ಕನ್ನಡಪ್ರಭ ವಾರ್ತೆ ಬೆಂಗಳೂರು
ಬೆಂಗಳೂರಿನ ಕುಂದಾಪ್ರ ಕನ್ನಡ ಪ್ರತಿಷ್ಠಾನ ಹೊಸಕೆರೆಹಳ್ಳಿಯ ನಂದಿ ಲಿಂಕ್ ಗ್ರೌಂಡ್ನಲ್ಲಿ ಆಯೋಜಿಸಿರುವ ಎರಡು ದಿನಗಳ ‘ಕುಂದಾಪ್ರ ಕನ್ನಡ ಹಬ್ಬ-2025’ ಕಾರ್ಯಕ್ರಮದ ಮೊದಲ ದಿನವಾದ ಶನಿವಾರ ''''''''ಕುಂದಾಪ್ರ ಕನ್ನಡ ಅಧ್ಯಯನ ಪೀಠ'''''''' ಲೋಕಾರ್ಪಣೆ ಮಾಡಿ ಮಾತನಾಡಿದರು. ನಾಲ್ಕು ವರ್ಷಗಳ ಹಿಂದೆ ಕುಂದಾಪ್ರ ಕನ್ನಡ ಹಬ್ಬದಲ್ಲಿ ಈ ಅಧ್ಯಯನ ಪೀಠಕ್ಕೆ ಬೇಡಿಕೆ ಇಟ್ಟಿದ್ದರು. ಪೀಠಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾತ್ರವಲ್ಲದೆ ಸರ್ಕಾರ ಕೂಡ ಒಪ್ಪಿಗೆ ನೀಡಿತು. ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 1.5 ಕೋಟಿ ರು. ಮಂಜೂರು ಮಾಡಿದ್ದಾರೆ ಎಂದು ತಿಳಿಸಿದರು.
ಕುಂದಾಪ್ರ ಕನ್ನಡ ಬಗ್ಗೆ ಹಳ್ಳಿಯ ಮಹಿಳೆಯರು ಹಾಗೂ ಹಿರಿಯರು ಮಾತನಾಡುತ್ತಿರುವ ಪದಗಳನ್ನು ಸಂಗ್ರಹಿಸಿ ಅಧ್ಯಯನ ಮುಂದುವರಿಸಿದರೆ ಪೀಠ ಇನ್ನಷ್ಟು ಬಲಗೊಳ್ಳುತ್ತದೆ. ಕುಂದಾಪ್ರ ಕನ್ನಡ ಬಗ್ಗೆ ಸಂಗೀತ ನಿರ್ದೇಶಕ ರವಿ ಬಸ್ರೂರು ಒಂದು ಆ್ಯಪ್ ಮಾಡಿದ್ದು, ಪಂಜು ಗಂಗೊಳ್ಳಿ ಅವರು ಕುಂದಗನ್ನಡ ನಿಘಂಟು ಮಾಡಿದ್ದಾರೆ. ಅದೇ ರೀತಿ ಕುಂದಾಪುರ ಕನ್ನಡ ಕುರಿತು ಯಾವುದೇ ಮಹತ್ವದ ವಸ್ತು, ವಿಷಯ ಇದ್ದರೆ ಪೀಠಕ್ಕೆ ನೀಡಿ ಎಂದು ಹೇಳಿದರು.ಕುಂದಾಪುರದಲ್ಲೂ ಪೀಠದ ಉದ್ಘಾಟನೆ ಮಾಡಲಾಗುವುದು. ಅಲ್ಲದೆ, ಹಿರಿಯರು ತಮ್ಮ ಮಕ್ಕಳು-ಮೊಮ್ಮಕ್ಕಳು ಕುಂದಾಪ್ರ ಕನ್ನಡ ಮಾತನಾಡುವಂತೆ, ಭಾಷೆ ಬಳಕೆ ಮುಂದುವರಿಯುವಂತೆ ಮಾಡಬೇಕಿದೆ ಎಂದರು.
ಕುಂದಗನ್ನಡ ಆ್ಯಪ್ ಬಿಡುಗಡೆ:
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕರ್ನಾಟಕ ರಾಜ್ಯ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಜಿ.ಕೆ.ಶೆಟ್ಟಿ, ವಿಎಲ್ ಗ್ರೂಪ್ ಮ್ಯಾನೇಜಿಂಗ್ ಡೈರೆಕ್ಟರ್ ಅಂಜಲಿ ವಿಜಯ್, ಎಎಸ್ ಗ್ರೂಪ್ಸ್ ಮ್ಯಾನೇಜಿಂಗ್ ಡೈರೆಕ್ಟರ್ ಸತೀಶ್ ಶೆಟ್ಟಿ, ಮಂಗಳೂರು ವಿಶ್ವವಿದ್ಯಾಲಯ ರಿಜಿಸ್ಟ್ರಾರ್ ರಾಜು ಮೊಗವೀರ, ಲೈಫ್ಲೈನ್ ಟೆಂಡರ್ ಚಿಕನ್ ಮ್ಯಾನೇಜಿಂಗ್ ಡೈರೆಕ್ಟರ್ ಕಿಶೋರ್ ಹೆಗ್ಡೆ, ಕುಂದಾಪ್ರ ಕನ್ನಡ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯ ಹೆಗ್ಡೆ, ಅಧ್ಯಕ್ಷ ಡಾ.ದೀಪಕ್ ಶೆಟ್ಟಿ ಬಾರ್ಕೂರು, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕಾರ್ಯದರ್ಶಿ ರಾಘವೇಂದ್ರ ಕಾಂಚನ್ ಮೊದಲಾದವರಿದ್ದರು.
ಇನ್ನು ಭಾನುವಾರ ಬೆಳಗ್ಗೆ 9.30 ರಿಂದ ಡಾ.ವಿದ್ಯಾಭೂಷಣರ ಗಾನಯಾನದ ಸುವರ್ಣ ಸಂಭ್ರಮ, ಮಕ್ಕಳ ಮಹಾಸಂಗಮದ ಯಕ್ಷನೃತ್ಯ, ಕುಂದಾಪ್ರ ಕನ್ನಡದ ರಸಪ್ರಶ್ನೆ, ಕುಂದಾಪ್ರದ ಸುಂದರ-ಸುಂದರಿಯರ ಫ್ಯಾಷನ್ ಶೋ, ರಘು ದೀಕ್ಷಿತ್ ಲೈವ್ ಕನ್ಸರ್ಟ್, ಕ್ಲೀನ್ ಕುಂದಾಪುರ, ಸೇವ್ ಅವರ್ ಓಷನ್ ವಿಶೇಷ ಅಭಿನಂದನೆ ಸೇರಿ ವಿವಿಧ ಕಾರ್ಯಕ್ರಮ ನಡೆಯಲಿವೆ.
ಹಕ್ಕೊತ್ತಾಯಗಳು: