12 ದಿನದಲ್ಲಿ ಕೇಜ್ರಿ ತೂಕ 4.5 ಕೆ.ಜಿ ಇಳಿಕೆ ಅತಿಷಿ ಆರೋಪ

KannadaprabhaNewsNetwork |  
Published : Apr 04, 2024, 01:03 AM ISTUpdated : Apr 04, 2024, 05:14 AM IST
ಅತಿಶಿ | Kannada Prabha

ಸಾರಾಂಶ

ದೆಹಲಿ ಅಬಕಾರಿ ಹಗರಣ ಪ್ರಕರಣದಲ್ಲಿ ಬಂಧಿತವಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ತೂಕ ಇಳಿಕೆಯಾಗಿದ್ದು, ಬಿಜೆಪಿಯವರು ಕೇಜ್ರಿವಾಲ್‌ ಅವರ ಆರೋಗ್ಯವನ್ನು ಅಪಾಯದಲ್ಲಿಟ್ಟಿದ್ದಾರೆ ಎಂದು ಎಎಪಿ ನಾಯಕಿ ಅತಿಷಿ ಬುಧವಾರ ಆರೋಪಿಸಿದರು.

ನವದೆಹಲಿ: ದೆಹಲಿ ಅಬಕಾರಿ ಹಗರಣ ಪ್ರಕರಣದಲ್ಲಿ ಬಂಧಿತವಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ತೂಕ ಇಳಿಕೆಯಾಗಿದ್ದು, ಬಿಜೆಪಿಯವರು ಕೇಜ್ರಿವಾಲ್‌ ಅವರ ಆರೋಗ್ಯವನ್ನು ಅಪಾಯದಲ್ಲಿಟ್ಟಿದ್ದಾರೆ ಎಂದು ಎಎಪಿ ನಾಯಕಿ ಅತಿಷಿ ಬುಧವಾರ ಆರೋಪಿಸಿದರು.

ಈ ಬಗ್ಗೆ ತಮ್ಮ ಟ್ವೀಟರ್‌ ಖಾತೆಯಲ್ಲಿ ‘ಕೇಜ್ರಿವಾಲ್‌ ಅವರನ್ನು ಇ.ಡಿ. ಅಧಿಕಾರಿಗಳು ಬಂಧಿಸಿ 12 ದಿನಗಳಾಗಿದ್ದು, ಅವರಲ್ಲಿ 4.5 ಕೆಜಿ ತೂಕ ಇಳಿಕೆಯಾಗಿದೆ. ಬಿಜೆಪಿಯವರು ಕೇಜ್ರಿವಾಲ್‌ ಅವರ ಆರೋಗ್ಯವನ್ನು ಅಪಾಯದಲ್ಲಿಟ್ಟಿದ್ದಾರೆ. ಕೇಜ್ರಿವಾಲ್‌ಗೆ ಏನಾದರು ಆದರೆ ದೇಶದ ಜನರೇ ಅಲ್ಲ, ಆ ದೇವರೂ ಅವರನ್ನು ಕ್ಷಮಿಸುವುದಿಲ್ಲ ಎಂದು ಪೋಸ್ಟ್‌ ಮಾಡಿದ್ದಾರೆ.

ಈ ಆರೋಪಕ್ಕೆ ತಿಹಾರ್‌ ಜೈಲಿನ ಅಧಿಕಾರಿಗಳು ಪ್ರತಿಕ್ರಿಯಿಸಿ ಕೇಜ್ರಿವಾಲ್‌ ಆರೋಗ್ಯ ಸ್ಥಿರವಾಗಿದೆ. ನಮ್ಮ ವಶಕ್ಕೆ ಬಂದ ದಿನದಿಂದಲೂ 65 ಕೆಜಿಯಲ್ಲೇ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಮತಚೋರಿ ಹೆಸರಲ್ಲಿ ಸುಳ್ಳು ಪ್ರಚಾರ ತಪ್ಪು: ದೇವೇಗೌಡ
ದೆಹಲಿಯಲ್ಲೂ ಸಿದ್ದು ಸಿದ್ದು, ಡಿಕೆ ಡಿಕೆ ಸದ್ದು