ಕುಮಾರಸ್ವಾಮಿ ಇದೀಗ ಬಿಜೆಪಿ ವಕ್ತಾರ: ಡಿಕೆಶಿ

KannadaprabhaNewsNetwork |  
Published : Mar 03, 2024, 01:33 AM ISTUpdated : Mar 03, 2024, 11:43 AM IST
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ | Kannada Prabha

ಸಾರಾಂಶ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಚನ್ನಪಟ್ಟಣ: ಜೆಡಿಎಸ್ ಎಲ್ಲಿದೆ?. ಆ ಪಕ್ಷದ ಪರ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಏನಾದರೂ ಮಾತನಾಡುತ್ತಿದ್ದಾರಾ?. ಕುಮಾರಸ್ವಾಮಿ ಮಾತನಾಡುತ್ತಿರೋದು ಬಿಜೆಪಿ ಪರವಾಗಿ ಕುಮಾರಸ್ವಾಮಿ ಅವರನ್ನು ಬಿಜೆಪಿ ವಕ್ತಾರರನ್ನಾಗಿ ನೇಮಿಸಿಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು. 

ಸುದ್ದಿಗಾರರೊಂದಿಗೆ ಮಾತನಾಡಿ, ಯಾವತ್ತಾದರೂ ಒಂದು ದಿನ ಜೆಡಿಎಸ್ ಪರ ಕುಮಾರಸ್ವಾಮಿ ಮಾತನಾಡಿದ್ದಾರಾ?. ಜೆಡಿಎಸ್ ಕೈ ಬಲಪಡಿಸಿ ಅಂತ ಏನಾದರೂ ಹೇಳಿದ್ದಾರಾ?. 

ಜೆಡಿಎಸ್ ಹೋಯ್ತು, ತೆನೆ ಬಿಸಾಕಿದ್ದಾಯ್ತು ಎಂದರು. ನಮ್ ಗೌಡರು ಮೋದಿ ಪ್ರಧಾನಿಯಾದರೆ ದೇಶ ಬಿಟ್ಟುಹೋಗುತ್ತೇನೆ ಅಂದಿದ್ದರು. 

ಅವರ ಪಕ್ಷ ಏನಾಗುತ್ತೆ ಅಂತ ಕುಮಾರಸ್ವಾಮಿ ಯೋಚನೆ ಮಾಡಬೇಕು. ಪಾಪ ನಮ್ಮ ಗೌಡರು ಕಷ್ಟಪಟ್ಟು ಕಟ್ಟಿದ ಪಕ್ಷಕ್ಕೆ ಇಂಥ ಪರಿಸ್ಥಿತಿ ಬಂತಲ್ಲ ಅಂತ ನನಗೂ ನೋವಿದೆ ಎಂದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಸಿಎಂ-ಎಚ್‌ಡಿಕೆ ಜಿ ರಾಮ್‌ ಜಿ ಸ್ಕೀಂ ಸವಾಲು ಸಮರ
ಜನಾಶೀರ್ವಾದದಿಂದ ದೀರ್ಘಾವಧಿ ಸಿಎಂ : ಸಿದ್ದು