ಕನ್ನಡಪ್ರಭ ವಾರ್ತೆ ಮೈಸೂರು
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರಿಗ ಪ್ರಧಾನಿ ಅಲ್ಲ ರಾಷ್ಟ್ರಪತಿಗಳಾಗುವ ಅರ್ಹತೆಯೂ ಇದೆ. ಜಿ.ಟಿ.ದೇವೇಗೌಡರಿಗೆ ಅರಿವಿನ ಕೊರತೆ ಇದೆ ಅನ್ನಿಸುತ್ತದೆ ಎಂದರು.
ಇವರಿಗೆ ಬಡತನ, ಶೋಷಣೆ ಅನ್ನೋದು ಗೊತ್ತಿಲ್ಲ. ಇವರು ಉನ್ನತ ಶಿಕ್ಷಣ ಸಚಿವರಾಗಿದ್ದವರು, ಇದು ಪ್ರಜಾಪ್ರಭುತ್ವದ ಸೌಂದರ್ಯ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಎಲ್ಲ ರೀತಿಯ ಅವಕಾಶಗಳಿವೆ. ಮೈಸೂರು ಅಭಿವೃದ್ಧಿಯಲ್ಲಿ ಸಿದ್ದರಾಮಯ್ಯ ಅವರ ಕೊಡುಗೆ ಏನೂ ಇಲ್ಲ ಎಂಬ ಜಿಟಿಡಿ ಹೇಳಿಕೆಗೆ ನಾನು ಬಹಿರಂಗ ಸವಾಲು ಹಾಕುತ್ತೇನೆ. ಅವರು ಬರಲಿ ಅವರ ಜೊತೆ ಬಿಜೆಪಿಯವರು ಬರಲಿ ನಾವು ಉತ್ತರ ಕೊಡುತ್ತೇವೆ ಎಂದರು.ಜಯದೇವ ಆಸ್ಪತ್ರೆ, ಮಹಾರಾಣಿ ಕಾಲೇಜು ನಿರ್ಮಾಣ, ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಆಸ್ಪತ್ರೆ ಕಟ್ಟಡಗಳೇ ಸಿದ್ದರಾಮಯ್ಯ ಅಭಿವೃದ್ಧಿಯ ಸಾಧನೆಗೆ ಸಾಕ್ಷಿಯಾಗಿವೆ ಎಂದರು.
ಬಿಜೆಪಿ ರಾಜಕೀಯ ಪ್ರೇರಿತ ಹೇಳಿಕೆ:
ನಾವೇನು ರಾಮನ ಭಕ್ತರಲ್ಲವೇ. ಬರಿ ಬರೀ ರಾಮ ರಾಮ ಎಂದರೆ ಹೊಟ್ಟೆ ತುಂಬುವುದಿಲ್ಲ. ಸರ್ಕಾರ ಮಾಡಿದ್ದೆಲ್ಲವೂ ತಪ್ಪು ತಪ್ಪು ಎನ್ನುವುದು ಏಕೆ? ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳನ್ನು ಇತ್ಯರ್ಥಗೊಳಿಸುವಂತೆ ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ನೀಡಿದೆ. ಹಾಗಾಗಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪ್ರಕರಣಗಳ ಸಂಬಂಧ ಸರ್ಕಾರ ಇದೀಗ ಕ್ರಮಕೈಗೊಂಡಿದೆ ಎಂದರು.
ಇದೇ ಹಿನ್ನೆಲೆಯಲ್ಲಿ ಶ್ರೀಕಾಂತ್ ಪೂಜಾರಿಯ ಬಂಧನವಾಗಿದೆ. ಆದರೆ, ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ಹಾಸ್ಯಾಸ್ಪದ ಎಂದು ಅವರು ಹೇಳಿದರು.