ಭೀಕರ ಅಪಘಾತದಲ್ಲಿ ಮೃತಪಟ್ಟವರ ಅಂತ್ಯಕ್ರಿಯೆ

KannadaprabhaNewsNetwork | Published : Oct 17, 2023 12:30 AM

ಸಾರಾಂಶ

ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚಂಗಂನಲ್ಲಿ ಭಾನುವಾರ ಅಪಘಾತದಲ್ಲಿ ಮೃತಪಟ್ಟಿದ್ದ ಒಂದೇ ಕುಟುಂಬದ 7 ಮಂದಿಯ ಅಂತ್ಯಕ್ರಿಯೆ ತುಮಕೂರಿನಲ್ಲಿ ನೆರವೇರಿತು.
ತುಮಕೂರು: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚಂಗಂನಲ್ಲಿ ಭಾನುವಾರ ಅಪಘಾತದಲ್ಲಿ ಮೃತಪಟ್ಟಿದ್ದ ಒಂದೇ ಕುಟುಂಬದ 7 ಮಂದಿಯ ಅಂತ್ಯಕ್ರಿಯೆ ತುಮಕೂರಿನಲ್ಲಿ ನೆರವೇರಿತು. ಕಳೆದ ಶನಿವಾರ ಪ್ರವಾಸಕ್ಕೆಂದು ಒಂದೇ ಕುಟುಂಬದ 8 ಮಂದಿ ತಮಿಳುನಾಡಿನ ತಿರುವಣ್ಣಾಮಲೈಗೆ ತೆರಳಿ ವಾಪಸ್‌ ಬರುವ ವೇಳೆ ಚಂಗಂನಲ್ಲಿ ಈ ಅಪಘಾತ ಸಂಭವಿಸಿದ್ದು, ತುಮಕೂರಿನ ಜಯನಗರದ ನಿವಾಸಿಗಳಾದ ಚನ್ನಪ್ಪ, ಮಲ್ಲರ್‌, ಮಣಿಕಂಠ, ಹೇಮಂತ್‌ ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. ಇನ್ನೊಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸೋಮವಾರ ಮೃತರ ಪಾರ್ಥಿವ ಶರೀರ ತುಮಕೂರಿಗೆ ಆಗಮಿಸಿದ್ದು, ಅಂತ್ಯಕ್ರಿಯೆ ನೆರವೇರಿತು. ಘಟನೆಯಿಂದಾಗಿ ಮೃತರ ಸಂಬಂಧಿಕರೆಲ್ಲ ದಿಗ್ಭ್ರಾಂತರಾಗಿದ್ದಾರೆ. ಅಂತಿಮ ದರ್ಶನ ಮಾಡಿದ ಕಾಂಗ್ರೆಸ್‌ ಮುಖಂಡ ಮುರಳೀಧರ ಹಾಲಪ್ಪ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು.

Share this article