ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ರಕ್ಷಾ ರಾಮಯ್ಯಗೆ ಟಿಕೆಟ್?
ಲೋಕಸಭಾ ಚುನಾವಣೆ ಘೋಷಣೆಗೂ ಮೊದಲು ಹಾಗೂ ಆನಂತರ ಸಹ ಮೊಯ್ಲಿಗಿಂತ ಎಐವೈಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಹೆಸರು ಮುನ್ನೆಲೆಗೆ ಬಂದಿತ್ತು. ಈ ಬಾರಿ 50 ವರ್ಷದೊಳಗಿನ ಮತ್ತು ಯುವಕರಿಗೆ ಟಿಕೆಟ್ ನೀಡ ಬೇಕು ಎಂದು ರಾಹುಲ್ ಗಾಂಧಿ ತೀರ್ಮಾನಿಸಿದ್ದರಿಂದ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ರಕ್ಷಾರಾಮಯ್ಯ ಪರ ಒಲವು ತೋರಿದ್ದರಿಂದ ಅವರಿಗೇ ಬಹುತೇಕ ಟಿಕಟ್ ಎಂದು ತೀರ್ಮಾನವಾಗಿತ್ತು. ಆದರೆ ಹಲವು ದಿನಗಳಿಂದ ಮೊಯ್ಲಿ ದೆಹಲಿ ಮಟ್ಟದಲ್ಲಿ ಟಿಕೆಟ್ಗೆ ಕಸರತ್ತು ನಡೆಸುತ್ತಿರುವುದರಿಂದ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಅಂತಿಮ ಅಭ್ಯರ್ಥಿ ಆಯ್ಕೆ ಮಾಡುವುದು ಕಾಂಗ್ರೆಸ್ ವರಿಷ್ಠರಿಗೆ ಸವಾಲಾಗಿದೆ. ರಾಜ್ಯದಲ್ಲಿ ಹಿರಿಯ ತಲೆಗಳಿಗೆ ಕೊಕ್ ಕೊಡಲಾಗಿದೆ. ಇದರಿಂದ ಎಚ್ಚೆತ್ತು ಕೊಂಡಿರುವ ಮೊಯ್ಲಿ ಇದು ನನ್ನ ಕೊನೆಯ ಚುನಾವಣೆ, ಚಿಕ್ಕಬಳ್ಳಾಪುರ ಟಿಕೆಟ್ ನನಗೆ ಬೇಕೆಂದು ಹಠ ಹಿಡಿದು ಸೋನಿಯಾಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮೂಲಕ ಒತ್ತಡ ಹೇರುತ್ತಿದ್ದಾರೆ. ಇದರಿಂದಾಗಿ ರಕ್ಷಾ ರಾಮಯ್ಯ ಹೆಸರು ಅಂತಿಮಗೊಳ್ಳುವುದಕ್ಕೆ ತಡವಾಗಿದೆ. ಶಿವಶಂಕರ ರೆಡ್ಡಿ ಅಸಮಾಧಾನಈ ನಡುವೆ ಗೌರಿಬಿದನೂರು ಮಾಜಿ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಸಹ ತಮ್ಮನ್ನು ಪರಿಗಣಿಸುವಂತೆ ಒತ್ತಡ ಹೇರುತ್ತಿದ್ದಾರೆ. ಇದರೊಂದಿಗೆ ಕಳೆದ ಐದು ವಿಧಾನಸಭಾ ಚುನಾವಣೆಗಳಲ್ಲಿ ಸೋಲಿಲ್ಲದ ಸರದಾರನಾಗಿದ್ದೆ. ಆರನೇ ಬಾರಿ ತ್ತಿದ್ದೇನೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಈಗ ಬದಲಾಗಿದ್ದಾರೆ. ಸ್ಥಳೀಯನಾದ ತಮ್ಮನ್ನು ಕಡೆಗಣಿಸುತ್ತಿದ್ದಾರೆ. ನನ್ನವಿರುಧ್ಧ ಗೆದ್ದಿರುವ ಪಕ್ಷೇತರ ಶಾಸಕರಿಗೆ ಮಣೆ ಹಾಕುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.