ಸರ್ಜಿಕಲ್‌ ದಾಳಿ ಆಗಿದ್ದೇ ಅನುಮಾನ: ತೆಲಂಗಾಣ ಸಿಎಂ

KannadaprabhaNewsNetwork |  
Published : May 12, 2024, 01:16 AM ISTUpdated : May 12, 2024, 06:22 AM IST
ತೆಲಂಗಾಣ ಸಿಎಂ | Kannada Prabha

ಸಾರಾಂಶ

 ಯೋಧರನ್ನು ಬಲಿ ಪಡೆದ ಪುಲ್ವಾಮಾ ಉಗ್ರ ದಾಳಿಯ ಬಳಿಕ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸಿದ ಸರ್ಜಿಕಲ್‌ ದಾಳಿಯ ಕುರಿತು ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಅನುಮಾನ ವ್ಯಕ್ತಪಡಿಸಿದ್ದಾರೆ

ಹೈದರಾಬಾದ್‌: 40 ಯೋಧರನ್ನು ಬಲಿ ಪಡೆದ ಪುಲ್ವಾಮಾ ಉಗ್ರ ದಾಳಿಯ ಬಳಿಕ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸಿದ ಸರ್ಜಿಕಲ್‌ ದಾಳಿಯ ಕುರಿತು ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಅನುಮಾನ ವ್ಯಕ್ತಪಡಿಸಿದ್ದಾರೆ. 

ವಾಸ್ತವವಾಗಿ ಇಂಥದ್ದೊಂದು ಘಟನೆ ನಡೆದ ಬಗ್ಗೆ ಯಾರಿಗೂ ಗೊತ್ತಿಲ್ಲ ಎಂದು ಹೇಳಿದ್ದಾರೆ.ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇವಂತ್‌ ರೆಡ್ಡಿ, ‘ಪುಲ್ವಾಮಾ ದಾಳಿ ನಡೆದಾಗ ನೀವೇನು ಮಾಡುತ್ತಿದ್ದಿರಿ? ಪುಲ್ವಾಮಾ ಘಟನೆ ಏಕೆ ನಡೆಯಿತು? ಅದನ್ನು ನಡೆಯಲು ನೀವು ಅವಕಾಶ ಕೊಟ್ಟಿದ್ದಾದರೂ ಏಕೆ? ದೇಶದ ಆಂತರಿಕ ಭದ್ರತೆ ಬಗ್ಗೆ ನೀವೇನು ಮಾಡುತ್ತಿದ್ದಿರಿ? ನೀವು ಐಬಿ, ರಾ ಮೊದಲಾದ ಸಂಸ್ಥೆಗಳನ್ನು ಏಕೆ ಬಳಸಲಿಲ್ಲ? ಅದು ನಿಮ್ಮ ವೈಫಲ್ಯ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

ಜೊತೆಗೆ ‘ವಾಸ್ತವವಾಗಿ ಸರ್ಜಿಕಲ್‌ ದಾಳಿ ನಡೆದಿರುವ ಬಗ್ಗೆ ಯಾರಿಗೂ ಗೊತ್ತಿಲ್ಲ’ ಎಂದು ಪುಲ್ವಾಮಾ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ನಡೆಸಿದ ಸರ್ಜಿಕಲ್‌ ದಾಳಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಶಕ್ತಿ ಯೋಜನೆ ಫಲಾನುಭವಿ ಸ್ತ್ರೀಯರಿಗೆ ಸ್ಮಾರ್ಟ್‌ಕಾರ್ಡ್‌
ಎಸ್‌ಐಆರ್‌ಗೆ ಸಂಪುಟದಲ್ಲಿ ತೀವ್ರ ವಿರೋಧ - ವರದಿ ನೀಡಲು ಕಾನೂನು