್ಲಿ ಭಾನುವಾರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ನರಸಾಪುರ ಹೋಬಳಿ ಮಟ್ಟದ ಜೆಡಿಎಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಜೆಡಿಎಸ್ ಬಲಿಷ್ಠವಾಗಿದೆ, ಮತದಾರರು ಮತ್ತು ನಾಯಕರ ಮಧ್ಯೆ ಸಮನ್ವಯತೆ ಕೊರತೆಯಾಗಿರಬಹುದು, ಆದರೆ ಪಕ್ಷಕ್ಕೆ ಯಾವತ್ತೂ ಹಿನ್ನಡೆಯಾಗಿಲ್ಲ, ಆಯಾ ಭಾಗದಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಿ ನಾಯಕರಾಗಿ ಗುರುತಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ಕೇಂದ್ರದಲ್ಲಿ ಎನ್.ಡಿ.ಎ ಅಧಿಕಾರಕ್ಕೆ

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಾಯಕತ್ವದಲ್ಲಿ ಈ ಬಾರಿಯೂ ಎನ್.ಡಿ.ಎ ಮೈತ್ರಿ ಕೂಟ ಅಧಿಕಾರಕ್ಕೆ ಬರಲಿದೆ, ಈ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ದೇಶದ ಭವಿಷ್ಯದ ದೃಷ್ಟಿಯಿಂದ ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕು ಜನರಿಗೆ ನ್ಯಾಯ ಕೊಡುವಲ್ಲಿ ಕಾಂಗ್ರೆಸ್ ಸರಕಾರ ವಿಫಲವಾಗಿದೆ ಎಂದರು.

ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಲೋಕಸಭಾ ಚುನಾವಣೆ ಇನ್ನೂ ಕೆಲವೇ ದಿನಗಳಲ್ಲಿ ಬರುತ್ತದೆ ಯಾರೇ ಅಭ್ಯರ್ಥಿಯಾಗಲಿ ಗೆಲುವು ಮಾತ್ರ ಮೈತ್ರಿಕೂಟಕ್ಕೆ ಎಂಬ ರೀತಿಯಲ್ಲಿ ಕೆಲಸ ಮಾಡೋಣ. ಕಾಂಗ್ರೆಸ್‌ನ ಬಿಟ್ಟಿ ಗ್ಯಾರಂಟಿಗಳಿಗೆ ಚುನಾವಣೆ ಮುಗಿದ ನಂತರ ವಾರಂಟಿ ಇಲ್ಲ ಅದರಿಂದಾಗಿ ಭವ್ಯ ಭಾರತ ನಿರ್ಮಾಣ ಮಾತ್ರ ಎನ್.ಡಿ.ಎ ಮೈತ್ರಿ ಕೂಟದಿಂದ ಮಾತ್ರ ಸಾಧ್ಯ ಎಂಬುದನ್ನು ಜನಕ್ಕೆ ತಿಳಿಸೋಣ ಎಂದರು.

ಜೆಡಿಎಸ್ ಪಕ್ಷದ ಕಾರ್ಯಕರ್ತರು ಮಾತನಾಡಿ, ಜಿಲ್ಲೆಯಲ್ಲಿ ಜೆಡಿಎಸ್-ಬಿಜೆಪಿ ಪಕ್ಷಗಳ ಮಧ್ಯೆಯೇ ನೇರ ಹಣಾಹಣೆ ಇದ್ದು ಕೇವಲ ನಾಯಕರು ಅಷ್ಟೇ ಸಮನ್ವಯತೆ ಸಾಧಿಸಿದರೆ ಸಾಲದು, ಗ್ರಾಮಗಳಲ್ಲಿನ ಎರಡು ಪಕ್ಷದ ಮುಖಂಡರ ಮಧ್ಯೆ ಸಮನ್ವಯತೆ ಸಾಧಿಸುವಂತೆ ಸಭೆಗಳನ್ನು ಮಾಡಬೇಕು, ಜೊತೆಗೆ ಪಕ್ಷದ ಸಂಘಟನೆ ಬಗ್ಗೆ ಕಾರ್ಯಕರ್ತರೊಂದಿಗೆ ನಾಯಕರು ಕೈ ಜೋಡಿಸಬೇಕು, ಯುವಕರಿಗೆ ಪಕ್ಷದಲ್ಲಿ ಜವಾಬ್ದಾರಿ ನೀಡಬೇಕು ಎಂದು ಮನವಿ ಮಾಡಿದರು.ಜೆಡಿಎಸ್ ತಾಲೂಕು ಅಧ್ಯಕ್ಷ ಬಾಬು ಮೌನಿ, ಎಸ್ಸಿ ಘಟಕದ ಅಧ್ಯಕ್ಷ ಲಕ್ಷ್ಮೀಸಾಗರ ಸುನಿಲ್ ಕುಮಾರ್, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ವಕೀಲರ ಸಂಘದ ಅಧ್ಯಕ್ಷ ಬೆಗ್ಲಿ ಮುನೇಗೌಡ, ಜೆಡಿಎಸ್ ಎಸ್ಸಿ ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಬೆಳಮಾರನಹಳ್ಳಿ ಗ್ರಾಪಂ ಉಪಾಧ್ಯಕ್ಷ ವೆಂಕಟೇಗೌಡ, ಮತ್ತಿತರರು ಇದ್ದರು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ