ಸಿದ್ದುವೇ ಇರಲಿ, ಇಲ್ಲವೇ ಪರಂ ಸಿಎಂ ಆಗಲಿ: ರಾಜಣ್ಣ ಆಶಯ

Published : Nov 27, 2025, 05:47 AM IST
KN Rajanna

ಸಾರಾಂಶ

ರಾಜ್ಯದಲ್ಲಿ ಸದ್ಯ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರು ಮುಂದುವರೆಯಬೇಕು. ಇಲ್ಲವೇ ಅನಿವಾರ್ಯತೆ ಬಂದರೆ ಗೃಹ ಸಚಿವ ಡಾ। ಜಿ.ಪರಮೇಶ್ವರ ಅವರು ಮುಖ್ಯಮಂತ್ರಿಯಾಗಲಿ ಎನ್ನುವ ಮೂಲಕ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬಾರದೆಂದು ಆಶಯ 

  ತುಮಕೂರು :  ರಾಜ್ಯದಲ್ಲಿ ಸದ್ಯ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರು ಮುಂದುವರೆಯಬೇಕು. ಇಲ್ಲವೇ ಅನಿವಾರ್ಯತೆ ಬಂದರೆ ಗೃಹ ಸಚಿವ ಡಾ। ಜಿ.ಪರಮೇಶ್ವರ ಅವರು ಮುಖ್ಯಮಂತ್ರಿಯಾಗಲಿ ಎನ್ನುವ ಮೂಲಕ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬಾರದೆಂದು ಆಶಯ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರು 5 ವರ್ಷ ಸಿಎಂ ಆಗಿರಬೇಕು

ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರು 5 ವರ್ಷ ಸಿಎಂ ಆಗಿರಬೇಕು ಎಂಬುದು ನನ್ನ ವೈಯಕ್ತಿಕ ಆಶಯವಾಗಿದೆ. ಒಂದು ಅಥವಾ ಎರಡು ದಿನದಲ್ಲಿ ರಾಷ್ಟ್ರೀಯ ಕಾಂಗ್ರೆಸ್‌ ನಾಯಕರು ಎಲ್ಲವನ್ನೂ ಕ್ಲೀಯರ್ ಮಾಡುತ್ತಾರೆ ಎಂದರು.

ಪರಮೇಶ್ವರ್‌ ಅವರು ಕೂಡ ಕೂಲಿ ಕೇಳಬೇಕಲ್ಲ

2023ರಲ್ಲಿ ಡಿ.ಕೆ.ಶಿವಕುಮಾರ್ ಅಧ್ಯಕ್ಷರಾಗಿರಬಹುದು. ಆದರೆ, ಸಿದ್ದರಾಮಯ್ಯ ಅವರನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗಿದಲ್ವಾ? ಎಂದು ಪ್ರಶ್ನಿಸಿದ ರಾಜಣ್ಣ, 2013ರಲ್ಲಿ ಡಾ। ಜಿ.ಪರಮೇಶ್ವರ್‌ ಅವರು ಪಕ್ಷ ಅಧಿಕಾರಕ್ಕೆ ತಂದರು. ಆದರೆ ಅವರು ಸೋತರು. ಡಿಕೆ‌ಶಿ ಕೂಲಿ ಕೇಳಿದಂತೆ, ಪರಮೇಶ್ವರ್‌ ಅವರು ಕೂಡ ಕೂಲಿ ಕೇಳಬೇಕಲ್ಲ. ಪರಮೇಶ್ವರ್ ಅವರ ಹಳೇ ಕೂಲಿ ಕ್ಲೀಯರ್ ಆಗಲಿ ಎಂದು ಗೃಹ ಸಚಿವರ ಪರ ಬ್ಯಾಟಿಂಗ್ ಮಾಡಿದರು. ಮುಂದಿನ 2028ರ ಚುನಾವಣೆಯಲ್ಲಿ ಡಿಕೆಶಿ ನೇತೃತ್ವದಲ್ಲಿ ಚುನಾವಣೆಗೆ ಹೋಗಿ ಒಟ್ಟಿಗೆ ಕೆಲಸ ಮಾಡಿ ಬಹುಮತ ತಂದ ಬಳಿಕ ಡಿಕೆಶಿ ಅವರು 5 ವರ್ಷ ಸಿಎಂ ಆಗಲಿ ಎಂದು ಪುನರುಚ್ಚರಿಸಿದರು.

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಸಿಎಲ್‌ಪಿ ಆಯ್ಕೆ ಮಾಡಿದ್ದು. ಈಗ ಸಿಎಲ್‌ಪಿಯಲ್ಲೇ ತೀರ್ಮಾನ ಆಗಬೇಕು. ಸಿಎಲ್‌ಪಿಯಲ್ಲಿ ಯಾರಾದರೂ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕೆಂದು ಕೇಳಿದ್ದಾರಾ? ಎಂದು ಪ್ರಶ್ನಿಸಿದ ಅವರು, 30-30 ತಿಂಗಳು ಒಪ್ಪಂದ ಎಂದು ಸುಮ್ಮನೇ ಹೇಳುತ್ತಾರೆ ಎಂದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ನಾಯಕರು ನನ್ನ ಕೈ ಬಿಡೋಲ್ಲ ಎನ್ನುವ ವಿಶ್ವಾಸ ಇದೆ : ಡಿ.ಕೆ.ಶಿವಕುಮಾರ್
ಜೆಡಿಎಸ್ ಕಿತ್ತೊಗೆಯುವ ತಾಕತ್ತಿದೆಯಾ?; ಕೆ.ಸುರೇಶ್‌ಗೌಡ