‘ದುಬೈಗೆ ಪರಾರಿಯಾಗಲು ಹೇಳಿದ್ದೇ ಸಿಎಂ ಬಘೇಲ್‌’

KannadaprabhaNewsNetwork |  
Published : Nov 06, 2023, 12:46 AM IST

ಸಾರಾಂಶ

ಮಹದೇವ ಬೆಟ್ಟಿಂಗ್‌ ಆ್ಯಪ್‌ನ ಪ್ರವರ್ತಕರು, ಛತ್ತೀಸ್‌ಗಢ ಸಿಎಂ ಭೂಪೇಶ್‌ ಬಘೇಲ್‌ಗೆ 508 ಕೋಟಿ ರು. ಕೊಟ್ಟಿದ್ದಾರೆ ಎಂಬ ಜಾರಿ ನಿರ್ದೇಶನಾಲಯದ ಮೂಲಗಳ ಮಾಹಿತಿ ನಡುವೆಯೇ, ದುಬೈಗೆ ಪರಾರಿಯಾಗುವಂತೆ ತನಗೆ ಹೇಳಿದ್ದೇ ಬಘೇಲ್‌ ಎಂದು ಆ್ಯಪ್‌ನ ಮುಖ್ಯಸ್ಥ ಶುಭಂ ಸೋನಿ ಸ್ಫೋಟಕ ಹೇಳಿಕೆ ನೀಡಿದ್ದಾನೆ.

- ಮಹದೇವ್‌ ಬೆಟ್ಟಿಂಗ್‌ ಆ್ಯಪ್‌ ಮುಖ್ಯಸ್ಥನ ಸ್ಫೋಟಕ ಆರೋಪ

- ದುಬೈನಿಂದ ವಿಡಿಯೋ ಬಿಡುಗಡೆ ಮಾಡಿದ ಶುಭಂ ಸೋನಿನವದೆಹಲಿ: ಮಹದೇವ ಬೆಟ್ಟಿಂಗ್‌ ಆ್ಯಪ್‌ನ ಪ್ರವರ್ತಕರು, ಛತ್ತೀಸ್‌ಗಢ ಸಿಎಂ ಭೂಪೇಶ್‌ ಬಘೇಲ್‌ಗೆ 508 ಕೋಟಿ ರು. ಕೊಟ್ಟಿದ್ದಾರೆ ಎಂಬ ಜಾರಿ ನಿರ್ದೇಶನಾಲಯದ ಮೂಲಗಳ ಮಾಹಿತಿ ನಡುವೆಯೇ, ದುಬೈಗೆ ಪರಾರಿಯಾಗುವಂತೆ ತನಗೆ ಹೇಳಿದ್ದೇ ಬಘೇಲ್‌ ಎಂದು ಆ್ಯಪ್‌ನ ಮುಖ್ಯಸ್ಥ ಶುಭಂ ಸೋನಿ ಸ್ಫೋಟಕ ಹೇಳಿಕೆ ನೀಡಿದ್ದಾನೆ.ಈ ಕುರಿತು ವಿಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಸೋನಿ, ‘ಮಹದೇವ ಬೆಟ್ಟಿಂಗ್‌ ಆ್ಯಪ್‌ನ ನಿಜವಾದ ಮಾಲಿಕ ನಾನೇ. ಪ್ರಕರಣ ಬೆಳಕಿಗೆ ಬಂದ ಬಳಿಕ ದುಬೈಗೆ ತೆರಳುವಂತೆ ನನಗೆ ಸೂಚಿಸಿದ್ದೇ ಬಘೇಲ್‌. ಅವರ ಸೂಚನೆ ಅನ್ವಯವೇ ನಾನು ದುಬೈಗೆ ತೆರಳಿದ್ದೆ’ ಎಂದು ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ.ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನ.7ರಂದು ನಡೆಯಲಿದ್ದು, ಅದಕ್ಕೆ ಎರಡು ದಿನ ಮೊದಲು ಸ್ವತಃ ಮುಖ್ಯಮಂತ್ರಿ ವಿರುದ್ಧವೇ ಈ ಗಂಭೀರ ಆರೋಪ ಕೇಳಿಬಂದಿದೆ.ಮಹದೇವ ಬೆಟ್ಟಿಂಗ್‌ ಆ್ಯಪ್‌ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿರುವ ಇ.ಡಿ. ಅಧಿಕಾರಿಗಳು ಅದರಲ್ಲಿ ಶುಭಂ ಸೋನಿಯನ್ನು ಪ್ರಮುಖ ಆರೋಪಿಯಾಗಿ ಪರಿಗಣಿಸಿದ್ದು, ಆತ ತಲೆ ಮರೆಸಿಕೊಂಡಿದ್ದಾನೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಕಾಂಗ್ರೆಸ್ಸಲ್ಲಿ ಯತೀಂದ್ರ ಕಿಚ್ಚು : '5 ವರ್ಷವೂ ನಮ್ಮ ತಂದೆ ಸಿಎಂ, ಇದು ಈಗ ಸೆಟಲ್ಡ್‌ ವಿಚಾರ'
ಯತೀಂದ್ರ ಅವರೇ ನಮ್ಮ ಹೈಕಮಾಂಡ್‌ : ಡಿ.ಕೆ.ಶಿವಕುಮಾರ್‌ ಟಾಂಗ್‌