ಮುಡಾ ಸೈಟ್‌ ಕೇಸ್‌ : ಲೋಕಾಯುಕ್ತದಿಂದ ರಾಯಚೂರು ಕಾಂಗ್ರೆಸ್ ಸಂಸದ ಕುಮಾರ ನಾಯಕ್‌ ವಿಚಾರಣೆ

Published : Oct 20, 2024, 07:52 AM IST
Kumar  Nayak

ಸಾರಾಂಶ

ರಾಯಚೂರು ಕ್ಷೇತ್ರದ ಕಾಂಗ್ರೆಸ್ ಸಂಸದ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಜಿ.ಕುಮಾರ್ ನಾಯ್ಕ್ ಅವರು ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಗೆ ಶನಿವಾರ ತೆರಳಿ, ಮುಡಾ ನಿವೇಶನ ಹಂಚಿಕೆ ಸಂಬಂಧ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಮೈಸೂರು : ರಾಯಚೂರು ಕ್ಷೇತ್ರದ ಕಾಂಗ್ರೆಸ್ ಸಂಸದ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಜಿ.ಕುಮಾರ್ ನಾಯ್ಕ್ ಅವರು ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಗೆ ಶನಿವಾರ ತೆರಳಿ, ಮುಡಾ ನಿವೇಶನ ಹಂಚಿಕೆ ಸಂಬಂಧ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಮುಡಾ ನಿವೇಶನ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವ ಲೋಕಾಯುಕ್ತ ಪೊಲೀಸರು, ಮೈಸೂರಿನ ಆಗಿನ ಜಿಲ್ಲಾಧಿಕಾರಿ ಜಿ. ಕುಮಾರ್ ನಾಯ್ಕ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದರು. ಲೋಕಾಯುಕ್ತ ಪೊಲೀಸರ ನೋಟಿಸ್ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ಜಿ.ಕುಮಾರ್ ನಾಯ್ಕ್ ಅವರು, ಸುಮಾರು ಮೂರು ತಾಸು ವಿಚಾರಣೆ ಎದುರಿಸಿದರು.

ಕೆಸರೆಯ ವಿವಾದಿತ ಜಮೀನು ಭೂಪರಿವರ್ತನೆ ಮಾಡಿದ ಸಂಬಂಧ ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್‌ ನೇತೃತ್ವದ ಲೋಕಾಯುಕ್ತ ಪೊಲೀಸರ ತಂಡ ಜಿ.ಕುಮಾರ್ ನಾಯ್ಕ್ ಅವರನ್ನು ಈ ವೇಳೆ ಪ್ರಶ್ನೆಗಳನ್ನು ಕೇಳಲಾಯಿತು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!
ಉತ್ತರ ಕರ್ನಾಟಕಕ್ಕೆ ₹15,000 ಕೋಟಿ : ಅಜಯ್‌