ಪ್ರಧಾನಿ ಆಗುವ ಯಾವುದೇ ಉದ್ದೇಶವಿಲ್ಲ: ಕೇಜ್ರಿವಾಲ್‌

KannadaprabhaNewsNetwork |  
Published : May 23, 2024, 01:13 AM ISTUpdated : May 23, 2024, 04:25 AM IST
 ಕೇಜ್ರಿವಾಲ್‌ | Kannada Prabha

ಸಾರಾಂಶ

ಇಂಡಿಯಾ ಕೂಟ ಗೆದ್ದರೆ ತಮಗೆ ಪ್ರಧಾನ ಮಂತ್ರಿ ಆಗುವ ಉದ್ದೇಶ ಇಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ.

ನವದೆಹಲಿ: ಇಂಡಿಯಾ ಕೂಟ ಗೆದ್ದರೆ ತಮಗೆ ಪ್ರಧಾನ ಮಂತ್ರಿ ಆಗುವ ಉದ್ದೇಶ ಇಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ.

ಪಿಟಿಐ ಸಂದರ್ಶನದಲ್ಲಿ ಮಾತನಾಡಿದ ಅವರು,‘ನನಗೆ ಪ್ರಧಾನಿ ಆಗುವ ಯಾವುದೇ ಉದ್ದೇಶವಿಲ್ಲ. ಏಕೆಂದರೆ ಈ ಚುನಾವಣೆಯಲ್ಲಿ ಆಪ್‌ ಕೇವಲ 22 ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಿದೆ. ನಮ್ಮದು ಚಿಕ್ಕ ಪಕ್ಷ’ ಎಂದರು.

ಅಲ್ಲದೆ, ‘ನಾವು ಈ ಬಗ್ಗೆ ಚುನಾವಣೆ ಬಳಿಕ ಸಭೆ ನಡೆಸಿ, ಒಮ್ಮತದಿಂದ ಪ್ರಧಾನಿಯನ್ನು ಆಯ್ಕೆ ಮಾಡಲಿದ್ದೇವೆ’ ಎಂದು ಸ್ಪಷ್ಟಪಡಿಸಿದರು.

‘ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲನುಭವಿಸಲಿದೆ. ಒಂದು ವೇಳೆ ಬಿಜೆಪಿ ಗೆದ್ದರೆ ದೇಶದಲ್ಲಿ ಸರ್ವಾಧಿಕಾರ ತಲೆ ಎತ್ತಲಿದೆ. ಚುನಾವಣೆಗಳು ರದ್ದಾಗಲಿದೆ. ಒಂದು ವೇಳೆ ಚುನಾವಣೆ ನಡೆದರೆ ಅದು ರಷ್ಯಾ, ಚೀನಾದಲ್ಲಿ ನಡೆಯುವ ರೀತಿ ಇರುತ್ತದೆ’ ಎಂದು ಕಿಡಿಕಾರಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಮತಚೋರಿ ಹೆಸರಲ್ಲಿ ಸುಳ್ಳು ಪ್ರಚಾರ ತಪ್ಪು: ದೇವೇಗೌಡ
ದೆಹಲಿಯಲ್ಲೂ ಸಿದ್ದು ಸಿದ್ದು, ಡಿಕೆ ಡಿಕೆ ಸದ್ದು