ಚುನಾವಣೆಗೆ 3 ದಿನ ಬಾಕಿ:ಛತ್ತೀಸ್‌ಗಢದಲ್ಲಿ ನಕ್ಸಲರಿಂದಬಿಜೆಪಿ ನಾಯಕನ ಕೊಲೆ

KannadaprabhaNewsNetwork |  
Published : Nov 05, 2023, 01:20 AM IST

ಸಾರಾಂಶ

ಛತ್ತೀಸ್‌ಗಢದಲ್ಲಿ ಚುನಾವಣೆಗೆ ಮೂರು ದಿನ ಇರುವಾಗಲೇ ಬಿಜೆಪಿ ಮುಖಂಡರೊಬ್ಬರನ್ನು ನಕ್ಸಲರು ಬರ್ಬರವಾಗಿ ಕೊಲೆ ಮಾಡಿದ ಘಟನೆ ಶನಿವಾರ ನಡೆದಿದೆ.

ರಾಯಪುರ: ಛತ್ತೀಸ್‌ಗಢದಲ್ಲಿ ಚುನಾವಣೆಗೆ ಮೂರು ದಿನ ಇರುವಾಗಲೇ ಬಿಜೆಪಿ ಮುಖಂಡರೊಬ್ಬರನ್ನು ನಕ್ಸಲರು ಬರ್ಬರವಾಗಿ ಕೊಲೆ ಮಾಡಿದ ಘಟನೆ ಶನಿವಾರ ನಡೆದಿದೆ. ಮೃತ ರತನ್‌ ದುಬೆ ಜಿಲ್ಲಾ ಪಂಚಾಯ್ತಿಯ ಸದಸ್ಯರಾಗದ್ದು, ನಾರಾಯಣಪುರದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿದ್ದರು. ಕೌಶಲ್‌ನರ್‌ನಲ್ಲಿ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿದ್ದರು. ಈ ವೇಳೆ ಇವರ ಮೇಲೆ ದಾಳಿ ನಡೆದಿದೆ. ಘಟನೆ ಬಳಿಕ ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು. ರಾಜ್ಯದಲ್ಲಿ ನ.7ಕ್ಕೆ ಮೊದಲ ಹಂತದ ವಿಧಾನಸಭೆ ಚುನಾವಣೆ ನಡೆಯಲಿದೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಕಾಂಗ್ರೆಸ್ಸಲ್ಲಿ ಯತೀಂದ್ರ ಕಿಚ್ಚು : '5 ವರ್ಷವೂ ನಮ್ಮ ತಂದೆ ಸಿಎಂ, ಇದು ಈಗ ಸೆಟಲ್ಡ್‌ ವಿಚಾರ'
ಯತೀಂದ್ರ ಅವರೇ ನಮ್ಮ ಹೈಕಮಾಂಡ್‌ : ಡಿ.ಕೆ.ಶಿವಕುಮಾರ್‌ ಟಾಂಗ್‌