ಕನ್ನಡಪ್ರಭ ವಾರ್ತೆ ಗೌರಿಬಿದನೂರು
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಕಚೇರಿಯಲ್ಲಿ ಕೆ.ಎಚ್.ಪಿ ಮುಖಂಡರ ನಗರಗೆರೆ ಹೋಬಳಿ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ್ದ ತಮ್ಮನ್ನು 40 ಸಾವಿರ ಮತಗಳ ಅಂತರದಿಂದ ಕ್ಷೇತ್ರದ ಜನ ಗೆಲ್ಲಿಸಿದ್ದಾರೆ.ರಸ್ತೆ ದುರಸ್ತಿಗೆ ₹30 ಕೋಟಿ ಬಿಡುಗಡೆ
ತಾಲೂಕಿನ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ಕೊಟ್ಟಿದ್ದೇನೆ. ಕಾಂಗ್ರೆಸ್ ಸರಕಾರ ಕೂಡ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸುವ ಮೂಲಕ ಸಹಕರಿಸುತ್ತಿದೆ. ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆಗಳ ಅಭಿವೃದ್ಧಿಗೆ ಸುಮಾರು 30 ಕೋಟಿ ರು.ಗಳ ಅನುದಾನ ತಂದಿದ್ದೇನೆ. ಅಭಿವೃದ್ಧಿ ಕೆಲಸಗಳು ನಿರಂತರವಾಗಿ ನಡೆಯುತ್ತಿವೆ. ಆದ್ದರಿಂದ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ಪಕ್ಷ ಯಾರನ್ನೇ ಕಣಕ್ಕಿಳಿಸಿದರೂ ಗೆಲ್ಲಿಸಲು ಶ್ರಮಿಸಬೇಕು. ಮನೆ ಮನೆಗೆ ತೆರಳಿ ಪ್ರಚಾರ ನಡೆಸಬೇಕು ಎಂದರು.ಮುಖಂಡ ಆರ್.ಆರ್.ರೆಡ್ಡಿ ಮಾತನಾಡಿ, ನಗರಗೆರೆ ಹೋಬಳಿಯಲ್ಲಿ ರಸ್ತೆಗಳು ತೀವ್ರ ಹದಗಟ್ಟಿತ್ತು. ಆಂಧ್ರದ ಗಡಿಗೆ ಹೊಂದಿಕೊಂಡಿರುವ ತಾಲೂಕಿನ ದೊಡ್ಡದಾದ ನಗರಗೆರೆ ಹೋಬಳಿಗೆ ಶಾಸಕರು ಅನುದಾನ ಒದಗಿಸಿ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅವರ ಕೈ ಬಲಪಡಿಸಬೇಕು ಎಂದರು.ಸಸಿದ್ಧಾಂತಕ್ಕೆ ಕೊಳ್ಳಿ ಇಟ್ಟ ಜೆಡಿಎಸ್